Homeಕರ್ನಾಟಕಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಕಣ್ತಪ್ಪಿನಿಂದ ಅಕೌಂಟಿಗೆ ಬಂದ 35,000 ಸಾವಿರ ರೂಪಾಯಿ ವಾಪಸ್ ತಲುಪಿಸಿದ ಆಟೋ ಚಾಲಕ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಉದ್ಯೋಗ ಕಳೆದುಕೊಂಡವರು ಅದೆಷ್ಟೋ ಮಂದಿ. ದುಡಿಯುವ ಮಾರ್ಗ ಗೊತ್ತಿದ್ದು ಏನೂ ಮಾಡಲಾಗದೆ ತಲೆ ಮೇಲೆ ಕೈಹೊತ್ತಿ ಕುಳಿತವರಿಗೇನು ಕಡಿಮೆಯಿಲ್ಲ. ಆಟೋ, ಟ್ಯಾಕ್ಸಿ ಚಾಲಕರು ಕೆಲಸವಿದ್ದರೂ ಮಾಡಲಾಗದ ಸ್ಥಿತಿಯಲ್ಲಿದ್ದರು. ಲಾಕ್‌ಡೌನ್ ಬಹುಸಂಖ್ಯಾತರ ಬದುಕನ್ನೆ ಬುಡಮೇಲು ಮಾಡಿತ್ತು.

ಇಂತಹ ಸಮಯದಲ್ಲಿ ಸಾವಿರಾರು ರೂಪಾಯಿ ಕೈ ಸೇರಿದರೇ ಸದ್ಯ ಎಂದು ತೆಗೆದುಕೊಂಡು ಮನೆಗೆ ಹೋಗುವ ಜನರೇ ಹೆಚ್ಚು. ಇಂತಹವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತಾವು ಕಷ್ಟದಲ್ಲಿದ್ದರೂ ಇನ್ನೊಬ್ಬರ ಹಣವನ್ನು ಮುಟ್ಟದೇ ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಹೌದು, ಕೆ.ಆರ್. ಪುರಂ, ಹೂಡಿ ಆಸುಪಾಸಿನಲ್ಲಿ ಸುಮಾರು 20 ವರ್ಷದಿಂದ ಆಟೋ ಓಡಿಸಿ ಜೀವನದ ಬಂಡಿ ದೂಡುತ್ತಿರುವ ಇವರ ಹೆಸರು ಹರೀಶ್. ಮೂಲತಃ ಕೊಲಾರ ಜಿಲ್ಲೆಯ ಮುಳಬಾಗಿಲಿನವರಾದ ಹರೀಶ್ ಸಧ್ಯಕ್ಕೆ ಬೆಂಗಳೂರಿನ ಐಯ್ಯಪ್ಪ ನಗರದಲ್ಲಿ ತಾಯಿ ಮತ್ತು ತಮ್ಮನೊಂದಿಗೆ ವಾಸವಾಗಿದ್ದಾರೆ.

ಮಂಗಳೂರು ಮೂಲದ ಅಬ್ದುಲ್ ಸತ್ತಾರ್‌ ಪರಪ್ಪು ಎಂಬ ಯುವಕ ಯಾರಿಗೋ ಕಳುಹಿಸಬೇಕೆಂದಿದ್ದ 35,000 ಸಾವಿರ ರೂಪಾಯಿಗಳಷ್ಟು ದುಡ್ಡನ್ನು ಕಣ್ತಪ್ಪಿನಿಂದ ಹರೀಶ್ ಅಕೌಂಟ್‌ಗೆ ಕಳುಹಿಸಿಬಿಟ್ಟಿದ್ದಾರೆ. ನಂತರ ಗೂಗಲ್ ಪೇ ಮೂಲಕ ಅವರ ನಂಬರ್ ಪಡೆದು ಕರೆ ಮಾಡಿ ಆದ ಘಟನೆಯನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ತೀರಾ ಆತಂಕದಲ್ಲಿದ್ದ ಸತ್ತಾರ್‌ ಪರಪ್ಪುಗೆ ಧೈರ್ಯ ನೀಡಿದ ಆಟೋ ಚಾಲಕ ಹರೀಶ್ ಹಣ ವಾಪಾಸ್ ಕಳುಹಿಸುವ ಭರವಸೆ ನೀಡಿ, ಕೆಲವೆ ಹೊತ್ತಿನಲ್ಲಿ ಹಣವನ್ನು ವಾಪಾಸು ನೀಡಿ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

ಈ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ರಿಕ್ಷಾ ಚಾಲಕ ಹರೀಶ್, ’ಕೊರೊನಾ ಸಮಯದಲ್ಲಿನ ಕಷ್ಟ ನಮಗೂ ಗೊತ್ತು. ನಮ್ಮ ದುಡ್ಡೇ ನಮ್ಮೊಂದಿಗೆ ಇರುವುದಿಲ್ಲ, ಒಂದು ರುಪಾಯಿ ದುಡಿಯಲು ಕಷ್ಟ ಇರುವ ಈ ಕಾಲದಲ್ಲಿ ಅಷ್ಟು ದುಡ್ಡಿನ ಹಿಂದಿರುವ ಶ್ರಮದ ಬಗ್ಗೆ ನನಗೆ ಗೊತ್ತಿದೆ’ ಎಂದು ಹೇಳಿದರು.

ಘಟನೆ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ಸತ್ತಾರ್‌ ವಿವರಿಸಿದ್ದು ಹೀಗೆ, ’ಮೂವತ್ತೈದು ರುಪಾಯಿ ಕೂಡ ಮುಖ್ಯವಾಗುವ ಈ ಸಮಯದಲ್ಲಿ,ಕಣ್ತಪ್ಪಿನಿಂದ ಕ್ಷಣ ಮಾತ್ರದಲ್ಲಿ ಮೂವತ್ತೈದು ಸಾವಿರ ರುಪಾಯಿ ಹರೀಶ್ ಅಕೌಂಟಿಗೆ ಹೋಗಿಯಾಗಿತ್ತು. ಒಂದು ಕ್ಷಣ ಆಕಾಶ ತಲೆ ಮೇಲೆ ಬಿದ್ದಂತೆ ಭಾಸವಾಗಿತ್ತು. ಆದರೆ ಕರೆ ಮಾಡಿದಾಗ ಹರೀಶ್ ಆಡಿದ ಮಾತುಗಳು ಮತ್ತೆ ಹಣ ಸಿಗುವ ಭರವಸೆ ಮೂಡಿಸಿದ್ದವು. ಒಮ್ಮೆಮ್ಮೆ ನಗರದಲ್ಲಿ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಕೈಯಲ್ಲಿ ಹಣವಿದೆ ಅನ್ನುವಾಗ ಗೊಂದಲಗಳು ಮೂಡಿದ್ದರೂ ಸಹ ಅವೆಲ್ಲವನ್ನೂ ಸುಳ್ಳಾಗಿಸಿ ಹರೀಶ್‌ ಹಣವನ್ನು ಹಿಂತಿರುಗಿಸಿದ್ದಾರೆ’ ಎಂದು ಹರೀಶ್‌ಗೆ ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...