Homeರಾಷ್ಟ್ರೀಯಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

ಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

- Advertisement -
- Advertisement -

ದೆಹಲಿಯಲ್ಲಿ ಪತ್ತೆಯಾದ ಐದು ಮಂಕಿಪಾಕ್ಸ್‌‌ ಸೋಂಕಿನ ಪ್ರಕರಣಗಳಲ್ಲಿ, ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಮಾಡದೆ ಇದ್ದರೂ ಅವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯೊಂದು ವಿವರಿಸಿದ್ದು, ಸಮುದಾಯದ ನಡುವೆ ಮಂಕಿಪಾಕ್ಸ್‌ ಸೋಂಕಿನ ಬಗ್ಗೆ ಸರಿಯಾಗಿ ರೋಗನಿರ್ಣಯ ಮಾಡಲು ವಿಫಲವಾಗಿದೆ ವರದಿ ಸೂಚಿಸಿದೆ.

ನವದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು, ಪುಣೆಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ – ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ನವದೆಹಲಿಯ ಏಮ್ಸ್‌ನ ಸಂಶೋಧಕರು, ಸೋಂಕು ಹರಡಲು ಹೆಚ್ಚಿನ ಸಾಧ್ಯತೆ ಇರುವ ಪುರುಷ ಮತ್ತು ಸ್ತ್ರೀ ಲೈಂಗಿಕ ಕಾರ್ಯಕರ್ತರೊಂದಿಗೆ ಲೈಂಗಿಕತೆಯಲ್ಲಿ ಏರ್ಪಡುವ ಜನರಲ್ಲಿ ಮಂಕಿಪಾಕ್ಸ್ ವೈರಸ್ (MPXV)ನ ಸಕ್ರಿಯ ಕಣ್ಗಾವಲು ಅಗತ್ಯವನ್ನು ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವರ್ಷ ಜುಲೈ 14 ರಂದು, ಭಾರತದ ಮೊದಲ ಮಂಕಿಪಾಕ್ಸ್‌‌ ಪ್ರಕರಣ ಕೇರಳದಲ್ಲಿ ವರದಿ ಆಗಿತ್ತು. ಅಂದಿನಿಂದ, ಅಕ್ಟೋಬರ್ 13, 2022 ರವರೆಗೆ ಕೇರಳದಲ್ಲಿ 6 ಪ್ರಕರಣದಗಳು ಮತ್ತು ದೆಹಲಿಯಲ್ಲಿ 14 ಪ್ರಕರಣಗಳು ಸೇರಿ ಒಟ್ಟು 20 ದೃಡಪಡಿಸಿದ ಮಂಕಿಪಾಕ್ಸ್ ಪ್ರಕರಣಗಳನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಮಂಕಿಪಾಕ್ಸ್: ಆತಂಕದ ಅವಶ್ಯಕತೆ ಇಲ್ಲ; ತಿಳಿವಳಿಕೆ ಮತ್ತು ಮುನ್ನೆಚ್ಚರಿಕೆಯಿಂದ ನಿಯಂತ್ರಣ ಸಾಧ್ಯ

ಅಕ್ಟೋಬರ್‌ನಲ್ಲಿ ಜರ್ನಲ್ ಆಫ್ ಮೆಡಿಕಲ್ ವೈರಾಲಜಿಯಲ್ಲಿ ಪ್ರಕಟವಾದ ಅಧ್ಯಯನವು, ಕೇರಳದಲ್ಲಿ ಪತ್ತೆಯಾದ ಪ್ರಕರಣಗಳು ಉತ್ತಮವಾಗಿ ವ್ಯಾಖ್ಯಾನಿಸಲಾದ ಸಾಂಕ್ರಾಮಿಕ ರೋಗಶಾಸ್ತ್ರೀಯ ಸಂಬಂಧವನ್ನು ಹೊಂದಿವೆ ಎಂದು ಹೇಳಿದೆ. ಕೇರಳದ ಈ ಪ್ರಕರಣಗಳಲ್ಲಿ ರೋಗಿಗಳು ಅಂತರಾಷ್ಟ್ರೀಯ ಪ್ರಯಾಣ ಮಾಡಿರುವ ಬಗ್ಗೆ ಮತ್ತು ಶಂಕಿತ ರೋಗಿಗಳೊಂದಿಗೆ ಸಂಪರ್ಕ ಇದ್ದ ಬಗ್ಗೆ ಹೇಳಲಾಗಿದೆ.

ಆದರೆ ದೆಹಲಿಯಲ್ಲಿ ಪತ್ತೆಯಾದ ಮಂಕಿಪಾಕ್ಸ್‌‌‌ ಪ್ರಕರಣದಲ್ಲಿ ರೋಗಿಗಳು ಸೋಂಕಿತ ಪ್ರದೇಶಗಳಿಗೆ ಪ್ರಯಾಣ ಮಾಡದೆ ಅವರಿಗೆ ಸೋಂಕು ತಗಲಿರುವ ಬಗ್ಗೆ ವರದಿ ಉಲ್ಲೇಖಿಸಿದೆ. “ನವದೆಹಲಿಯಿಂದ ದೃಢಪಟ್ಟ ಮಂಕಿಪಾಕ್ಸ್ ಪ್ರಕರಣಗಳಲ್ಲಿ ಸೋಂಕಿತರು, ಮಂಕಿಪಾಕ್ಸ್ ಇರುವ ಪ್ರದೇಶಗಳಿಗೆ ಪ್ರಯಾಣ ಮಾಡಿಲ್ಲ” ಎಂದು ಸಂಶೋಧಕರು ತಿಳಿಸಿದ್ದು, ಜೊತೆಗೆ ಈ ಮಂಕಿಪಾಕ್ಸ್ ಪ್ರಕರಣಗಳು ಸೌಮ್ಯವಾಗಿರುತ್ತವೆ ಮತ್ತು ಸಂಪೂರ್ಣವಾಗಿ ಚೇತರಿಸಿಕೊಂಡಿವೆ ಎಂದು ತಿಳಿಸಿದ್ದಾರೆ.

“ಇದು ಆರಂಭಿಕ ಪತ್ತೆ ಮತ್ತು ರೋಗಿಗಳ ನಿರ್ವಹಣೆಗೆ ಸಕಾಲಿಕ ಕ್ಲಿನಿಕಲ್ ಮತ್ತು ಪ್ರಯೋಗಾಲಯ ರೋಗನಿರ್ಣಯದ ಮಹತ್ವವನ್ನು ಒತ್ತಿಹೇಳುತ್ತದೆ” ಎಂದು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಪ್ರಮುಖ ಲೇಖಕ ಡಾ. ವಿನೀತ್ ರೆಲ್ಹಾನ್ ವರದಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರ ಮೂಲಕ ಪ್ರಮುಖವಾಗಿ ಮಂಕಿಪಾಕ್ಸ್‌ ಹರಡುತ್ತಿದೆ ಎಂದು 2022 ರ ವರದಿ ಉಲ್ಲೇಖಿಸಿತ್ತು.

ಆದ್ದರಿಂದ, ಸೋಂಕಿನ ಪ್ರಸರಣವನ್ನು ಅರ್ಥಮಾಡಿಕೊಳ್ಳಲು ಪುರುಷ-ಪುರುಷರ ನಡೆಸುವ ಲೈಂಗಿಕ ಸಂಬಂಧ ನಡೆಸುವವರು, ಮಹಿಳಾ ಲೈಂಗಿಕ ಕಾರ್ಯಕರ್ತರು, ಪುರುಷ ಮತ್ತು ಸ್ತ್ರೀಯರೊಂದಿಗೆ ಲೈಂಗಿಕ ಸಂಬಂಧದಲ್ಲಿ ಏರ್ಪಡುವ ಜನರ ಮೇಲೆ ತೀವ್ರ ಕಣ್ಗಾವಲು ಅಗತ್ಯವಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಮಂಕಿಪಾಕ್ಸ್ ಸೋಂಕಿನ ಹೊಸ ಪ್ರಸ್ತುತಿಗಳನ್ನು ಅರ್ಥಮಾಡಿಕೊಳ್ಳಲು ಆರೋಗ್ಯ ಕಾರ್ಯಕರ್ತರಲ್ಲಿ, ನಿರ್ದಿಷ್ಟವಾಗಿ ಲೈಂಗಿಕವಾಗಿ ಹರಡುವ ಸೋಂಕುಗಳು ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡುವವರಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಅಧ್ಯಯನ ಹೇಳಿದೆ.

ಇದನ್ನೂ ಓದಿ: ಭಾರತದ ಮೊದಲನೇ ‘ಮಂಕಿಪಾಕ್ಸ್‌‌’ ಕೇರಳದಲ್ಲಿ ಪತ್ತೆ

ಮಂಕಿಪಾಕ್ಸ್ ವೈರಸ್ ಒಂದು ಹೆಚ್ಚುತ್ತಿರುವ ಆರ್ಥೋಪಾಕ್ಸ್ ವೈರಸ್ ಆಗಿದ್ದು, ಮೇ 2022 ರಿಂದ ಪತ್ತೆಯಾಗುತ್ತಿದೆ. ಅಕ್ಟೋಬರ್ 14, 2022 ರವರೆಗೆ 109 ಸ್ಥಳಗಳಿಂದ ಒಟ್ಟು 73,288 ಮಂಕಿಪಾಕ್ಸ್‌ ಪ್ರಕರಣಗಳು ಪತ್ತೆಹಚ್ಚಲಾಗಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...