Homeರಾಷ್ಟ್ರೀಯಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

ಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

- Advertisement -
- Advertisement -

ದೆಹಲಿಯಲ್ಲಿ ಪತ್ತೆಯಾದ ಐದು ಮಂಕಿಪಾಕ್ಸ್‌‌ ಸೋಂಕಿನ ಪ್ರಕರಣಗಳಲ್ಲಿ, ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಮಾಡದೆ ಇದ್ದರೂ ಅವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯೊಂದು ವಿವರಿಸಿದ್ದು, ಸಮುದಾಯದ ನಡುವೆ ಮಂಕಿಪಾಕ್ಸ್‌ ಸೋಂಕಿನ ಬಗ್ಗೆ ಸರಿಯಾಗಿ ರೋಗನಿರ್ಣಯ ಮಾಡಲು ವಿಫಲವಾಗಿದೆ ವರದಿ ಸೂಚಿಸಿದೆ.

ನವದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು, ಪುಣೆಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ – ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ನವದೆಹಲಿಯ ಏಮ್ಸ್‌ನ ಸಂಶೋಧಕರು, ಸೋಂಕು ಹರಡಲು ಹೆಚ್ಚಿನ ಸಾಧ್ಯತೆ ಇರುವ ಪುರುಷ ಮತ್ತು ಸ್ತ್ರೀ ಲೈಂಗಿಕ ಕಾರ್ಯಕರ್ತರೊಂದಿಗೆ ಲೈಂಗಿಕತೆಯಲ್ಲಿ ಏರ್ಪಡುವ ಜನರಲ್ಲಿ ಮಂಕಿಪಾಕ್ಸ್ ವೈರಸ್ (MPXV)ನ ಸಕ್ರಿಯ ಕಣ್ಗಾವಲು ಅಗತ್ಯವನ್ನು ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವರ್ಷ ಜುಲೈ 14 ರಂದು, ಭಾರತದ ಮೊದಲ ಮಂಕಿಪಾಕ್ಸ್‌‌ ಪ್ರಕರಣ ಕೇರಳದಲ್ಲಿ ವರದಿ ಆಗಿತ್ತು. ಅಂದಿನಿಂದ, ಅಕ್ಟೋಬರ್ 13, 2022 ರವರೆಗೆ ಕೇರಳದಲ್ಲಿ 6 ಪ್ರಕರಣದಗಳು ಮತ್ತು ದೆಹಲಿಯಲ್ಲಿ 14 ಪ್ರಕರಣಗಳು ಸೇರಿ ಒಟ್ಟು 20 ದೃಡಪಡಿಸಿದ ಮಂಕಿಪಾಕ್ಸ್ ಪ್ರಕರಣಗಳನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಮಂಕಿಪಾಕ್ಸ್: ಆತಂಕದ ಅವಶ್ಯಕತೆ ಇಲ್ಲ; ತಿಳಿವಳಿಕೆ ಮತ್ತು ಮುನ್ನೆಚ್ಚರಿಕೆಯಿಂದ ನಿಯಂತ್ರಣ ಸಾಧ್ಯ

ಅಕ್ಟೋಬರ್‌ನಲ್ಲಿ ಜರ್ನಲ್ ಆಫ್ ಮೆಡಿಕಲ್ ವೈರಾಲಜಿಯಲ್ಲಿ ಪ್ರಕಟವಾದ ಅಧ್ಯಯನವು, ಕೇರಳದಲ್ಲಿ ಪತ್ತೆಯಾದ ಪ್ರಕರಣಗಳು ಉತ್ತಮವಾಗಿ ವ್ಯಾಖ್ಯಾನಿಸಲಾದ ಸಾಂಕ್ರಾಮಿಕ ರೋಗಶಾಸ್ತ್ರೀಯ ಸಂಬಂಧವನ್ನು ಹೊಂದಿವೆ ಎಂದು ಹೇಳಿದೆ. ಕೇರಳದ ಈ ಪ್ರಕರಣಗಳಲ್ಲಿ ರೋಗಿಗಳು ಅಂತರಾಷ್ಟ್ರೀಯ ಪ್ರಯಾಣ ಮಾಡಿರುವ ಬಗ್ಗೆ ಮತ್ತು ಶಂಕಿತ ರೋಗಿಗಳೊಂದಿಗೆ ಸಂಪರ್ಕ ಇದ್ದ ಬಗ್ಗೆ ಹೇಳಲಾಗಿದೆ.

ಆದರೆ ದೆಹಲಿಯಲ್ಲಿ ಪತ್ತೆಯಾದ ಮಂಕಿಪಾಕ್ಸ್‌‌‌ ಪ್ರಕರಣದಲ್ಲಿ ರೋಗಿಗಳು ಸೋಂಕಿತ ಪ್ರದೇಶಗಳಿಗೆ ಪ್ರಯಾಣ ಮಾಡದೆ ಅವರಿಗೆ ಸೋಂಕು ತಗಲಿರುವ ಬಗ್ಗೆ ವರದಿ ಉಲ್ಲೇಖಿಸಿದೆ. “ನವದೆಹಲಿಯಿಂದ ದೃಢಪಟ್ಟ ಮಂಕಿಪಾಕ್ಸ್ ಪ್ರಕರಣಗಳಲ್ಲಿ ಸೋಂಕಿತರು, ಮಂಕಿಪಾಕ್ಸ್ ಇರುವ ಪ್ರದೇಶಗಳಿಗೆ ಪ್ರಯಾಣ ಮಾಡಿಲ್ಲ” ಎಂದು ಸಂಶೋಧಕರು ತಿಳಿಸಿದ್ದು, ಜೊತೆಗೆ ಈ ಮಂಕಿಪಾಕ್ಸ್ ಪ್ರಕರಣಗಳು ಸೌಮ್ಯವಾಗಿರುತ್ತವೆ ಮತ್ತು ಸಂಪೂರ್ಣವಾಗಿ ಚೇತರಿಸಿಕೊಂಡಿವೆ ಎಂದು ತಿಳಿಸಿದ್ದಾರೆ.

“ಇದು ಆರಂಭಿಕ ಪತ್ತೆ ಮತ್ತು ರೋಗಿಗಳ ನಿರ್ವಹಣೆಗೆ ಸಕಾಲಿಕ ಕ್ಲಿನಿಕಲ್ ಮತ್ತು ಪ್ರಯೋಗಾಲಯ ರೋಗನಿರ್ಣಯದ ಮಹತ್ವವನ್ನು ಒತ್ತಿಹೇಳುತ್ತದೆ” ಎಂದು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಪ್ರಮುಖ ಲೇಖಕ ಡಾ. ವಿನೀತ್ ರೆಲ್ಹಾನ್ ವರದಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರ ಮೂಲಕ ಪ್ರಮುಖವಾಗಿ ಮಂಕಿಪಾಕ್ಸ್‌ ಹರಡುತ್ತಿದೆ ಎಂದು 2022 ರ ವರದಿ ಉಲ್ಲೇಖಿಸಿತ್ತು.

ಆದ್ದರಿಂದ, ಸೋಂಕಿನ ಪ್ರಸರಣವನ್ನು ಅರ್ಥಮಾಡಿಕೊಳ್ಳಲು ಪುರುಷ-ಪುರುಷರ ನಡೆಸುವ ಲೈಂಗಿಕ ಸಂಬಂಧ ನಡೆಸುವವರು, ಮಹಿಳಾ ಲೈಂಗಿಕ ಕಾರ್ಯಕರ್ತರು, ಪುರುಷ ಮತ್ತು ಸ್ತ್ರೀಯರೊಂದಿಗೆ ಲೈಂಗಿಕ ಸಂಬಂಧದಲ್ಲಿ ಏರ್ಪಡುವ ಜನರ ಮೇಲೆ ತೀವ್ರ ಕಣ್ಗಾವಲು ಅಗತ್ಯವಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಮಂಕಿಪಾಕ್ಸ್ ಸೋಂಕಿನ ಹೊಸ ಪ್ರಸ್ತುತಿಗಳನ್ನು ಅರ್ಥಮಾಡಿಕೊಳ್ಳಲು ಆರೋಗ್ಯ ಕಾರ್ಯಕರ್ತರಲ್ಲಿ, ನಿರ್ದಿಷ್ಟವಾಗಿ ಲೈಂಗಿಕವಾಗಿ ಹರಡುವ ಸೋಂಕುಗಳು ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡುವವರಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಅಧ್ಯಯನ ಹೇಳಿದೆ.

ಇದನ್ನೂ ಓದಿ: ಭಾರತದ ಮೊದಲನೇ ‘ಮಂಕಿಪಾಕ್ಸ್‌‌’ ಕೇರಳದಲ್ಲಿ ಪತ್ತೆ

ಮಂಕಿಪಾಕ್ಸ್ ವೈರಸ್ ಒಂದು ಹೆಚ್ಚುತ್ತಿರುವ ಆರ್ಥೋಪಾಕ್ಸ್ ವೈರಸ್ ಆಗಿದ್ದು, ಮೇ 2022 ರಿಂದ ಪತ್ತೆಯಾಗುತ್ತಿದೆ. ಅಕ್ಟೋಬರ್ 14, 2022 ರವರೆಗೆ 109 ಸ್ಥಳಗಳಿಂದ ಒಟ್ಟು 73,288 ಮಂಕಿಪಾಕ್ಸ್‌ ಪ್ರಕರಣಗಳು ಪತ್ತೆಹಚ್ಚಲಾಗಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...