Homeರಾಷ್ಟ್ರೀಯಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

ಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

- Advertisement -
- Advertisement -

ದೆಹಲಿಯಲ್ಲಿ ಪತ್ತೆಯಾದ ಐದು ಮಂಕಿಪಾಕ್ಸ್‌‌ ಸೋಂಕಿನ ಪ್ರಕರಣಗಳಲ್ಲಿ, ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಮಾಡದೆ ಇದ್ದರೂ ಅವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯೊಂದು ವಿವರಿಸಿದ್ದು, ಸಮುದಾಯದ ನಡುವೆ ಮಂಕಿಪಾಕ್ಸ್‌ ಸೋಂಕಿನ ಬಗ್ಗೆ ಸರಿಯಾಗಿ ರೋಗನಿರ್ಣಯ ಮಾಡಲು ವಿಫಲವಾಗಿದೆ ವರದಿ ಸೂಚಿಸಿದೆ.

ನವದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು, ಪುಣೆಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ – ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ನವದೆಹಲಿಯ ಏಮ್ಸ್‌ನ ಸಂಶೋಧಕರು, ಸೋಂಕು ಹರಡಲು ಹೆಚ್ಚಿನ ಸಾಧ್ಯತೆ ಇರುವ ಪುರುಷ ಮತ್ತು ಸ್ತ್ರೀ ಲೈಂಗಿಕ ಕಾರ್ಯಕರ್ತರೊಂದಿಗೆ ಲೈಂಗಿಕತೆಯಲ್ಲಿ ಏರ್ಪಡುವ ಜನರಲ್ಲಿ ಮಂಕಿಪಾಕ್ಸ್ ವೈರಸ್ (MPXV)ನ ಸಕ್ರಿಯ ಕಣ್ಗಾವಲು ಅಗತ್ಯವನ್ನು ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವರ್ಷ ಜುಲೈ 14 ರಂದು, ಭಾರತದ ಮೊದಲ ಮಂಕಿಪಾಕ್ಸ್‌‌ ಪ್ರಕರಣ ಕೇರಳದಲ್ಲಿ ವರದಿ ಆಗಿತ್ತು. ಅಂದಿನಿಂದ, ಅಕ್ಟೋಬರ್ 13, 2022 ರವರೆಗೆ ಕೇರಳದಲ್ಲಿ 6 ಪ್ರಕರಣದಗಳು ಮತ್ತು ದೆಹಲಿಯಲ್ಲಿ 14 ಪ್ರಕರಣಗಳು ಸೇರಿ ಒಟ್ಟು 20 ದೃಡಪಡಿಸಿದ ಮಂಕಿಪಾಕ್ಸ್ ಪ್ರಕರಣಗಳನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಮಂಕಿಪಾಕ್ಸ್: ಆತಂಕದ ಅವಶ್ಯಕತೆ ಇಲ್ಲ; ತಿಳಿವಳಿಕೆ ಮತ್ತು ಮುನ್ನೆಚ್ಚರಿಕೆಯಿಂದ ನಿಯಂತ್ರಣ ಸಾಧ್ಯ

ಅಕ್ಟೋಬರ್‌ನಲ್ಲಿ ಜರ್ನಲ್ ಆಫ್ ಮೆಡಿಕಲ್ ವೈರಾಲಜಿಯಲ್ಲಿ ಪ್ರಕಟವಾದ ಅಧ್ಯಯನವು, ಕೇರಳದಲ್ಲಿ ಪತ್ತೆಯಾದ ಪ್ರಕರಣಗಳು ಉತ್ತಮವಾಗಿ ವ್ಯಾಖ್ಯಾನಿಸಲಾದ ಸಾಂಕ್ರಾಮಿಕ ರೋಗಶಾಸ್ತ್ರೀಯ ಸಂಬಂಧವನ್ನು ಹೊಂದಿವೆ ಎಂದು ಹೇಳಿದೆ. ಕೇರಳದ ಈ ಪ್ರಕರಣಗಳಲ್ಲಿ ರೋಗಿಗಳು ಅಂತರಾಷ್ಟ್ರೀಯ ಪ್ರಯಾಣ ಮಾಡಿರುವ ಬಗ್ಗೆ ಮತ್ತು ಶಂಕಿತ ರೋಗಿಗಳೊಂದಿಗೆ ಸಂಪರ್ಕ ಇದ್ದ ಬಗ್ಗೆ ಹೇಳಲಾಗಿದೆ.

ಆದರೆ ದೆಹಲಿಯಲ್ಲಿ ಪತ್ತೆಯಾದ ಮಂಕಿಪಾಕ್ಸ್‌‌‌ ಪ್ರಕರಣದಲ್ಲಿ ರೋಗಿಗಳು ಸೋಂಕಿತ ಪ್ರದೇಶಗಳಿಗೆ ಪ್ರಯಾಣ ಮಾಡದೆ ಅವರಿಗೆ ಸೋಂಕು ತಗಲಿರುವ ಬಗ್ಗೆ ವರದಿ ಉಲ್ಲೇಖಿಸಿದೆ. “ನವದೆಹಲಿಯಿಂದ ದೃಢಪಟ್ಟ ಮಂಕಿಪಾಕ್ಸ್ ಪ್ರಕರಣಗಳಲ್ಲಿ ಸೋಂಕಿತರು, ಮಂಕಿಪಾಕ್ಸ್ ಇರುವ ಪ್ರದೇಶಗಳಿಗೆ ಪ್ರಯಾಣ ಮಾಡಿಲ್ಲ” ಎಂದು ಸಂಶೋಧಕರು ತಿಳಿಸಿದ್ದು, ಜೊತೆಗೆ ಈ ಮಂಕಿಪಾಕ್ಸ್ ಪ್ರಕರಣಗಳು ಸೌಮ್ಯವಾಗಿರುತ್ತವೆ ಮತ್ತು ಸಂಪೂರ್ಣವಾಗಿ ಚೇತರಿಸಿಕೊಂಡಿವೆ ಎಂದು ತಿಳಿಸಿದ್ದಾರೆ.

“ಇದು ಆರಂಭಿಕ ಪತ್ತೆ ಮತ್ತು ರೋಗಿಗಳ ನಿರ್ವಹಣೆಗೆ ಸಕಾಲಿಕ ಕ್ಲಿನಿಕಲ್ ಮತ್ತು ಪ್ರಯೋಗಾಲಯ ರೋಗನಿರ್ಣಯದ ಮಹತ್ವವನ್ನು ಒತ್ತಿಹೇಳುತ್ತದೆ” ಎಂದು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಪ್ರಮುಖ ಲೇಖಕ ಡಾ. ವಿನೀತ್ ರೆಲ್ಹಾನ್ ವರದಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರ ಮೂಲಕ ಪ್ರಮುಖವಾಗಿ ಮಂಕಿಪಾಕ್ಸ್‌ ಹರಡುತ್ತಿದೆ ಎಂದು 2022 ರ ವರದಿ ಉಲ್ಲೇಖಿಸಿತ್ತು.

ಆದ್ದರಿಂದ, ಸೋಂಕಿನ ಪ್ರಸರಣವನ್ನು ಅರ್ಥಮಾಡಿಕೊಳ್ಳಲು ಪುರುಷ-ಪುರುಷರ ನಡೆಸುವ ಲೈಂಗಿಕ ಸಂಬಂಧ ನಡೆಸುವವರು, ಮಹಿಳಾ ಲೈಂಗಿಕ ಕಾರ್ಯಕರ್ತರು, ಪುರುಷ ಮತ್ತು ಸ್ತ್ರೀಯರೊಂದಿಗೆ ಲೈಂಗಿಕ ಸಂಬಂಧದಲ್ಲಿ ಏರ್ಪಡುವ ಜನರ ಮೇಲೆ ತೀವ್ರ ಕಣ್ಗಾವಲು ಅಗತ್ಯವಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಮಂಕಿಪಾಕ್ಸ್ ಸೋಂಕಿನ ಹೊಸ ಪ್ರಸ್ತುತಿಗಳನ್ನು ಅರ್ಥಮಾಡಿಕೊಳ್ಳಲು ಆರೋಗ್ಯ ಕಾರ್ಯಕರ್ತರಲ್ಲಿ, ನಿರ್ದಿಷ್ಟವಾಗಿ ಲೈಂಗಿಕವಾಗಿ ಹರಡುವ ಸೋಂಕುಗಳು ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡುವವರಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಅಧ್ಯಯನ ಹೇಳಿದೆ.

ಇದನ್ನೂ ಓದಿ: ಭಾರತದ ಮೊದಲನೇ ‘ಮಂಕಿಪಾಕ್ಸ್‌‌’ ಕೇರಳದಲ್ಲಿ ಪತ್ತೆ

ಮಂಕಿಪಾಕ್ಸ್ ವೈರಸ್ ಒಂದು ಹೆಚ್ಚುತ್ತಿರುವ ಆರ್ಥೋಪಾಕ್ಸ್ ವೈರಸ್ ಆಗಿದ್ದು, ಮೇ 2022 ರಿಂದ ಪತ್ತೆಯಾಗುತ್ತಿದೆ. ಅಕ್ಟೋಬರ್ 14, 2022 ರವರೆಗೆ 109 ಸ್ಥಳಗಳಿಂದ ಒಟ್ಟು 73,288 ಮಂಕಿಪಾಕ್ಸ್‌ ಪ್ರಕರಣಗಳು ಪತ್ತೆಹಚ್ಚಲಾಗಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...