Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

- Advertisement -
- Advertisement -

ದುಬೈಗೆ ತೆರಳುತ್ತಿದ್ದ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರೆ. ಜೊತೆಗೆ ನಟಿಗೆ ದೇಶ ಬಿಟ್ಟು ಹೊರ ಹೋಗದಂತೆ ಸೂಚನೆ ನೀಡಲಾಗಿದೆ.

ಸುಕೇಶ್‌ ಚಂದ್ರಶೇಖರ್‌ ಮತ್ತು ಶ್ರೀಲಂಕಾ ಮೂಲದ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ನಡುವೆ ಅಕ್ರಮ ಹಣ ವರ್ಗಾವಣೆ ಆಗಿದೆ. ಫರ್ನಾಂಡಿಸ್‌ ಅವರು ಸುಕೇಶ್‌ ಅವರಿಂದ 52 ಲಕ್ಷ ರೂ. ಮೌಲ್ಯದ ಕುದುರೆ, 9 ಲಕ್ಷ ರೂ. ಮೌಲ್ಯದ ಪರ್ಷಿಯಾ ದೇಶದ ಬೆಕ್ಕು ಸೇರಿದಂತೆ 10 ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ಪಡೆದಿದ್ದಾರೆ ಎಂಬುದರ ಬಗ್ಗೆ ಇಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ. ಆ ಹಿನ್ನೆಲೆಯಲ್ಲಿ ಜ್ಯಾಕ್ವೆಲಿನ್‌ರ ವಿರುದ್ಧ “ಲುಕ್‌ ಔಟ್‌ ಸರ್ಕ್ಯುಲರ್ ‘ ಜಾರಿಗೊಳಿಸಲಾಗಿದ್ದು, ಅವರನ್ನು ಈ ವಿಚಾರಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿತ್ತು.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಜಾಕ್ವೆಲಿನ್ ಫರ್ನಾಂಡಿಸ್ ಹಿನ್ನೆಲೆ

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಮೂಲತಃ ಶ್ರೀಲಂಕಾದವರು. ಸುದ್ದಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು, ಅಲಾದಿನ್ (2009) ಚಿತ್ರದ ಮೂಲಕ ಹಿಂದಿ ಸಿನಿಮಾ ರಂಗಕ್ಕೆ ಕಾಲಿಟ್ಟರು. ಜಾಕ್ವೆಲಿನ್ 2006 ರಲ್ಲಿ ಮಿಸ್ ಯೂನಿವರ್ಸ್ ಶ್ರೀಲಂಕಾ ಕಿರೀಟ ಧರಿಸಿದ್ದು, ಅದೇ ವರ್ಷ ವಿಶ್ವ ಸುಂದರಿ ಸ್ಪರ್ಧೆಯಲ್ಲಿಯೂ ಶ್ರೀಲಂಕಾವನ್ನು ಪ್ರತಿನಿಧಿಸಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ಹಿಂದಿ ಚಿತ್ರೋದ್ಯಮದಲ್ಲಿ ಸಕ್ರಿಯವಾಗಿರುವ ಅವರು ಮರ್ಡರ್‌ 2, ಕಿಕ್, ರಾಯ್, ಡ್ರೈವ್, ಜುಡ್ವಾ 2, ಹೌಸ್‌ಫುಲ್ 2, ಮತ್ತು ಮಿಸಸ್ ಸೀರಿಯಲ್ ಕಿಲ್ಲರ್‌ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಬ್ರಿಟಿಷ್ ಚಲನಚಿತ್ರ ಡೆಫಿನಿಷನ್ ಆಫ್ ಫಿಯರ್, ಶ್ರೀಲಂಕಾದ ಸಿನಿಮಾ ಇಂಡಸ್ಟ್ರಿಯಲ್ಲೂ ಅವರು ಕೆಲಸ ಮಾಡಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಪ್ರಸ್ತುತ ಬಚ್ಚನ್ ಪಾಂಡೆ, ಅಟ್ಯಾಕ್, ಸರ್ಕಸ್, ರಾಮ್ ಸೇತು, ಪವನ್ ಕಲ್ಯಾಣ್ ಅಭಿನಯದ ತೆಲುಗು ಚಿತ್ರ ಹರಿ ಹರ ವೀರ ಮಲ್ಲು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ಕನ್ನಡ ಸಿನಿಮಾ ಸುದೀಪ್ ಅಭಿನಯದ ವಿಕ್ರಾಂತ್ ರೋಣಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಏಕೆ ವಶಕ್ಕೆ ಪಡೆಯಲಾಗಿದೆ…?

ಜಾಕ್ವೆಲಿನ್ ಫೆರ್ನಾಂಡಿಸ್ ವಿರುದ್ಧ ಜಾರಿ ನಿರ್ದೇಶನಾಲಯವು ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದೆ. ಹೀಗಾಗಿ, ಅವರನ್ನು ಭಾನುವಾರ ಮುಂಬೈನಲ್ಲಿ ವಶಕ್ಕೆ ಪಡೆಯಲಾಗಿದೆ. ಸುಕೇಶ್ ಚಂದ್ರಶೇಖರ್ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡಿಸ್‌ ಅವರ ಹೆಸರು ಕೇಳಿಬಂದಿದ್ದು, ಅದಕ್ಕೆ ಕೆಲವು ಸಾಕ್ಷಿಗಳು ದೊರೆತಿವೆ. ಜಾಕ್ವೆಲಿನ್ ಅವರನ್ನು ದೆಹಲಿಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದು, ತನಿಖೆ ಮುಗಿಯುವವರೆಗೂ ಜಾಕ್ವೆಲಿನ್ ಅವರು ದೇಶವನ್ನು ತೊರೆಯುವಂತಿಲ್ಲ.

ಪ್ರಕರಣವೇನು?

ಚುನಾವಣಾ ಆಯೋಗವನ್ನು ಒಳಗೊಂಡಿರುವ ಲಂಚದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ವಿರುದ್ಧ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣವಿದೆ. ಸುಕೇಶ್ ಚಂದ್ರಶೇಖರ್ ಮತ್ತು ಇತರರ ವಿರುದ್ಧ ಇಡಿ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪದ ಪ್ರಕಾರ, ತಿಹಾರ್ ಜೈಲಿನಲ್ಲಿ ಸುಕೇಶ್ ಶಿಕ್ಷೆ ಅನುಭವಿಸುತ್ತಿದ್ದಾಗ, ಉದ್ಯಮಿಯೊಬ್ಬರ ಪತ್ನಿಯಿಂದ ಹಣ ಸುಲಿಗೆ ಮಾಡಿದ್ದ. ಅಲ್ಲದೆ, ಈ ವೇಳೆ ನಟಿ ಜಾಕ್ವೆಲಿನ್ ಅವರು ಸುಕೇಶ್ ಜೊತೆ ಹಣದ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜಾಕ್ವೆಲಿನ್‌ಗೆ ಸುಕೇಶ್ ಉಡುಗೊರೆಗಳನ್ನು ನೀಡಿದ್ದಾರೆ ಎಂದು ಇಡಿ ಹೇಳಿದೆ. ಜಾಕ್ವೆಲಿನ್‌ ಜೊತೆಗೆ ನಟಿ ನೋರಾ ಫತೇಹಿ ಅವರನ್ನೂ ಇಡಿ ವಿಚಾರಣೆ ಕರೆದಿತ್ತು.


ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...