Homeರಾಷ್ಟ್ರೀಯಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

ಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

- Advertisement -
- Advertisement -

ದೆಹಲಿಯಲ್ಲಿ ಪತ್ತೆಯಾದ ಐದು ಮಂಕಿಪಾಕ್ಸ್‌‌ ಸೋಂಕಿನ ಪ್ರಕರಣಗಳಲ್ಲಿ, ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಮಾಡದೆ ಇದ್ದರೂ ಅವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯೊಂದು ವಿವರಿಸಿದ್ದು, ಸಮುದಾಯದ ನಡುವೆ ಮಂಕಿಪಾಕ್ಸ್‌ ಸೋಂಕಿನ ಬಗ್ಗೆ ಸರಿಯಾಗಿ ರೋಗನಿರ್ಣಯ ಮಾಡಲು ವಿಫಲವಾಗಿದೆ ವರದಿ ಸೂಚಿಸಿದೆ.

ನವದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು, ಪುಣೆಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ – ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ನವದೆಹಲಿಯ ಏಮ್ಸ್‌ನ ಸಂಶೋಧಕರು, ಸೋಂಕು ಹರಡಲು ಹೆಚ್ಚಿನ ಸಾಧ್ಯತೆ ಇರುವ ಪುರುಷ ಮತ್ತು ಸ್ತ್ರೀ ಲೈಂಗಿಕ ಕಾರ್ಯಕರ್ತರೊಂದಿಗೆ ಲೈಂಗಿಕತೆಯಲ್ಲಿ ಏರ್ಪಡುವ ಜನರಲ್ಲಿ ಮಂಕಿಪಾಕ್ಸ್ ವೈರಸ್ (MPXV)ನ ಸಕ್ರಿಯ ಕಣ್ಗಾವಲು ಅಗತ್ಯವನ್ನು ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವರ್ಷ ಜುಲೈ 14 ರಂದು, ಭಾರತದ ಮೊದಲ ಮಂಕಿಪಾಕ್ಸ್‌‌ ಪ್ರಕರಣ ಕೇರಳದಲ್ಲಿ ವರದಿ ಆಗಿತ್ತು. ಅಂದಿನಿಂದ, ಅಕ್ಟೋಬರ್ 13, 2022 ರವರೆಗೆ ಕೇರಳದಲ್ಲಿ 6 ಪ್ರಕರಣದಗಳು ಮತ್ತು ದೆಹಲಿಯಲ್ಲಿ 14 ಪ್ರಕರಣಗಳು ಸೇರಿ ಒಟ್ಟು 20 ದೃಡಪಡಿಸಿದ ಮಂಕಿಪಾಕ್ಸ್ ಪ್ರಕರಣಗಳನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಮಂಕಿಪಾಕ್ಸ್: ಆತಂಕದ ಅವಶ್ಯಕತೆ ಇಲ್ಲ; ತಿಳಿವಳಿಕೆ ಮತ್ತು ಮುನ್ನೆಚ್ಚರಿಕೆಯಿಂದ ನಿಯಂತ್ರಣ ಸಾಧ್ಯ

ಅಕ್ಟೋಬರ್‌ನಲ್ಲಿ ಜರ್ನಲ್ ಆಫ್ ಮೆಡಿಕಲ್ ವೈರಾಲಜಿಯಲ್ಲಿ ಪ್ರಕಟವಾದ ಅಧ್ಯಯನವು, ಕೇರಳದಲ್ಲಿ ಪತ್ತೆಯಾದ ಪ್ರಕರಣಗಳು ಉತ್ತಮವಾಗಿ ವ್ಯಾಖ್ಯಾನಿಸಲಾದ ಸಾಂಕ್ರಾಮಿಕ ರೋಗಶಾಸ್ತ್ರೀಯ ಸಂಬಂಧವನ್ನು ಹೊಂದಿವೆ ಎಂದು ಹೇಳಿದೆ. ಕೇರಳದ ಈ ಪ್ರಕರಣಗಳಲ್ಲಿ ರೋಗಿಗಳು ಅಂತರಾಷ್ಟ್ರೀಯ ಪ್ರಯಾಣ ಮಾಡಿರುವ ಬಗ್ಗೆ ಮತ್ತು ಶಂಕಿತ ರೋಗಿಗಳೊಂದಿಗೆ ಸಂಪರ್ಕ ಇದ್ದ ಬಗ್ಗೆ ಹೇಳಲಾಗಿದೆ.

ಆದರೆ ದೆಹಲಿಯಲ್ಲಿ ಪತ್ತೆಯಾದ ಮಂಕಿಪಾಕ್ಸ್‌‌‌ ಪ್ರಕರಣದಲ್ಲಿ ರೋಗಿಗಳು ಸೋಂಕಿತ ಪ್ರದೇಶಗಳಿಗೆ ಪ್ರಯಾಣ ಮಾಡದೆ ಅವರಿಗೆ ಸೋಂಕು ತಗಲಿರುವ ಬಗ್ಗೆ ವರದಿ ಉಲ್ಲೇಖಿಸಿದೆ. “ನವದೆಹಲಿಯಿಂದ ದೃಢಪಟ್ಟ ಮಂಕಿಪಾಕ್ಸ್ ಪ್ರಕರಣಗಳಲ್ಲಿ ಸೋಂಕಿತರು, ಮಂಕಿಪಾಕ್ಸ್ ಇರುವ ಪ್ರದೇಶಗಳಿಗೆ ಪ್ರಯಾಣ ಮಾಡಿಲ್ಲ” ಎಂದು ಸಂಶೋಧಕರು ತಿಳಿಸಿದ್ದು, ಜೊತೆಗೆ ಈ ಮಂಕಿಪಾಕ್ಸ್ ಪ್ರಕರಣಗಳು ಸೌಮ್ಯವಾಗಿರುತ್ತವೆ ಮತ್ತು ಸಂಪೂರ್ಣವಾಗಿ ಚೇತರಿಸಿಕೊಂಡಿವೆ ಎಂದು ತಿಳಿಸಿದ್ದಾರೆ.

“ಇದು ಆರಂಭಿಕ ಪತ್ತೆ ಮತ್ತು ರೋಗಿಗಳ ನಿರ್ವಹಣೆಗೆ ಸಕಾಲಿಕ ಕ್ಲಿನಿಕಲ್ ಮತ್ತು ಪ್ರಯೋಗಾಲಯ ರೋಗನಿರ್ಣಯದ ಮಹತ್ವವನ್ನು ಒತ್ತಿಹೇಳುತ್ತದೆ” ಎಂದು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಪ್ರಮುಖ ಲೇಖಕ ಡಾ. ವಿನೀತ್ ರೆಲ್ಹಾನ್ ವರದಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರ ಮೂಲಕ ಪ್ರಮುಖವಾಗಿ ಮಂಕಿಪಾಕ್ಸ್‌ ಹರಡುತ್ತಿದೆ ಎಂದು 2022 ರ ವರದಿ ಉಲ್ಲೇಖಿಸಿತ್ತು.

ಆದ್ದರಿಂದ, ಸೋಂಕಿನ ಪ್ರಸರಣವನ್ನು ಅರ್ಥಮಾಡಿಕೊಳ್ಳಲು ಪುರುಷ-ಪುರುಷರ ನಡೆಸುವ ಲೈಂಗಿಕ ಸಂಬಂಧ ನಡೆಸುವವರು, ಮಹಿಳಾ ಲೈಂಗಿಕ ಕಾರ್ಯಕರ್ತರು, ಪುರುಷ ಮತ್ತು ಸ್ತ್ರೀಯರೊಂದಿಗೆ ಲೈಂಗಿಕ ಸಂಬಂಧದಲ್ಲಿ ಏರ್ಪಡುವ ಜನರ ಮೇಲೆ ತೀವ್ರ ಕಣ್ಗಾವಲು ಅಗತ್ಯವಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಮಂಕಿಪಾಕ್ಸ್ ಸೋಂಕಿನ ಹೊಸ ಪ್ರಸ್ತುತಿಗಳನ್ನು ಅರ್ಥಮಾಡಿಕೊಳ್ಳಲು ಆರೋಗ್ಯ ಕಾರ್ಯಕರ್ತರಲ್ಲಿ, ನಿರ್ದಿಷ್ಟವಾಗಿ ಲೈಂಗಿಕವಾಗಿ ಹರಡುವ ಸೋಂಕುಗಳು ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡುವವರಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಅಧ್ಯಯನ ಹೇಳಿದೆ.

ಇದನ್ನೂ ಓದಿ: ಭಾರತದ ಮೊದಲನೇ ‘ಮಂಕಿಪಾಕ್ಸ್‌‌’ ಕೇರಳದಲ್ಲಿ ಪತ್ತೆ

ಮಂಕಿಪಾಕ್ಸ್ ವೈರಸ್ ಒಂದು ಹೆಚ್ಚುತ್ತಿರುವ ಆರ್ಥೋಪಾಕ್ಸ್ ವೈರಸ್ ಆಗಿದ್ದು, ಮೇ 2022 ರಿಂದ ಪತ್ತೆಯಾಗುತ್ತಿದೆ. ಅಕ್ಟೋಬರ್ 14, 2022 ರವರೆಗೆ 109 ಸ್ಥಳಗಳಿಂದ ಒಟ್ಟು 73,288 ಮಂಕಿಪಾಕ್ಸ್‌ ಪ್ರಕರಣಗಳು ಪತ್ತೆಹಚ್ಚಲಾಗಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...