Homeಕರ್ನಾಟಕಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಕಣ್ತಪ್ಪಿನಿಂದ ಅಕೌಂಟಿಗೆ ಬಂದ 35,000 ಸಾವಿರ ರೂಪಾಯಿ ವಾಪಸ್ ತಲುಪಿಸಿದ ಆಟೋ ಚಾಲಕ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಉದ್ಯೋಗ ಕಳೆದುಕೊಂಡವರು ಅದೆಷ್ಟೋ ಮಂದಿ. ದುಡಿಯುವ ಮಾರ್ಗ ಗೊತ್ತಿದ್ದು ಏನೂ ಮಾಡಲಾಗದೆ ತಲೆ ಮೇಲೆ ಕೈಹೊತ್ತಿ ಕುಳಿತವರಿಗೇನು ಕಡಿಮೆಯಿಲ್ಲ. ಆಟೋ, ಟ್ಯಾಕ್ಸಿ ಚಾಲಕರು ಕೆಲಸವಿದ್ದರೂ ಮಾಡಲಾಗದ ಸ್ಥಿತಿಯಲ್ಲಿದ್ದರು. ಲಾಕ್‌ಡೌನ್ ಬಹುಸಂಖ್ಯಾತರ ಬದುಕನ್ನೆ ಬುಡಮೇಲು ಮಾಡಿತ್ತು.

ಇಂತಹ ಸಮಯದಲ್ಲಿ ಸಾವಿರಾರು ರೂಪಾಯಿ ಕೈ ಸೇರಿದರೇ ಸದ್ಯ ಎಂದು ತೆಗೆದುಕೊಂಡು ಮನೆಗೆ ಹೋಗುವ ಜನರೇ ಹೆಚ್ಚು. ಇಂತಹವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತಾವು ಕಷ್ಟದಲ್ಲಿದ್ದರೂ ಇನ್ನೊಬ್ಬರ ಹಣವನ್ನು ಮುಟ್ಟದೇ ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಹೌದು, ಕೆ.ಆರ್. ಪುರಂ, ಹೂಡಿ ಆಸುಪಾಸಿನಲ್ಲಿ ಸುಮಾರು 20 ವರ್ಷದಿಂದ ಆಟೋ ಓಡಿಸಿ ಜೀವನದ ಬಂಡಿ ದೂಡುತ್ತಿರುವ ಇವರ ಹೆಸರು ಹರೀಶ್. ಮೂಲತಃ ಕೊಲಾರ ಜಿಲ್ಲೆಯ ಮುಳಬಾಗಿಲಿನವರಾದ ಹರೀಶ್ ಸಧ್ಯಕ್ಕೆ ಬೆಂಗಳೂರಿನ ಐಯ್ಯಪ್ಪ ನಗರದಲ್ಲಿ ತಾಯಿ ಮತ್ತು ತಮ್ಮನೊಂದಿಗೆ ವಾಸವಾಗಿದ್ದಾರೆ.

ಮಂಗಳೂರು ಮೂಲದ ಅಬ್ದುಲ್ ಸತ್ತಾರ್‌ ಪರಪ್ಪು ಎಂಬ ಯುವಕ ಯಾರಿಗೋ ಕಳುಹಿಸಬೇಕೆಂದಿದ್ದ 35,000 ಸಾವಿರ ರೂಪಾಯಿಗಳಷ್ಟು ದುಡ್ಡನ್ನು ಕಣ್ತಪ್ಪಿನಿಂದ ಹರೀಶ್ ಅಕೌಂಟ್‌ಗೆ ಕಳುಹಿಸಿಬಿಟ್ಟಿದ್ದಾರೆ. ನಂತರ ಗೂಗಲ್ ಪೇ ಮೂಲಕ ಅವರ ನಂಬರ್ ಪಡೆದು ಕರೆ ಮಾಡಿ ಆದ ಘಟನೆಯನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ತೀರಾ ಆತಂಕದಲ್ಲಿದ್ದ ಸತ್ತಾರ್‌ ಪರಪ್ಪುಗೆ ಧೈರ್ಯ ನೀಡಿದ ಆಟೋ ಚಾಲಕ ಹರೀಶ್ ಹಣ ವಾಪಾಸ್ ಕಳುಹಿಸುವ ಭರವಸೆ ನೀಡಿ, ಕೆಲವೆ ಹೊತ್ತಿನಲ್ಲಿ ಹಣವನ್ನು ವಾಪಾಸು ನೀಡಿ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

ಈ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ರಿಕ್ಷಾ ಚಾಲಕ ಹರೀಶ್, ’ಕೊರೊನಾ ಸಮಯದಲ್ಲಿನ ಕಷ್ಟ ನಮಗೂ ಗೊತ್ತು. ನಮ್ಮ ದುಡ್ಡೇ ನಮ್ಮೊಂದಿಗೆ ಇರುವುದಿಲ್ಲ, ಒಂದು ರುಪಾಯಿ ದುಡಿಯಲು ಕಷ್ಟ ಇರುವ ಈ ಕಾಲದಲ್ಲಿ ಅಷ್ಟು ದುಡ್ಡಿನ ಹಿಂದಿರುವ ಶ್ರಮದ ಬಗ್ಗೆ ನನಗೆ ಗೊತ್ತಿದೆ’ ಎಂದು ಹೇಳಿದರು.

ಘಟನೆ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ಸತ್ತಾರ್‌ ವಿವರಿಸಿದ್ದು ಹೀಗೆ, ’ಮೂವತ್ತೈದು ರುಪಾಯಿ ಕೂಡ ಮುಖ್ಯವಾಗುವ ಈ ಸಮಯದಲ್ಲಿ,ಕಣ್ತಪ್ಪಿನಿಂದ ಕ್ಷಣ ಮಾತ್ರದಲ್ಲಿ ಮೂವತ್ತೈದು ಸಾವಿರ ರುಪಾಯಿ ಹರೀಶ್ ಅಕೌಂಟಿಗೆ ಹೋಗಿಯಾಗಿತ್ತು. ಒಂದು ಕ್ಷಣ ಆಕಾಶ ತಲೆ ಮೇಲೆ ಬಿದ್ದಂತೆ ಭಾಸವಾಗಿತ್ತು. ಆದರೆ ಕರೆ ಮಾಡಿದಾಗ ಹರೀಶ್ ಆಡಿದ ಮಾತುಗಳು ಮತ್ತೆ ಹಣ ಸಿಗುವ ಭರವಸೆ ಮೂಡಿಸಿದ್ದವು. ಒಮ್ಮೆಮ್ಮೆ ನಗರದಲ್ಲಿ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಕೈಯಲ್ಲಿ ಹಣವಿದೆ ಅನ್ನುವಾಗ ಗೊಂದಲಗಳು ಮೂಡಿದ್ದರೂ ಸಹ ಅವೆಲ್ಲವನ್ನೂ ಸುಳ್ಳಾಗಿಸಿ ಹರೀಶ್‌ ಹಣವನ್ನು ಹಿಂತಿರುಗಿಸಿದ್ದಾರೆ’ ಎಂದು ಹರೀಶ್‌ಗೆ ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...