Homeಕರ್ನಾಟಕಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಕಣ್ತಪ್ಪಿನಿಂದ ಅಕೌಂಟಿಗೆ ಬಂದ 35,000 ಸಾವಿರ ರೂಪಾಯಿ ವಾಪಸ್ ತಲುಪಿಸಿದ ಆಟೋ ಚಾಲಕ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಉದ್ಯೋಗ ಕಳೆದುಕೊಂಡವರು ಅದೆಷ್ಟೋ ಮಂದಿ. ದುಡಿಯುವ ಮಾರ್ಗ ಗೊತ್ತಿದ್ದು ಏನೂ ಮಾಡಲಾಗದೆ ತಲೆ ಮೇಲೆ ಕೈಹೊತ್ತಿ ಕುಳಿತವರಿಗೇನು ಕಡಿಮೆಯಿಲ್ಲ. ಆಟೋ, ಟ್ಯಾಕ್ಸಿ ಚಾಲಕರು ಕೆಲಸವಿದ್ದರೂ ಮಾಡಲಾಗದ ಸ್ಥಿತಿಯಲ್ಲಿದ್ದರು. ಲಾಕ್‌ಡೌನ್ ಬಹುಸಂಖ್ಯಾತರ ಬದುಕನ್ನೆ ಬುಡಮೇಲು ಮಾಡಿತ್ತು.

ಇಂತಹ ಸಮಯದಲ್ಲಿ ಸಾವಿರಾರು ರೂಪಾಯಿ ಕೈ ಸೇರಿದರೇ ಸದ್ಯ ಎಂದು ತೆಗೆದುಕೊಂಡು ಮನೆಗೆ ಹೋಗುವ ಜನರೇ ಹೆಚ್ಚು. ಇಂತಹವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತಾವು ಕಷ್ಟದಲ್ಲಿದ್ದರೂ ಇನ್ನೊಬ್ಬರ ಹಣವನ್ನು ಮುಟ್ಟದೇ ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಹೌದು, ಕೆ.ಆರ್. ಪುರಂ, ಹೂಡಿ ಆಸುಪಾಸಿನಲ್ಲಿ ಸುಮಾರು 20 ವರ್ಷದಿಂದ ಆಟೋ ಓಡಿಸಿ ಜೀವನದ ಬಂಡಿ ದೂಡುತ್ತಿರುವ ಇವರ ಹೆಸರು ಹರೀಶ್. ಮೂಲತಃ ಕೊಲಾರ ಜಿಲ್ಲೆಯ ಮುಳಬಾಗಿಲಿನವರಾದ ಹರೀಶ್ ಸಧ್ಯಕ್ಕೆ ಬೆಂಗಳೂರಿನ ಐಯ್ಯಪ್ಪ ನಗರದಲ್ಲಿ ತಾಯಿ ಮತ್ತು ತಮ್ಮನೊಂದಿಗೆ ವಾಸವಾಗಿದ್ದಾರೆ.

ಮಂಗಳೂರು ಮೂಲದ ಅಬ್ದುಲ್ ಸತ್ತಾರ್‌ ಪರಪ್ಪು ಎಂಬ ಯುವಕ ಯಾರಿಗೋ ಕಳುಹಿಸಬೇಕೆಂದಿದ್ದ 35,000 ಸಾವಿರ ರೂಪಾಯಿಗಳಷ್ಟು ದುಡ್ಡನ್ನು ಕಣ್ತಪ್ಪಿನಿಂದ ಹರೀಶ್ ಅಕೌಂಟ್‌ಗೆ ಕಳುಹಿಸಿಬಿಟ್ಟಿದ್ದಾರೆ. ನಂತರ ಗೂಗಲ್ ಪೇ ಮೂಲಕ ಅವರ ನಂಬರ್ ಪಡೆದು ಕರೆ ಮಾಡಿ ಆದ ಘಟನೆಯನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ತೀರಾ ಆತಂಕದಲ್ಲಿದ್ದ ಸತ್ತಾರ್‌ ಪರಪ್ಪುಗೆ ಧೈರ್ಯ ನೀಡಿದ ಆಟೋ ಚಾಲಕ ಹರೀಶ್ ಹಣ ವಾಪಾಸ್ ಕಳುಹಿಸುವ ಭರವಸೆ ನೀಡಿ, ಕೆಲವೆ ಹೊತ್ತಿನಲ್ಲಿ ಹಣವನ್ನು ವಾಪಾಸು ನೀಡಿ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

ಈ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ರಿಕ್ಷಾ ಚಾಲಕ ಹರೀಶ್, ’ಕೊರೊನಾ ಸಮಯದಲ್ಲಿನ ಕಷ್ಟ ನಮಗೂ ಗೊತ್ತು. ನಮ್ಮ ದುಡ್ಡೇ ನಮ್ಮೊಂದಿಗೆ ಇರುವುದಿಲ್ಲ, ಒಂದು ರುಪಾಯಿ ದುಡಿಯಲು ಕಷ್ಟ ಇರುವ ಈ ಕಾಲದಲ್ಲಿ ಅಷ್ಟು ದುಡ್ಡಿನ ಹಿಂದಿರುವ ಶ್ರಮದ ಬಗ್ಗೆ ನನಗೆ ಗೊತ್ತಿದೆ’ ಎಂದು ಹೇಳಿದರು.

ಘಟನೆ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ಸತ್ತಾರ್‌ ವಿವರಿಸಿದ್ದು ಹೀಗೆ, ’ಮೂವತ್ತೈದು ರುಪಾಯಿ ಕೂಡ ಮುಖ್ಯವಾಗುವ ಈ ಸಮಯದಲ್ಲಿ,ಕಣ್ತಪ್ಪಿನಿಂದ ಕ್ಷಣ ಮಾತ್ರದಲ್ಲಿ ಮೂವತ್ತೈದು ಸಾವಿರ ರುಪಾಯಿ ಹರೀಶ್ ಅಕೌಂಟಿಗೆ ಹೋಗಿಯಾಗಿತ್ತು. ಒಂದು ಕ್ಷಣ ಆಕಾಶ ತಲೆ ಮೇಲೆ ಬಿದ್ದಂತೆ ಭಾಸವಾಗಿತ್ತು. ಆದರೆ ಕರೆ ಮಾಡಿದಾಗ ಹರೀಶ್ ಆಡಿದ ಮಾತುಗಳು ಮತ್ತೆ ಹಣ ಸಿಗುವ ಭರವಸೆ ಮೂಡಿಸಿದ್ದವು. ಒಮ್ಮೆಮ್ಮೆ ನಗರದಲ್ಲಿ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಕೈಯಲ್ಲಿ ಹಣವಿದೆ ಅನ್ನುವಾಗ ಗೊಂದಲಗಳು ಮೂಡಿದ್ದರೂ ಸಹ ಅವೆಲ್ಲವನ್ನೂ ಸುಳ್ಳಾಗಿಸಿ ಹರೀಶ್‌ ಹಣವನ್ನು ಹಿಂತಿರುಗಿಸಿದ್ದಾರೆ’ ಎಂದು ಹರೀಶ್‌ಗೆ ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....