Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಾಕ್ಷಿಯಾಗಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಸೋಮವಾರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.

ಚುನಾವಣಾ ಆಯೋಗವನ್ನು ಒಳಗೊಂಡಿರುವ ಲಂಚದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ನಡೆಸುತ್ತಿದ್ದ ಬಹುಕೋಟಿ ಸುಲಿಗೆ ಹಗರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ವಿಚಾರಣೆಗೆ ಹಾಜರಾಗಿದ್ದಾರೆ.

36 ವರ್ಷ ವಯಸ್ಸಿನ ಶ್ರೀಲಂಕಾ ನಟಿಯನ್ನು ಐದು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಆದರೆ, “ಆಕೆ ಆರೋಪಿಯಲ್ಲ, ಸುಕೇಶ್ ಚಂದ್ರಶೇಖರ್ ನಡೆಸುತ್ತಿದ್ದ ಬಹುಕೋಟಿ ಸುಲಿಗೆ ಪ್ರಕರಣದಲ್ಲಿ ಸಾಕ್ಷಿಯಾಗಿ ವಿಚಾರಣೆ ನಡೆಸಲಾಗುತ್ತಿದೆ” ಎಂದು ಜಾರಿ ನಿರ್ದೇಶನಾಲಯದ ಮೂಲಗಳನ್ನು ಎನ್‌ಡಿಟಿವಿ ಉಲ್ಲೇಖಿಸಿದೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಆಗಸ್ಟ್ 24 ರಂದು, ತನಿಖಾ ಸಂಸ್ಥೆ ಚಂದ್ರಶೇಖರ್ ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ಬಂಗಲೆಯಿಂದ 82.5 ಲಕ್ಷ ನಗದು ಮತ್ತು ಒಂದು ಡಜನ್ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದೆ ಎಂದು ಮಾಹಿತಿ ನೀಡಿತ್ತು.

ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಸುಮಾರು 200 ಕೋಟಿ ರೂ. ಸುಲಿಗೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (economic offences wing) ಎಫ್‌ಐಆರ್ ದಾಖಲಿಸಿದೆ.

“ಸುಕೇಶ್ ಚಂದ್ರಶೇಖರ್ ಈ ವಂಚನೆಯ ಸೂತ್ರಧಾರ. ಆತ 17 ನೇ ವಯಸ್ಸಿನಿಂದಲೂ ಈ ಅಪರಾಧದಲ್ಲಿ ತೊಡಗಿದ್ದಾನೆ. ಆತನ ವಿರುದ್ಧ ಅನೇಕ ಎಫ್‌ಐಆರ್ ದಾಖಲಾಗಿವೆ. ಆತನನ್ನು ಪ್ರಸ್ತುತ ರೋಹಿಣಿ ಜೈಲಿನಲ್ಲಿ ಇರಿಸಲಾಗಿದೆ” ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಜಗಂನ (ಎಐಎಡಿಎಂಕೆ) ‘ಅಮ್ಮ’ ಬಣದ ನಾಯಕ ಟಿಟಿವಿ ದಿನಕರನ್ ಅವರಿಂದ, ಪಕ್ಷದ ‘ಎರಡು ಎಲೆಗಳ’ ಚಿಹ್ನೆಯ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾ ಸಮಿತಿ ಅಧಿಕಾರಿಗಳಿಗೆ ಲಂಚ ನೀಡಲು ಸುಕೇಶ್ ಚಂದ್ರಶೇಖರ್ ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತ, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಮೊದಲ ಬಾರಿಗೆ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ವಿಕ್ರಾಂತ್​ ರೋಣ’ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...