Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಾಕ್ಷಿಯಾಗಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಸೋಮವಾರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.

ಚುನಾವಣಾ ಆಯೋಗವನ್ನು ಒಳಗೊಂಡಿರುವ ಲಂಚದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ನಡೆಸುತ್ತಿದ್ದ ಬಹುಕೋಟಿ ಸುಲಿಗೆ ಹಗರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ವಿಚಾರಣೆಗೆ ಹಾಜರಾಗಿದ್ದಾರೆ.

36 ವರ್ಷ ವಯಸ್ಸಿನ ಶ್ರೀಲಂಕಾ ನಟಿಯನ್ನು ಐದು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಆದರೆ, “ಆಕೆ ಆರೋಪಿಯಲ್ಲ, ಸುಕೇಶ್ ಚಂದ್ರಶೇಖರ್ ನಡೆಸುತ್ತಿದ್ದ ಬಹುಕೋಟಿ ಸುಲಿಗೆ ಪ್ರಕರಣದಲ್ಲಿ ಸಾಕ್ಷಿಯಾಗಿ ವಿಚಾರಣೆ ನಡೆಸಲಾಗುತ್ತಿದೆ” ಎಂದು ಜಾರಿ ನಿರ್ದೇಶನಾಲಯದ ಮೂಲಗಳನ್ನು ಎನ್‌ಡಿಟಿವಿ ಉಲ್ಲೇಖಿಸಿದೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಆಗಸ್ಟ್ 24 ರಂದು, ತನಿಖಾ ಸಂಸ್ಥೆ ಚಂದ್ರಶೇಖರ್ ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ಬಂಗಲೆಯಿಂದ 82.5 ಲಕ್ಷ ನಗದು ಮತ್ತು ಒಂದು ಡಜನ್ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದೆ ಎಂದು ಮಾಹಿತಿ ನೀಡಿತ್ತು.

ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಸುಮಾರು 200 ಕೋಟಿ ರೂ. ಸುಲಿಗೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (economic offences wing) ಎಫ್‌ಐಆರ್ ದಾಖಲಿಸಿದೆ.

“ಸುಕೇಶ್ ಚಂದ್ರಶೇಖರ್ ಈ ವಂಚನೆಯ ಸೂತ್ರಧಾರ. ಆತ 17 ನೇ ವಯಸ್ಸಿನಿಂದಲೂ ಈ ಅಪರಾಧದಲ್ಲಿ ತೊಡಗಿದ್ದಾನೆ. ಆತನ ವಿರುದ್ಧ ಅನೇಕ ಎಫ್‌ಐಆರ್ ದಾಖಲಾಗಿವೆ. ಆತನನ್ನು ಪ್ರಸ್ತುತ ರೋಹಿಣಿ ಜೈಲಿನಲ್ಲಿ ಇರಿಸಲಾಗಿದೆ” ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಜಗಂನ (ಎಐಎಡಿಎಂಕೆ) ‘ಅಮ್ಮ’ ಬಣದ ನಾಯಕ ಟಿಟಿವಿ ದಿನಕರನ್ ಅವರಿಂದ, ಪಕ್ಷದ ‘ಎರಡು ಎಲೆಗಳ’ ಚಿಹ್ನೆಯ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾ ಸಮಿತಿ ಅಧಿಕಾರಿಗಳಿಗೆ ಲಂಚ ನೀಡಲು ಸುಕೇಶ್ ಚಂದ್ರಶೇಖರ್ ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತ, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಮೊದಲ ಬಾರಿಗೆ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ವಿಕ್ರಾಂತ್​ ರೋಣ’ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...