Homeಮುಖಪುಟಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಸೋಂಕಿನ ವಿರುದ್ಧ ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ

- Advertisement -
- Advertisement -

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಬುಧವಾರ ಮಂಕಿಪಾಕ್ಸ್ ಲಸಿಕೆ ತಯಾರಿಸಲು ಮತ್ತು ರೋಗವನ್ನು ಪತ್ತೆಹಚ್ಚುವ ಕಿಟ್‌ಗಳನ್ನು ಅಭಿವೃದ್ಧಿಪಡಿಸಲು ಬಿಡ್‌ಗಳನ್ನು ಆಹ್ವಾನಿಸಿದೆ. ಈ ಘೋಷಣೆಯ ನಂತರ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯು ಮಂಕಿಪಾಕ್ಸ್ ವೈರಸ್‌ನ ತಳಿಯನ್ನು ಯಶಸ್ವಿಯಾಗಿ ಪ್ರತ್ಯೇಕಿಸಿರುವುದಾಗಿ ಹೇಳಿದೆ.

ಭಾರತದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಮೂರು ಕೇರಳದಲ್ಲಿ ವರದಿಯಾಗಿದ್ದು, ಒಂದು ಪ್ರಕರಣ ನವದೆಹಲಿಯಲ್ಲಿ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಗ್ಲೇಂಡ್‌ನ ರಾಷ್ಟ್ರೀಯ ಆರೋಗ್ಯ ಸೇವೆಯ ಪ್ರಕಾರ, ಮಂಕಿಪಾಕ್ಸ್ ಅಪರೂಪದ ಸೋಂಕಾಗಿದ್ದು, ಇದು ಪಶ್ಚಿಮ ಅಥವಾ ಮಧ್ಯ ಆಫ್ರಿಕಾದ ಕೆಲವು ಭಾಗಗಳಲ್ಲಿ ದಂಶಕಗಳು (ಇಲಿ, ಅಳಿಲು, ಮುಳ್ಳುಹಂದಿ, ಮೊಲದ ರೀತಿಯ ಪ್ರಬೇಧಗಳು-Rodents) ಮತ್ತು ಸಸ್ತನಿಗಳಂತಹ ಕಾಡು ಪ್ರಾಣಿಗಳ ಮೂಲಕ ಹರಡುತ್ತದೆ.

ಈ ವೈರಸ್ ಸೌಮ್ಯವಾದ ಅನಾರೋಗ್ಯವನ್ನು ಉಂಟುಮಾಡುತ್ತದೆ ಮತ್ತು ಜ್ವರ, ತಲೆನೋವು, ಬೆನ್ನುನೋವು ಮತ್ತು ಚಿಕನ್‌‌ ಫಾಕ್ಸ್‌ ತರಹದ ಗುಳ್ಳೆಗಳಂತಹ ರೋಗಲಕ್ಷಣಗಳನ್ನು ಉಂಟುಮಾಡಬಹುದಾಗಿದೆ. ಸೋಂಕಿತ ವ್ಯಕ್ತಿಯ ಮಂಕಿಪಾಕ್ಸ್ ಚರ್ಮದ ಗುಳ್ಳೆಗಳನ್ನು ಮುಟ್ಟಿದರೆ ಅಥವಾ ರೋಗದಿಂದ ಬಳಲುತ್ತಿರುವವರ ಬಟ್ಟೆ, ಬೆಡ್ ಶೀಟ್ ಅಥವಾ ಟವೆಲ್ ಅನ್ನು ಬಳಸಿದರೆ ಸೋಂಕು ಹರಡಬಹುದು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು, ಅಂತಿಮ ಉತ್ಪನ್ನದ ನಿವ್ವಳ ಮಾರಾಟದಲ್ಲಿ 5% ಕ್ಕಿಂತ ಕಡಿಮೆಯಿಲ್ಲದ ರಾಯಧನದ ಆಧಾರದ ಮೇಲೆ ಅನುಭವಿ ಲಸಿಕೆ ಮತ್ತು ರೋಗ ಪತ್ತೆ ಹಚ್ಚುವ ತಯಾರಕರೊಂದಿಗೆ ತಾವು ಸಹಕರಿಸಲು ಸಿದ್ಧವಾಗಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ರೋಗನಿರ್ಣಯ ಕಿಟ್‌‌ ಅಭಿವೃದ್ಧಿಪಡಿಸಲು ಮತ್ತು ಮೌಲ್ಯೀಕರಿಸಲು ತಯಾರಕರಿಗೆ ಇದು ಸಹಾಯ ಮಾಡುತ್ತದೆ ಎಂದು ಸಂಶೋಧನಾ ಸಂಸ್ಥೆ ಹೇಳಿದೆ.

ಸಾಮೂಹಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ: WHO

ಮಂಕಿಪಾಕ್ಸ್ ವಿರುದ್ಧ ದೇಶಗಳು ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ರೋಗ ಪತ್ತೆ ಮತ್ತು ತಡೆಗಟ್ಟುವಿಕೆಗೆ ಸರ್ಕಾರಗಳು ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

“ಸಿಡುಬು ವಿರುದ್ಧ ಲಭ್ಯವಿರುವ ಲಸಿಕೆಯು ಮಂಗನ ಕಾಯಿಲೆಯ ವಿರುದ್ಧ ಕಾರ್ಯನಿರ್ವಹಿಸುತ್ತದೆಯೇ ಎಂಬ ಸಂಪೂರ್ಣ ಪರಿಣಾಮಕಾರಿತ್ವದ ಮಾಹಿತಿಯನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಸೌಮ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, ಪುರುಷರೊಂದಿಗೆ ಲೈಂಗಿಕ ಸಂಬಂಧ ಇರಿಸಿಕೊಂಡಿರುವ ಪುರುಷರು ವೈರಸ್‌ನಿಂದ ಹೆಚ್ಚು ಪ್ರಭಾವಿತರಾಗುತ್ತಾರೆ ಎಂದು ಅವರು ಹೇಳಿದ್ದಾರೆ. ಇಂತಹ ಪುರುಷರು ತಮ್ಮ ಲೈಂಗಿಕ ಸಂಗಾತಿಗಳನ್ನು ಮಿತಿಗೊಳಿಸಲು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ರಾಜ್ಯ ಸರ್ಕಾರ

“ಪುರುಷರೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಳ್ಳುವ ಪುರುಷರು ಈ ಕ್ಷಣದಲ್ಲಿ ನಿಮ್ಮ ಲೈಂಗಿಕ ಸಂಗಾತಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು, ಹೊಸ ಪುರುಷ ಸಂಗಾತಿಗಳೊಂದಿಗೆ ಲೈಂಗಿಕ ಸಂಪರ್ಕ ಏರ್ಪಡುವ ಮುನ್ನ ಮರುಪರಿಶೀಲಿಸಬೇಕು” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...