Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: 5 ಗಂಟೆಗಳ ಕಾಲ ಹೇಮಂತ್ ಸೊರೇನ್ ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: 5 ಗಂಟೆಗಳ ಕಾಲ ಹೇಮಂತ್ ಸೊರೇನ್ ವಿಚಾರಣೆ

- Advertisement -
- Advertisement -

ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಶನಿವಾರ ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ‘ಇದು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ’ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಆರೋಪಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಯು ಹೇಮಂತ್ ಸೊರೇನ್ ಅವರನ್ನು ಮತ್ತೊಂದು ದಿನ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ವಿಚಾರಣಾ ದಿನಾಂಕವನ್ನು ನಂತರ ನಿರ್ಧರಿಸಲಾಗುವುದು ಎಂದು ಇಡಿ ಮೂಲಗಳಿಂದ ತಿಳಿದುಬಂದಿದೆ. ಭಾರೀ ಭದ್ರತಾ ನಿಯೋಜನೆಯ ನಡುವೆ ಇಡಿ ಅಧಿಕಾರಿಗಳು ರಾಜ್ಯ ರಾಜಧಾನಿ ರಾಂಚಿಯ ಸಿಎಂ ಅವರ ಕಂಕೆ ರಸ್ತೆಯ ನಿವಾಸದಿಂದ ವಿಚಾರಣೆ ಮುಗಿಸಿ ನಿರ್ಗಮಿಸಿದರು.

‘ಅವರು (ಕೇಂದ್ರ) ನಮ್ಮ ವಿರುದ್ಧ ಷಡ್ಯಂತ್ರಗಳನ್ನು ಹೆಣೆಯುತ್ತಿದ್ದಾರೆ. ನಾವು ಅವರ ಷಡ್ಯಂತ್ರಗಳನ್ನು ಚೂರುಚೂರು ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಯನ್ನು ಮಾಡುತ್ತಿದ್ದೇವೆ. ಅವರ ಶವಪೆಟ್ಟಿಗೆಗೆ ಅಂತಿಮ ಮೊಳೆ ಹಾಕುವ ಸಮಯ ಬಂದಿದೆ. ಹೇಮಂತ್ ಸೊರೆನ್ ಯಾವಾಗಲೂ ಕಾರ್ಮಿಕರೊಂದಿಗೆ ನಿಲ್ಲುತ್ತಾರೆ’ ಎಂದು ಜೆಎಂಎಂನ ಕಾರ್ಯಕಾರಿ ಅಧ್ಯಕ್ಷರು ವಿಚಾರಣೆಯ ನಂತರ ಬೆಂಬಲಿಗರಿಗೆ ತಿಳಿಸಿದರು.

ಸೊರೇನ್ ಅವರು ಮೊದಲ ಏಳು ಸಮನ್ಸ್‌ಗಳನ್ನು ನಿರ್ಲಕ್ಷಿಸಿದ್ದರು. ನಂತರ, ಎಂಟನೇ ಬಾರಿಗೆ ತನಿಖಾ ಸಂಸ್ಥೆ ಅವರನ್ನು ಕರೆಸಿದಾಗ ವಿಚಾರಣೆಗೆ ತಮ್ಮ ಒಪ್ಪಿಗೆಯನ್ನು ಸೂಚಿಸಿ, ದಿನ ಹಾಗೂ ಸ್ಥಳ ನಿಗದಿ ಮಾಡಿದ್ದರು.

‘ನಿಮ್ಮ ಬೆಂಬಲಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ; ನಾನು ಅವರಿಗೆ ಭಯಪಡುವುದಿಲ್ಲ ಅಥವಾ ಭಾಗುವುದಿಲ್ಲ ಎಂದು ನಿಮಗೆ ಭರವಸೆ ನೀಡಲು ಬಯಸುತ್ತೇನೆ. ಯಾವುದೇ ಅಡೆತಡೆಗಳನ್ನು ಲೆಕ್ಕಿಸದೆ ನಾವು ಸುಳ್ಳಿಗೆ ತಲೆಬಾಗುವುದಿಲ್ಲ’ ಎಂದು ಅವರು ತಮ್ಮ ಮನೆಯ ಹೊರಗೆ ಮಾಡಿದ ಭಾಷಣದಲ್ಲಿ ಹೇಳಿದರು. ಅಲ್ಲಿ ಇಡಿ ಕ್ರಮವನ್ನು ಪ್ರತಿಭಟಿಸಲು ನೂರಾರು ಜೆಎಂಎಂ ಬೆಂಬಲಿಗರು ಜಮಾಯಿಸಿದ್ದರು.

‘ನಾವು ಪ್ರತಿಪಕ್ಷಗಳ ಷಡ್ಯಂತ್ರದ ಜಾಲವನ್ನು ಬಿಡಿಸುತ್ತಾ ಮುನ್ನಡೆಯುತ್ತಿದ್ದೇವೆ. ನೀವು ಭಯಪಡುವ ಅಗತ್ಯವಿಲ್ಲ. ನಿಮ್ಮ ನೈತಿಕತೆಯನ್ನು ಉನ್ನತ ಮಟ್ಟದಲ್ಲಿ ಇರಿಸಿ. ನಮ್ಮ ಮೇಲೆ ಹಾರಿದ ಮೊದಲ ಬುಲೆಟ್ ಅನ್ನು ನಿಮ್ಮ ನಾಯಕನೇ ತೆಗೆದುಕೊಳ್ಳುತ್ತಾನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ’ ಎಂದು ಸೊರೆನ್ ಹೇಳಿದರು.

ರಾಂಚಿಯ ಬಜ್ರಾ ಪ್ರದೇಶದಲ್ಲಿ 7.16 ಎಕರೆ ವಿಸ್ತೀರ್ಣದ ಜಮೀನಿನ ಮಾಲೀಕತ್ವಕ್ಕೆ ಸಂಬಂಧಿಸಿದ ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿ ಕೇಂದ್ರೀಯ ಏಜೆನ್ಸಿಯ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಸೋರೆನ್ ವಿರುದ್ಧ ತನಿಖೆ ನಡೆಸುತ್ತಿದೆ. ಸೇನಾ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪಿಸಲಾಗಿದೆ. ಆದರೆ, ‘ಪ್ರಕರಣವು ಸ್ಪಷ್ಟವಾಗಿಲ್ಲ ಮತ್ತು ಅವರ ಆಸ್ತಿಯ ವಿವರಗಳು ಈಗಾಗಲೇ ಸಾರ್ವಜನಿಕವಾಗಿವೆ’ ಎಂದು ಸೊರೇನ್ ಸರ್ಕಾರ ಹೇಳಿದೆ.

‘ಇಡಿ ಅಧಿಕಾರಿಗಳ ತಂಡ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಎಂ ನಿವಾಸವನ್ನು ತಲುಪಿತು; ಮಧ್ಯಾಹ್ನ 3 ಗಂಟೆಯ ಸುಮಾರಿಗೆ ವಿಚಾರಣೆ ಆರಂಭಿಸಿದರು’ ಎಂದು ಜಾರ್ಖಂಡ್ ಸರ್ಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘2023 ರಲ್ಲಿ ದಾಖಲಾದ ಜಾರಿ ಪ್ರಕರಣ ಮಾಹಿತಿ ವರದಿಗೆ ಸಂಬಂಧಿಸಿದಂತೆ ಭಾನು ಪ್ರತಾಪ್ ಪ್ರಸಾದ್, ಆಗಿನ ಕಂದಾಯ ಸಬ್ ಇನ್ಸ್ಪೆಕ್ಟರ್ಗಳು ಮತ್ತು ಇತರರನ್ನು ಒಳಗೊಂಡಿರುವ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದೆ. ತನಿಖಾ ಸಂಸ್ಥೆಯು ಈ ವಿಷಯಕ್ಕೆ ಸಂಬಂಧಿಸಿದಂತೆ ಸೊರೇನ್ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದೆ. ಅವರ ಸ್ವಾಧೀನದಲ್ಲಿರುವ ಆಸ್ತಿಗಳ ವಿವರಗಳನ್ನು ಪಡೆಯುತ್ತಿದೆ’ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಛವಿ ರಂಜನ್, ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಮತ್ತು ರಾಂಚಿಯ ಉಪ ಆಯುಕ್ತ ಭಾನು ಪ್ರತಾಪ್ ಪ್ರಸಾದ್ ಮತ್ತು ಉದ್ಯಮಿಗಳಾದ ಅಮಿತ್ ಅಗರವಾಲ್ ಮತ್ತು ಬಿಷ್ಣು ಅಗರವಾಲ್ ಸೇರಿದಂತೆ 14 ಜನರನ್ನು ಬಂಧಿಸಿದೆ.

ಶನಿವಾರ ನೂರಾರು ಜೆಎಂಎಂ ಕಾರ್ಯಕರ್ತರು, ವಿವಿಧ ಬುಡಕಟ್ಟು ಸಂಘಟನೆಗಳೊಂದಿಗೆ ರಾಜ್ಯಾದ್ಯಂತ ಪ್ರದರ್ಶನಗಳನ್ನು ನಡೆಸಿದರು. ಸೋರೆನ್ ಅವರನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರವು ಇಡಿಯಂತಹ ಏಜೆನ್ಸಿಗಳ ಮೂಲಕ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು. ಇಡಿ ಪ್ರಶ್ನಿಸಿರುವುದನ್ನು ವಿರೋಧಿಸಿ ಬುಡಕಟ್ಟು ಸಂಘಟನೆ ಆದಿವಾಸಿ ಸಂಘವು ಗಿರಿದಿಹ್-ಡುಮ್ರಿ ರಸ್ತೆಯನ್ನು ತಡೆದಿತ್ತು.

1,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವುದರೊಂದಿಗೆ ಸಿಎಂ ಮನೆಯ ಸುತ್ತಲಿನ ಪ್ರದೇಶವು ತಾತ್ಕಾಲಿಕ ಕೋಟೆಯಾಗಿ ಮಾರ್ಪಟ್ಟಿತ್ತು. ‘ಒಂದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮೂರು ಹಂತದ ಭದ್ರತೆಯನ್ನು ಖಾತ್ರಿಪಡಿಸಲಾಗಿದೆ’ ಎಂದು ರಾಂಚಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

‘ಯಾವುದೇ ಸಂಭವನೀಯ ಅಹಿತಕರ ಘಟನೆಯನ್ನು ತಪ್ಪಿಸಲು ರಾಂಚಿ ಆಡಳಿತವು ತನಿಖಾ ಸಂಸ್ಥೆಯ ಕಚೇರಿ ಮತ್ತು ಸಿಎಂ ಮನೆಯ ಸುತ್ತಲೂ ಮೂರು ಹಂತದ ಭದ್ರತಾ ವ್ಯವಸ್ಥೆಯನ್ನು ಖಾತ್ರಿಪಡಿಸಿದೆ’ ಎಂದು ಅವರು ಹೇಳಿದರು.

ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆ: ದೆಹಲಿ ಏಮ್ಸ್‌ಗೆ ಅರ್ಧದಿನ ರಜೆ, ಒಪಿಡಿ ಸೇವೆ ಬಂದ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...