Homeಮುಖಪುಟಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಸೋಂಕಿನ ವಿರುದ್ಧ ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ

- Advertisement -
- Advertisement -

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಬುಧವಾರ ಮಂಕಿಪಾಕ್ಸ್ ಲಸಿಕೆ ತಯಾರಿಸಲು ಮತ್ತು ರೋಗವನ್ನು ಪತ್ತೆಹಚ್ಚುವ ಕಿಟ್‌ಗಳನ್ನು ಅಭಿವೃದ್ಧಿಪಡಿಸಲು ಬಿಡ್‌ಗಳನ್ನು ಆಹ್ವಾನಿಸಿದೆ. ಈ ಘೋಷಣೆಯ ನಂತರ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯು ಮಂಕಿಪಾಕ್ಸ್ ವೈರಸ್‌ನ ತಳಿಯನ್ನು ಯಶಸ್ವಿಯಾಗಿ ಪ್ರತ್ಯೇಕಿಸಿರುವುದಾಗಿ ಹೇಳಿದೆ.

ಭಾರತದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಮೂರು ಕೇರಳದಲ್ಲಿ ವರದಿಯಾಗಿದ್ದು, ಒಂದು ಪ್ರಕರಣ ನವದೆಹಲಿಯಲ್ಲಿ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಗ್ಲೇಂಡ್‌ನ ರಾಷ್ಟ್ರೀಯ ಆರೋಗ್ಯ ಸೇವೆಯ ಪ್ರಕಾರ, ಮಂಕಿಪಾಕ್ಸ್ ಅಪರೂಪದ ಸೋಂಕಾಗಿದ್ದು, ಇದು ಪಶ್ಚಿಮ ಅಥವಾ ಮಧ್ಯ ಆಫ್ರಿಕಾದ ಕೆಲವು ಭಾಗಗಳಲ್ಲಿ ದಂಶಕಗಳು (ಇಲಿ, ಅಳಿಲು, ಮುಳ್ಳುಹಂದಿ, ಮೊಲದ ರೀತಿಯ ಪ್ರಬೇಧಗಳು-Rodents) ಮತ್ತು ಸಸ್ತನಿಗಳಂತಹ ಕಾಡು ಪ್ರಾಣಿಗಳ ಮೂಲಕ ಹರಡುತ್ತದೆ.

ಈ ವೈರಸ್ ಸೌಮ್ಯವಾದ ಅನಾರೋಗ್ಯವನ್ನು ಉಂಟುಮಾಡುತ್ತದೆ ಮತ್ತು ಜ್ವರ, ತಲೆನೋವು, ಬೆನ್ನುನೋವು ಮತ್ತು ಚಿಕನ್‌‌ ಫಾಕ್ಸ್‌ ತರಹದ ಗುಳ್ಳೆಗಳಂತಹ ರೋಗಲಕ್ಷಣಗಳನ್ನು ಉಂಟುಮಾಡಬಹುದಾಗಿದೆ. ಸೋಂಕಿತ ವ್ಯಕ್ತಿಯ ಮಂಕಿಪಾಕ್ಸ್ ಚರ್ಮದ ಗುಳ್ಳೆಗಳನ್ನು ಮುಟ್ಟಿದರೆ ಅಥವಾ ರೋಗದಿಂದ ಬಳಲುತ್ತಿರುವವರ ಬಟ್ಟೆ, ಬೆಡ್ ಶೀಟ್ ಅಥವಾ ಟವೆಲ್ ಅನ್ನು ಬಳಸಿದರೆ ಸೋಂಕು ಹರಡಬಹುದು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು, ಅಂತಿಮ ಉತ್ಪನ್ನದ ನಿವ್ವಳ ಮಾರಾಟದಲ್ಲಿ 5% ಕ್ಕಿಂತ ಕಡಿಮೆಯಿಲ್ಲದ ರಾಯಧನದ ಆಧಾರದ ಮೇಲೆ ಅನುಭವಿ ಲಸಿಕೆ ಮತ್ತು ರೋಗ ಪತ್ತೆ ಹಚ್ಚುವ ತಯಾರಕರೊಂದಿಗೆ ತಾವು ಸಹಕರಿಸಲು ಸಿದ್ಧವಾಗಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ರೋಗನಿರ್ಣಯ ಕಿಟ್‌‌ ಅಭಿವೃದ್ಧಿಪಡಿಸಲು ಮತ್ತು ಮೌಲ್ಯೀಕರಿಸಲು ತಯಾರಕರಿಗೆ ಇದು ಸಹಾಯ ಮಾಡುತ್ತದೆ ಎಂದು ಸಂಶೋಧನಾ ಸಂಸ್ಥೆ ಹೇಳಿದೆ.

ಸಾಮೂಹಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ: WHO

ಮಂಕಿಪಾಕ್ಸ್ ವಿರುದ್ಧ ದೇಶಗಳು ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ರೋಗ ಪತ್ತೆ ಮತ್ತು ತಡೆಗಟ್ಟುವಿಕೆಗೆ ಸರ್ಕಾರಗಳು ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

“ಸಿಡುಬು ವಿರುದ್ಧ ಲಭ್ಯವಿರುವ ಲಸಿಕೆಯು ಮಂಗನ ಕಾಯಿಲೆಯ ವಿರುದ್ಧ ಕಾರ್ಯನಿರ್ವಹಿಸುತ್ತದೆಯೇ ಎಂಬ ಸಂಪೂರ್ಣ ಪರಿಣಾಮಕಾರಿತ್ವದ ಮಾಹಿತಿಯನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಸೌಮ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, ಪುರುಷರೊಂದಿಗೆ ಲೈಂಗಿಕ ಸಂಬಂಧ ಇರಿಸಿಕೊಂಡಿರುವ ಪುರುಷರು ವೈರಸ್‌ನಿಂದ ಹೆಚ್ಚು ಪ್ರಭಾವಿತರಾಗುತ್ತಾರೆ ಎಂದು ಅವರು ಹೇಳಿದ್ದಾರೆ. ಇಂತಹ ಪುರುಷರು ತಮ್ಮ ಲೈಂಗಿಕ ಸಂಗಾತಿಗಳನ್ನು ಮಿತಿಗೊಳಿಸಲು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ರಾಜ್ಯ ಸರ್ಕಾರ

“ಪುರುಷರೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಳ್ಳುವ ಪುರುಷರು ಈ ಕ್ಷಣದಲ್ಲಿ ನಿಮ್ಮ ಲೈಂಗಿಕ ಸಂಗಾತಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು, ಹೊಸ ಪುರುಷ ಸಂಗಾತಿಗಳೊಂದಿಗೆ ಲೈಂಗಿಕ ಸಂಪರ್ಕ ಏರ್ಪಡುವ ಮುನ್ನ ಮರುಪರಿಶೀಲಿಸಬೇಕು” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...