Homeಕರ್ನಾಟಕಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಕಣ್ತಪ್ಪಿನಿಂದ ಅಕೌಂಟಿಗೆ ಬಂದ 35,000 ಸಾವಿರ ರೂಪಾಯಿ ವಾಪಸ್ ತಲುಪಿಸಿದ ಆಟೋ ಚಾಲಕ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಉದ್ಯೋಗ ಕಳೆದುಕೊಂಡವರು ಅದೆಷ್ಟೋ ಮಂದಿ. ದುಡಿಯುವ ಮಾರ್ಗ ಗೊತ್ತಿದ್ದು ಏನೂ ಮಾಡಲಾಗದೆ ತಲೆ ಮೇಲೆ ಕೈಹೊತ್ತಿ ಕುಳಿತವರಿಗೇನು ಕಡಿಮೆಯಿಲ್ಲ. ಆಟೋ, ಟ್ಯಾಕ್ಸಿ ಚಾಲಕರು ಕೆಲಸವಿದ್ದರೂ ಮಾಡಲಾಗದ ಸ್ಥಿತಿಯಲ್ಲಿದ್ದರು. ಲಾಕ್‌ಡೌನ್ ಬಹುಸಂಖ್ಯಾತರ ಬದುಕನ್ನೆ ಬುಡಮೇಲು ಮಾಡಿತ್ತು.

ಇಂತಹ ಸಮಯದಲ್ಲಿ ಸಾವಿರಾರು ರೂಪಾಯಿ ಕೈ ಸೇರಿದರೇ ಸದ್ಯ ಎಂದು ತೆಗೆದುಕೊಂಡು ಮನೆಗೆ ಹೋಗುವ ಜನರೇ ಹೆಚ್ಚು. ಇಂತಹವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತಾವು ಕಷ್ಟದಲ್ಲಿದ್ದರೂ ಇನ್ನೊಬ್ಬರ ಹಣವನ್ನು ಮುಟ್ಟದೇ ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಹೌದು, ಕೆ.ಆರ್. ಪುರಂ, ಹೂಡಿ ಆಸುಪಾಸಿನಲ್ಲಿ ಸುಮಾರು 20 ವರ್ಷದಿಂದ ಆಟೋ ಓಡಿಸಿ ಜೀವನದ ಬಂಡಿ ದೂಡುತ್ತಿರುವ ಇವರ ಹೆಸರು ಹರೀಶ್. ಮೂಲತಃ ಕೊಲಾರ ಜಿಲ್ಲೆಯ ಮುಳಬಾಗಿಲಿನವರಾದ ಹರೀಶ್ ಸಧ್ಯಕ್ಕೆ ಬೆಂಗಳೂರಿನ ಐಯ್ಯಪ್ಪ ನಗರದಲ್ಲಿ ತಾಯಿ ಮತ್ತು ತಮ್ಮನೊಂದಿಗೆ ವಾಸವಾಗಿದ್ದಾರೆ.

ಮಂಗಳೂರು ಮೂಲದ ಅಬ್ದುಲ್ ಸತ್ತಾರ್‌ ಪರಪ್ಪು ಎಂಬ ಯುವಕ ಯಾರಿಗೋ ಕಳುಹಿಸಬೇಕೆಂದಿದ್ದ 35,000 ಸಾವಿರ ರೂಪಾಯಿಗಳಷ್ಟು ದುಡ್ಡನ್ನು ಕಣ್ತಪ್ಪಿನಿಂದ ಹರೀಶ್ ಅಕೌಂಟ್‌ಗೆ ಕಳುಹಿಸಿಬಿಟ್ಟಿದ್ದಾರೆ. ನಂತರ ಗೂಗಲ್ ಪೇ ಮೂಲಕ ಅವರ ನಂಬರ್ ಪಡೆದು ಕರೆ ಮಾಡಿ ಆದ ಘಟನೆಯನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ತೀರಾ ಆತಂಕದಲ್ಲಿದ್ದ ಸತ್ತಾರ್‌ ಪರಪ್ಪುಗೆ ಧೈರ್ಯ ನೀಡಿದ ಆಟೋ ಚಾಲಕ ಹರೀಶ್ ಹಣ ವಾಪಾಸ್ ಕಳುಹಿಸುವ ಭರವಸೆ ನೀಡಿ, ಕೆಲವೆ ಹೊತ್ತಿನಲ್ಲಿ ಹಣವನ್ನು ವಾಪಾಸು ನೀಡಿ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

ಈ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ರಿಕ್ಷಾ ಚಾಲಕ ಹರೀಶ್, ’ಕೊರೊನಾ ಸಮಯದಲ್ಲಿನ ಕಷ್ಟ ನಮಗೂ ಗೊತ್ತು. ನಮ್ಮ ದುಡ್ಡೇ ನಮ್ಮೊಂದಿಗೆ ಇರುವುದಿಲ್ಲ, ಒಂದು ರುಪಾಯಿ ದುಡಿಯಲು ಕಷ್ಟ ಇರುವ ಈ ಕಾಲದಲ್ಲಿ ಅಷ್ಟು ದುಡ್ಡಿನ ಹಿಂದಿರುವ ಶ್ರಮದ ಬಗ್ಗೆ ನನಗೆ ಗೊತ್ತಿದೆ’ ಎಂದು ಹೇಳಿದರು.

ಘಟನೆ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ಸತ್ತಾರ್‌ ವಿವರಿಸಿದ್ದು ಹೀಗೆ, ’ಮೂವತ್ತೈದು ರುಪಾಯಿ ಕೂಡ ಮುಖ್ಯವಾಗುವ ಈ ಸಮಯದಲ್ಲಿ,ಕಣ್ತಪ್ಪಿನಿಂದ ಕ್ಷಣ ಮಾತ್ರದಲ್ಲಿ ಮೂವತ್ತೈದು ಸಾವಿರ ರುಪಾಯಿ ಹರೀಶ್ ಅಕೌಂಟಿಗೆ ಹೋಗಿಯಾಗಿತ್ತು. ಒಂದು ಕ್ಷಣ ಆಕಾಶ ತಲೆ ಮೇಲೆ ಬಿದ್ದಂತೆ ಭಾಸವಾಗಿತ್ತು. ಆದರೆ ಕರೆ ಮಾಡಿದಾಗ ಹರೀಶ್ ಆಡಿದ ಮಾತುಗಳು ಮತ್ತೆ ಹಣ ಸಿಗುವ ಭರವಸೆ ಮೂಡಿಸಿದ್ದವು. ಒಮ್ಮೆಮ್ಮೆ ನಗರದಲ್ಲಿ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಕೈಯಲ್ಲಿ ಹಣವಿದೆ ಅನ್ನುವಾಗ ಗೊಂದಲಗಳು ಮೂಡಿದ್ದರೂ ಸಹ ಅವೆಲ್ಲವನ್ನೂ ಸುಳ್ಳಾಗಿಸಿ ಹರೀಶ್‌ ಹಣವನ್ನು ಹಿಂತಿರುಗಿಸಿದ್ದಾರೆ’ ಎಂದು ಹರೀಶ್‌ಗೆ ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...