Homeಮುಖಪುಟಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಸೋಂಕಿನ ವಿರುದ್ಧ ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ

- Advertisement -
- Advertisement -

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಬುಧವಾರ ಮಂಕಿಪಾಕ್ಸ್ ಲಸಿಕೆ ತಯಾರಿಸಲು ಮತ್ತು ರೋಗವನ್ನು ಪತ್ತೆಹಚ್ಚುವ ಕಿಟ್‌ಗಳನ್ನು ಅಭಿವೃದ್ಧಿಪಡಿಸಲು ಬಿಡ್‌ಗಳನ್ನು ಆಹ್ವಾನಿಸಿದೆ. ಈ ಘೋಷಣೆಯ ನಂತರ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯು ಮಂಕಿಪಾಕ್ಸ್ ವೈರಸ್‌ನ ತಳಿಯನ್ನು ಯಶಸ್ವಿಯಾಗಿ ಪ್ರತ್ಯೇಕಿಸಿರುವುದಾಗಿ ಹೇಳಿದೆ.

ಭಾರತದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಮೂರು ಕೇರಳದಲ್ಲಿ ವರದಿಯಾಗಿದ್ದು, ಒಂದು ಪ್ರಕರಣ ನವದೆಹಲಿಯಲ್ಲಿ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಗ್ಲೇಂಡ್‌ನ ರಾಷ್ಟ್ರೀಯ ಆರೋಗ್ಯ ಸೇವೆಯ ಪ್ರಕಾರ, ಮಂಕಿಪಾಕ್ಸ್ ಅಪರೂಪದ ಸೋಂಕಾಗಿದ್ದು, ಇದು ಪಶ್ಚಿಮ ಅಥವಾ ಮಧ್ಯ ಆಫ್ರಿಕಾದ ಕೆಲವು ಭಾಗಗಳಲ್ಲಿ ದಂಶಕಗಳು (ಇಲಿ, ಅಳಿಲು, ಮುಳ್ಳುಹಂದಿ, ಮೊಲದ ರೀತಿಯ ಪ್ರಬೇಧಗಳು-Rodents) ಮತ್ತು ಸಸ್ತನಿಗಳಂತಹ ಕಾಡು ಪ್ರಾಣಿಗಳ ಮೂಲಕ ಹರಡುತ್ತದೆ.

ಈ ವೈರಸ್ ಸೌಮ್ಯವಾದ ಅನಾರೋಗ್ಯವನ್ನು ಉಂಟುಮಾಡುತ್ತದೆ ಮತ್ತು ಜ್ವರ, ತಲೆನೋವು, ಬೆನ್ನುನೋವು ಮತ್ತು ಚಿಕನ್‌‌ ಫಾಕ್ಸ್‌ ತರಹದ ಗುಳ್ಳೆಗಳಂತಹ ರೋಗಲಕ್ಷಣಗಳನ್ನು ಉಂಟುಮಾಡಬಹುದಾಗಿದೆ. ಸೋಂಕಿತ ವ್ಯಕ್ತಿಯ ಮಂಕಿಪಾಕ್ಸ್ ಚರ್ಮದ ಗುಳ್ಳೆಗಳನ್ನು ಮುಟ್ಟಿದರೆ ಅಥವಾ ರೋಗದಿಂದ ಬಳಲುತ್ತಿರುವವರ ಬಟ್ಟೆ, ಬೆಡ್ ಶೀಟ್ ಅಥವಾ ಟವೆಲ್ ಅನ್ನು ಬಳಸಿದರೆ ಸೋಂಕು ಹರಡಬಹುದು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು, ಅಂತಿಮ ಉತ್ಪನ್ನದ ನಿವ್ವಳ ಮಾರಾಟದಲ್ಲಿ 5% ಕ್ಕಿಂತ ಕಡಿಮೆಯಿಲ್ಲದ ರಾಯಧನದ ಆಧಾರದ ಮೇಲೆ ಅನುಭವಿ ಲಸಿಕೆ ಮತ್ತು ರೋಗ ಪತ್ತೆ ಹಚ್ಚುವ ತಯಾರಕರೊಂದಿಗೆ ತಾವು ಸಹಕರಿಸಲು ಸಿದ್ಧವಾಗಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ರೋಗನಿರ್ಣಯ ಕಿಟ್‌‌ ಅಭಿವೃದ್ಧಿಪಡಿಸಲು ಮತ್ತು ಮೌಲ್ಯೀಕರಿಸಲು ತಯಾರಕರಿಗೆ ಇದು ಸಹಾಯ ಮಾಡುತ್ತದೆ ಎಂದು ಸಂಶೋಧನಾ ಸಂಸ್ಥೆ ಹೇಳಿದೆ.

ಸಾಮೂಹಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ: WHO

ಮಂಕಿಪಾಕ್ಸ್ ವಿರುದ್ಧ ದೇಶಗಳು ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ರೋಗ ಪತ್ತೆ ಮತ್ತು ತಡೆಗಟ್ಟುವಿಕೆಗೆ ಸರ್ಕಾರಗಳು ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

“ಸಿಡುಬು ವಿರುದ್ಧ ಲಭ್ಯವಿರುವ ಲಸಿಕೆಯು ಮಂಗನ ಕಾಯಿಲೆಯ ವಿರುದ್ಧ ಕಾರ್ಯನಿರ್ವಹಿಸುತ್ತದೆಯೇ ಎಂಬ ಸಂಪೂರ್ಣ ಪರಿಣಾಮಕಾರಿತ್ವದ ಮಾಹಿತಿಯನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಸೌಮ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, ಪುರುಷರೊಂದಿಗೆ ಲೈಂಗಿಕ ಸಂಬಂಧ ಇರಿಸಿಕೊಂಡಿರುವ ಪುರುಷರು ವೈರಸ್‌ನಿಂದ ಹೆಚ್ಚು ಪ್ರಭಾವಿತರಾಗುತ್ತಾರೆ ಎಂದು ಅವರು ಹೇಳಿದ್ದಾರೆ. ಇಂತಹ ಪುರುಷರು ತಮ್ಮ ಲೈಂಗಿಕ ಸಂಗಾತಿಗಳನ್ನು ಮಿತಿಗೊಳಿಸಲು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ರಾಜ್ಯ ಸರ್ಕಾರ

“ಪುರುಷರೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಳ್ಳುವ ಪುರುಷರು ಈ ಕ್ಷಣದಲ್ಲಿ ನಿಮ್ಮ ಲೈಂಗಿಕ ಸಂಗಾತಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು, ಹೊಸ ಪುರುಷ ಸಂಗಾತಿಗಳೊಂದಿಗೆ ಲೈಂಗಿಕ ಸಂಪರ್ಕ ಏರ್ಪಡುವ ಮುನ್ನ ಮರುಪರಿಶೀಲಿಸಬೇಕು” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....