Homeರಾಷ್ಟ್ರೀಯಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

ಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

- Advertisement -
- Advertisement -

ದೆಹಲಿಯಲ್ಲಿ ಪತ್ತೆಯಾದ ಐದು ಮಂಕಿಪಾಕ್ಸ್‌‌ ಸೋಂಕಿನ ಪ್ರಕರಣಗಳಲ್ಲಿ, ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಮಾಡದೆ ಇದ್ದರೂ ಅವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯೊಂದು ವಿವರಿಸಿದ್ದು, ಸಮುದಾಯದ ನಡುವೆ ಮಂಕಿಪಾಕ್ಸ್‌ ಸೋಂಕಿನ ಬಗ್ಗೆ ಸರಿಯಾಗಿ ರೋಗನಿರ್ಣಯ ಮಾಡಲು ವಿಫಲವಾಗಿದೆ ವರದಿ ಸೂಚಿಸಿದೆ.

ನವದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು, ಪುಣೆಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ – ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ನವದೆಹಲಿಯ ಏಮ್ಸ್‌ನ ಸಂಶೋಧಕರು, ಸೋಂಕು ಹರಡಲು ಹೆಚ್ಚಿನ ಸಾಧ್ಯತೆ ಇರುವ ಪುರುಷ ಮತ್ತು ಸ್ತ್ರೀ ಲೈಂಗಿಕ ಕಾರ್ಯಕರ್ತರೊಂದಿಗೆ ಲೈಂಗಿಕತೆಯಲ್ಲಿ ಏರ್ಪಡುವ ಜನರಲ್ಲಿ ಮಂಕಿಪಾಕ್ಸ್ ವೈರಸ್ (MPXV)ನ ಸಕ್ರಿಯ ಕಣ್ಗಾವಲು ಅಗತ್ಯವನ್ನು ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವರ್ಷ ಜುಲೈ 14 ರಂದು, ಭಾರತದ ಮೊದಲ ಮಂಕಿಪಾಕ್ಸ್‌‌ ಪ್ರಕರಣ ಕೇರಳದಲ್ಲಿ ವರದಿ ಆಗಿತ್ತು. ಅಂದಿನಿಂದ, ಅಕ್ಟೋಬರ್ 13, 2022 ರವರೆಗೆ ಕೇರಳದಲ್ಲಿ 6 ಪ್ರಕರಣದಗಳು ಮತ್ತು ದೆಹಲಿಯಲ್ಲಿ 14 ಪ್ರಕರಣಗಳು ಸೇರಿ ಒಟ್ಟು 20 ದೃಡಪಡಿಸಿದ ಮಂಕಿಪಾಕ್ಸ್ ಪ್ರಕರಣಗಳನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಮಂಕಿಪಾಕ್ಸ್: ಆತಂಕದ ಅವಶ್ಯಕತೆ ಇಲ್ಲ; ತಿಳಿವಳಿಕೆ ಮತ್ತು ಮುನ್ನೆಚ್ಚರಿಕೆಯಿಂದ ನಿಯಂತ್ರಣ ಸಾಧ್ಯ

ಅಕ್ಟೋಬರ್‌ನಲ್ಲಿ ಜರ್ನಲ್ ಆಫ್ ಮೆಡಿಕಲ್ ವೈರಾಲಜಿಯಲ್ಲಿ ಪ್ರಕಟವಾದ ಅಧ್ಯಯನವು, ಕೇರಳದಲ್ಲಿ ಪತ್ತೆಯಾದ ಪ್ರಕರಣಗಳು ಉತ್ತಮವಾಗಿ ವ್ಯಾಖ್ಯಾನಿಸಲಾದ ಸಾಂಕ್ರಾಮಿಕ ರೋಗಶಾಸ್ತ್ರೀಯ ಸಂಬಂಧವನ್ನು ಹೊಂದಿವೆ ಎಂದು ಹೇಳಿದೆ. ಕೇರಳದ ಈ ಪ್ರಕರಣಗಳಲ್ಲಿ ರೋಗಿಗಳು ಅಂತರಾಷ್ಟ್ರೀಯ ಪ್ರಯಾಣ ಮಾಡಿರುವ ಬಗ್ಗೆ ಮತ್ತು ಶಂಕಿತ ರೋಗಿಗಳೊಂದಿಗೆ ಸಂಪರ್ಕ ಇದ್ದ ಬಗ್ಗೆ ಹೇಳಲಾಗಿದೆ.

ಆದರೆ ದೆಹಲಿಯಲ್ಲಿ ಪತ್ತೆಯಾದ ಮಂಕಿಪಾಕ್ಸ್‌‌‌ ಪ್ರಕರಣದಲ್ಲಿ ರೋಗಿಗಳು ಸೋಂಕಿತ ಪ್ರದೇಶಗಳಿಗೆ ಪ್ರಯಾಣ ಮಾಡದೆ ಅವರಿಗೆ ಸೋಂಕು ತಗಲಿರುವ ಬಗ್ಗೆ ವರದಿ ಉಲ್ಲೇಖಿಸಿದೆ. “ನವದೆಹಲಿಯಿಂದ ದೃಢಪಟ್ಟ ಮಂಕಿಪಾಕ್ಸ್ ಪ್ರಕರಣಗಳಲ್ಲಿ ಸೋಂಕಿತರು, ಮಂಕಿಪಾಕ್ಸ್ ಇರುವ ಪ್ರದೇಶಗಳಿಗೆ ಪ್ರಯಾಣ ಮಾಡಿಲ್ಲ” ಎಂದು ಸಂಶೋಧಕರು ತಿಳಿಸಿದ್ದು, ಜೊತೆಗೆ ಈ ಮಂಕಿಪಾಕ್ಸ್ ಪ್ರಕರಣಗಳು ಸೌಮ್ಯವಾಗಿರುತ್ತವೆ ಮತ್ತು ಸಂಪೂರ್ಣವಾಗಿ ಚೇತರಿಸಿಕೊಂಡಿವೆ ಎಂದು ತಿಳಿಸಿದ್ದಾರೆ.

“ಇದು ಆರಂಭಿಕ ಪತ್ತೆ ಮತ್ತು ರೋಗಿಗಳ ನಿರ್ವಹಣೆಗೆ ಸಕಾಲಿಕ ಕ್ಲಿನಿಕಲ್ ಮತ್ತು ಪ್ರಯೋಗಾಲಯ ರೋಗನಿರ್ಣಯದ ಮಹತ್ವವನ್ನು ಒತ್ತಿಹೇಳುತ್ತದೆ” ಎಂದು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಪ್ರಮುಖ ಲೇಖಕ ಡಾ. ವಿನೀತ್ ರೆಲ್ಹಾನ್ ವರದಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರ ಮೂಲಕ ಪ್ರಮುಖವಾಗಿ ಮಂಕಿಪಾಕ್ಸ್‌ ಹರಡುತ್ತಿದೆ ಎಂದು 2022 ರ ವರದಿ ಉಲ್ಲೇಖಿಸಿತ್ತು.

ಆದ್ದರಿಂದ, ಸೋಂಕಿನ ಪ್ರಸರಣವನ್ನು ಅರ್ಥಮಾಡಿಕೊಳ್ಳಲು ಪುರುಷ-ಪುರುಷರ ನಡೆಸುವ ಲೈಂಗಿಕ ಸಂಬಂಧ ನಡೆಸುವವರು, ಮಹಿಳಾ ಲೈಂಗಿಕ ಕಾರ್ಯಕರ್ತರು, ಪುರುಷ ಮತ್ತು ಸ್ತ್ರೀಯರೊಂದಿಗೆ ಲೈಂಗಿಕ ಸಂಬಂಧದಲ್ಲಿ ಏರ್ಪಡುವ ಜನರ ಮೇಲೆ ತೀವ್ರ ಕಣ್ಗಾವಲು ಅಗತ್ಯವಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಮಂಕಿಪಾಕ್ಸ್ ಸೋಂಕಿನ ಹೊಸ ಪ್ರಸ್ತುತಿಗಳನ್ನು ಅರ್ಥಮಾಡಿಕೊಳ್ಳಲು ಆರೋಗ್ಯ ಕಾರ್ಯಕರ್ತರಲ್ಲಿ, ನಿರ್ದಿಷ್ಟವಾಗಿ ಲೈಂಗಿಕವಾಗಿ ಹರಡುವ ಸೋಂಕುಗಳು ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡುವವರಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಅಧ್ಯಯನ ಹೇಳಿದೆ.

ಇದನ್ನೂ ಓದಿ: ಭಾರತದ ಮೊದಲನೇ ‘ಮಂಕಿಪಾಕ್ಸ್‌‌’ ಕೇರಳದಲ್ಲಿ ಪತ್ತೆ

ಮಂಕಿಪಾಕ್ಸ್ ವೈರಸ್ ಒಂದು ಹೆಚ್ಚುತ್ತಿರುವ ಆರ್ಥೋಪಾಕ್ಸ್ ವೈರಸ್ ಆಗಿದ್ದು, ಮೇ 2022 ರಿಂದ ಪತ್ತೆಯಾಗುತ್ತಿದೆ. ಅಕ್ಟೋಬರ್ 14, 2022 ರವರೆಗೆ 109 ಸ್ಥಳಗಳಿಂದ ಒಟ್ಟು 73,288 ಮಂಕಿಪಾಕ್ಸ್‌ ಪ್ರಕರಣಗಳು ಪತ್ತೆಹಚ್ಚಲಾಗಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...