Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

- Advertisement -
- Advertisement -

ದುಬೈಗೆ ತೆರಳುತ್ತಿದ್ದ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರೆ. ಜೊತೆಗೆ ನಟಿಗೆ ದೇಶ ಬಿಟ್ಟು ಹೊರ ಹೋಗದಂತೆ ಸೂಚನೆ ನೀಡಲಾಗಿದೆ.

ಸುಕೇಶ್‌ ಚಂದ್ರಶೇಖರ್‌ ಮತ್ತು ಶ್ರೀಲಂಕಾ ಮೂಲದ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ನಡುವೆ ಅಕ್ರಮ ಹಣ ವರ್ಗಾವಣೆ ಆಗಿದೆ. ಫರ್ನಾಂಡಿಸ್‌ ಅವರು ಸುಕೇಶ್‌ ಅವರಿಂದ 52 ಲಕ್ಷ ರೂ. ಮೌಲ್ಯದ ಕುದುರೆ, 9 ಲಕ್ಷ ರೂ. ಮೌಲ್ಯದ ಪರ್ಷಿಯಾ ದೇಶದ ಬೆಕ್ಕು ಸೇರಿದಂತೆ 10 ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ಪಡೆದಿದ್ದಾರೆ ಎಂಬುದರ ಬಗ್ಗೆ ಇಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ. ಆ ಹಿನ್ನೆಲೆಯಲ್ಲಿ ಜ್ಯಾಕ್ವೆಲಿನ್‌ರ ವಿರುದ್ಧ “ಲುಕ್‌ ಔಟ್‌ ಸರ್ಕ್ಯುಲರ್ ‘ ಜಾರಿಗೊಳಿಸಲಾಗಿದ್ದು, ಅವರನ್ನು ಈ ವಿಚಾರಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿತ್ತು.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಜಾಕ್ವೆಲಿನ್ ಫರ್ನಾಂಡಿಸ್ ಹಿನ್ನೆಲೆ

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಮೂಲತಃ ಶ್ರೀಲಂಕಾದವರು. ಸುದ್ದಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು, ಅಲಾದಿನ್ (2009) ಚಿತ್ರದ ಮೂಲಕ ಹಿಂದಿ ಸಿನಿಮಾ ರಂಗಕ್ಕೆ ಕಾಲಿಟ್ಟರು. ಜಾಕ್ವೆಲಿನ್ 2006 ರಲ್ಲಿ ಮಿಸ್ ಯೂನಿವರ್ಸ್ ಶ್ರೀಲಂಕಾ ಕಿರೀಟ ಧರಿಸಿದ್ದು, ಅದೇ ವರ್ಷ ವಿಶ್ವ ಸುಂದರಿ ಸ್ಪರ್ಧೆಯಲ್ಲಿಯೂ ಶ್ರೀಲಂಕಾವನ್ನು ಪ್ರತಿನಿಧಿಸಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ಹಿಂದಿ ಚಿತ್ರೋದ್ಯಮದಲ್ಲಿ ಸಕ್ರಿಯವಾಗಿರುವ ಅವರು ಮರ್ಡರ್‌ 2, ಕಿಕ್, ರಾಯ್, ಡ್ರೈವ್, ಜುಡ್ವಾ 2, ಹೌಸ್‌ಫುಲ್ 2, ಮತ್ತು ಮಿಸಸ್ ಸೀರಿಯಲ್ ಕಿಲ್ಲರ್‌ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಬ್ರಿಟಿಷ್ ಚಲನಚಿತ್ರ ಡೆಫಿನಿಷನ್ ಆಫ್ ಫಿಯರ್, ಶ್ರೀಲಂಕಾದ ಸಿನಿಮಾ ಇಂಡಸ್ಟ್ರಿಯಲ್ಲೂ ಅವರು ಕೆಲಸ ಮಾಡಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಪ್ರಸ್ತುತ ಬಚ್ಚನ್ ಪಾಂಡೆ, ಅಟ್ಯಾಕ್, ಸರ್ಕಸ್, ರಾಮ್ ಸೇತು, ಪವನ್ ಕಲ್ಯಾಣ್ ಅಭಿನಯದ ತೆಲುಗು ಚಿತ್ರ ಹರಿ ಹರ ವೀರ ಮಲ್ಲು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ಕನ್ನಡ ಸಿನಿಮಾ ಸುದೀಪ್ ಅಭಿನಯದ ವಿಕ್ರಾಂತ್ ರೋಣಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಏಕೆ ವಶಕ್ಕೆ ಪಡೆಯಲಾಗಿದೆ…?

ಜಾಕ್ವೆಲಿನ್ ಫೆರ್ನಾಂಡಿಸ್ ವಿರುದ್ಧ ಜಾರಿ ನಿರ್ದೇಶನಾಲಯವು ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದೆ. ಹೀಗಾಗಿ, ಅವರನ್ನು ಭಾನುವಾರ ಮುಂಬೈನಲ್ಲಿ ವಶಕ್ಕೆ ಪಡೆಯಲಾಗಿದೆ. ಸುಕೇಶ್ ಚಂದ್ರಶೇಖರ್ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡಿಸ್‌ ಅವರ ಹೆಸರು ಕೇಳಿಬಂದಿದ್ದು, ಅದಕ್ಕೆ ಕೆಲವು ಸಾಕ್ಷಿಗಳು ದೊರೆತಿವೆ. ಜಾಕ್ವೆಲಿನ್ ಅವರನ್ನು ದೆಹಲಿಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದು, ತನಿಖೆ ಮುಗಿಯುವವರೆಗೂ ಜಾಕ್ವೆಲಿನ್ ಅವರು ದೇಶವನ್ನು ತೊರೆಯುವಂತಿಲ್ಲ.

ಪ್ರಕರಣವೇನು?

ಚುನಾವಣಾ ಆಯೋಗವನ್ನು ಒಳಗೊಂಡಿರುವ ಲಂಚದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ವಿರುದ್ಧ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣವಿದೆ. ಸುಕೇಶ್ ಚಂದ್ರಶೇಖರ್ ಮತ್ತು ಇತರರ ವಿರುದ್ಧ ಇಡಿ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪದ ಪ್ರಕಾರ, ತಿಹಾರ್ ಜೈಲಿನಲ್ಲಿ ಸುಕೇಶ್ ಶಿಕ್ಷೆ ಅನುಭವಿಸುತ್ತಿದ್ದಾಗ, ಉದ್ಯಮಿಯೊಬ್ಬರ ಪತ್ನಿಯಿಂದ ಹಣ ಸುಲಿಗೆ ಮಾಡಿದ್ದ. ಅಲ್ಲದೆ, ಈ ವೇಳೆ ನಟಿ ಜಾಕ್ವೆಲಿನ್ ಅವರು ಸುಕೇಶ್ ಜೊತೆ ಹಣದ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜಾಕ್ವೆಲಿನ್‌ಗೆ ಸುಕೇಶ್ ಉಡುಗೊರೆಗಳನ್ನು ನೀಡಿದ್ದಾರೆ ಎಂದು ಇಡಿ ಹೇಳಿದೆ. ಜಾಕ್ವೆಲಿನ್‌ ಜೊತೆಗೆ ನಟಿ ನೋರಾ ಫತೇಹಿ ಅವರನ್ನೂ ಇಡಿ ವಿಚಾರಣೆ ಕರೆದಿತ್ತು.


ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...