Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: 5 ಗಂಟೆಗಳ ಕಾಲ ಹೇಮಂತ್ ಸೊರೇನ್ ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: 5 ಗಂಟೆಗಳ ಕಾಲ ಹೇಮಂತ್ ಸೊರೇನ್ ವಿಚಾರಣೆ

- Advertisement -
- Advertisement -

ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಶನಿವಾರ ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ‘ಇದು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ’ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಆರೋಪಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಯು ಹೇಮಂತ್ ಸೊರೇನ್ ಅವರನ್ನು ಮತ್ತೊಂದು ದಿನ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ವಿಚಾರಣಾ ದಿನಾಂಕವನ್ನು ನಂತರ ನಿರ್ಧರಿಸಲಾಗುವುದು ಎಂದು ಇಡಿ ಮೂಲಗಳಿಂದ ತಿಳಿದುಬಂದಿದೆ. ಭಾರೀ ಭದ್ರತಾ ನಿಯೋಜನೆಯ ನಡುವೆ ಇಡಿ ಅಧಿಕಾರಿಗಳು ರಾಜ್ಯ ರಾಜಧಾನಿ ರಾಂಚಿಯ ಸಿಎಂ ಅವರ ಕಂಕೆ ರಸ್ತೆಯ ನಿವಾಸದಿಂದ ವಿಚಾರಣೆ ಮುಗಿಸಿ ನಿರ್ಗಮಿಸಿದರು.

‘ಅವರು (ಕೇಂದ್ರ) ನಮ್ಮ ವಿರುದ್ಧ ಷಡ್ಯಂತ್ರಗಳನ್ನು ಹೆಣೆಯುತ್ತಿದ್ದಾರೆ. ನಾವು ಅವರ ಷಡ್ಯಂತ್ರಗಳನ್ನು ಚೂರುಚೂರು ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಯನ್ನು ಮಾಡುತ್ತಿದ್ದೇವೆ. ಅವರ ಶವಪೆಟ್ಟಿಗೆಗೆ ಅಂತಿಮ ಮೊಳೆ ಹಾಕುವ ಸಮಯ ಬಂದಿದೆ. ಹೇಮಂತ್ ಸೊರೆನ್ ಯಾವಾಗಲೂ ಕಾರ್ಮಿಕರೊಂದಿಗೆ ನಿಲ್ಲುತ್ತಾರೆ’ ಎಂದು ಜೆಎಂಎಂನ ಕಾರ್ಯಕಾರಿ ಅಧ್ಯಕ್ಷರು ವಿಚಾರಣೆಯ ನಂತರ ಬೆಂಬಲಿಗರಿಗೆ ತಿಳಿಸಿದರು.

ಸೊರೇನ್ ಅವರು ಮೊದಲ ಏಳು ಸಮನ್ಸ್‌ಗಳನ್ನು ನಿರ್ಲಕ್ಷಿಸಿದ್ದರು. ನಂತರ, ಎಂಟನೇ ಬಾರಿಗೆ ತನಿಖಾ ಸಂಸ್ಥೆ ಅವರನ್ನು ಕರೆಸಿದಾಗ ವಿಚಾರಣೆಗೆ ತಮ್ಮ ಒಪ್ಪಿಗೆಯನ್ನು ಸೂಚಿಸಿ, ದಿನ ಹಾಗೂ ಸ್ಥಳ ನಿಗದಿ ಮಾಡಿದ್ದರು.

‘ನಿಮ್ಮ ಬೆಂಬಲಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ; ನಾನು ಅವರಿಗೆ ಭಯಪಡುವುದಿಲ್ಲ ಅಥವಾ ಭಾಗುವುದಿಲ್ಲ ಎಂದು ನಿಮಗೆ ಭರವಸೆ ನೀಡಲು ಬಯಸುತ್ತೇನೆ. ಯಾವುದೇ ಅಡೆತಡೆಗಳನ್ನು ಲೆಕ್ಕಿಸದೆ ನಾವು ಸುಳ್ಳಿಗೆ ತಲೆಬಾಗುವುದಿಲ್ಲ’ ಎಂದು ಅವರು ತಮ್ಮ ಮನೆಯ ಹೊರಗೆ ಮಾಡಿದ ಭಾಷಣದಲ್ಲಿ ಹೇಳಿದರು. ಅಲ್ಲಿ ಇಡಿ ಕ್ರಮವನ್ನು ಪ್ರತಿಭಟಿಸಲು ನೂರಾರು ಜೆಎಂಎಂ ಬೆಂಬಲಿಗರು ಜಮಾಯಿಸಿದ್ದರು.

‘ನಾವು ಪ್ರತಿಪಕ್ಷಗಳ ಷಡ್ಯಂತ್ರದ ಜಾಲವನ್ನು ಬಿಡಿಸುತ್ತಾ ಮುನ್ನಡೆಯುತ್ತಿದ್ದೇವೆ. ನೀವು ಭಯಪಡುವ ಅಗತ್ಯವಿಲ್ಲ. ನಿಮ್ಮ ನೈತಿಕತೆಯನ್ನು ಉನ್ನತ ಮಟ್ಟದಲ್ಲಿ ಇರಿಸಿ. ನಮ್ಮ ಮೇಲೆ ಹಾರಿದ ಮೊದಲ ಬುಲೆಟ್ ಅನ್ನು ನಿಮ್ಮ ನಾಯಕನೇ ತೆಗೆದುಕೊಳ್ಳುತ್ತಾನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ’ ಎಂದು ಸೊರೆನ್ ಹೇಳಿದರು.

ರಾಂಚಿಯ ಬಜ್ರಾ ಪ್ರದೇಶದಲ್ಲಿ 7.16 ಎಕರೆ ವಿಸ್ತೀರ್ಣದ ಜಮೀನಿನ ಮಾಲೀಕತ್ವಕ್ಕೆ ಸಂಬಂಧಿಸಿದ ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿ ಕೇಂದ್ರೀಯ ಏಜೆನ್ಸಿಯ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಸೋರೆನ್ ವಿರುದ್ಧ ತನಿಖೆ ನಡೆಸುತ್ತಿದೆ. ಸೇನಾ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪಿಸಲಾಗಿದೆ. ಆದರೆ, ‘ಪ್ರಕರಣವು ಸ್ಪಷ್ಟವಾಗಿಲ್ಲ ಮತ್ತು ಅವರ ಆಸ್ತಿಯ ವಿವರಗಳು ಈಗಾಗಲೇ ಸಾರ್ವಜನಿಕವಾಗಿವೆ’ ಎಂದು ಸೊರೇನ್ ಸರ್ಕಾರ ಹೇಳಿದೆ.

‘ಇಡಿ ಅಧಿಕಾರಿಗಳ ತಂಡ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಎಂ ನಿವಾಸವನ್ನು ತಲುಪಿತು; ಮಧ್ಯಾಹ್ನ 3 ಗಂಟೆಯ ಸುಮಾರಿಗೆ ವಿಚಾರಣೆ ಆರಂಭಿಸಿದರು’ ಎಂದು ಜಾರ್ಖಂಡ್ ಸರ್ಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘2023 ರಲ್ಲಿ ದಾಖಲಾದ ಜಾರಿ ಪ್ರಕರಣ ಮಾಹಿತಿ ವರದಿಗೆ ಸಂಬಂಧಿಸಿದಂತೆ ಭಾನು ಪ್ರತಾಪ್ ಪ್ರಸಾದ್, ಆಗಿನ ಕಂದಾಯ ಸಬ್ ಇನ್ಸ್ಪೆಕ್ಟರ್ಗಳು ಮತ್ತು ಇತರರನ್ನು ಒಳಗೊಂಡಿರುವ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದೆ. ತನಿಖಾ ಸಂಸ್ಥೆಯು ಈ ವಿಷಯಕ್ಕೆ ಸಂಬಂಧಿಸಿದಂತೆ ಸೊರೇನ್ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದೆ. ಅವರ ಸ್ವಾಧೀನದಲ್ಲಿರುವ ಆಸ್ತಿಗಳ ವಿವರಗಳನ್ನು ಪಡೆಯುತ್ತಿದೆ’ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಛವಿ ರಂಜನ್, ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಮತ್ತು ರಾಂಚಿಯ ಉಪ ಆಯುಕ್ತ ಭಾನು ಪ್ರತಾಪ್ ಪ್ರಸಾದ್ ಮತ್ತು ಉದ್ಯಮಿಗಳಾದ ಅಮಿತ್ ಅಗರವಾಲ್ ಮತ್ತು ಬಿಷ್ಣು ಅಗರವಾಲ್ ಸೇರಿದಂತೆ 14 ಜನರನ್ನು ಬಂಧಿಸಿದೆ.

ಶನಿವಾರ ನೂರಾರು ಜೆಎಂಎಂ ಕಾರ್ಯಕರ್ತರು, ವಿವಿಧ ಬುಡಕಟ್ಟು ಸಂಘಟನೆಗಳೊಂದಿಗೆ ರಾಜ್ಯಾದ್ಯಂತ ಪ್ರದರ್ಶನಗಳನ್ನು ನಡೆಸಿದರು. ಸೋರೆನ್ ಅವರನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರವು ಇಡಿಯಂತಹ ಏಜೆನ್ಸಿಗಳ ಮೂಲಕ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು. ಇಡಿ ಪ್ರಶ್ನಿಸಿರುವುದನ್ನು ವಿರೋಧಿಸಿ ಬುಡಕಟ್ಟು ಸಂಘಟನೆ ಆದಿವಾಸಿ ಸಂಘವು ಗಿರಿದಿಹ್-ಡುಮ್ರಿ ರಸ್ತೆಯನ್ನು ತಡೆದಿತ್ತು.

1,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವುದರೊಂದಿಗೆ ಸಿಎಂ ಮನೆಯ ಸುತ್ತಲಿನ ಪ್ರದೇಶವು ತಾತ್ಕಾಲಿಕ ಕೋಟೆಯಾಗಿ ಮಾರ್ಪಟ್ಟಿತ್ತು. ‘ಒಂದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮೂರು ಹಂತದ ಭದ್ರತೆಯನ್ನು ಖಾತ್ರಿಪಡಿಸಲಾಗಿದೆ’ ಎಂದು ರಾಂಚಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

‘ಯಾವುದೇ ಸಂಭವನೀಯ ಅಹಿತಕರ ಘಟನೆಯನ್ನು ತಪ್ಪಿಸಲು ರಾಂಚಿ ಆಡಳಿತವು ತನಿಖಾ ಸಂಸ್ಥೆಯ ಕಚೇರಿ ಮತ್ತು ಸಿಎಂ ಮನೆಯ ಸುತ್ತಲೂ ಮೂರು ಹಂತದ ಭದ್ರತಾ ವ್ಯವಸ್ಥೆಯನ್ನು ಖಾತ್ರಿಪಡಿಸಿದೆ’ ಎಂದು ಅವರು ಹೇಳಿದರು.

ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆ: ದೆಹಲಿ ಏಮ್ಸ್‌ಗೆ ಅರ್ಧದಿನ ರಜೆ, ಒಪಿಡಿ ಸೇವೆ ಬಂದ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...