Homeಮುಖಪುಟಜುಲೈ 19 ರಿಂದ ಮಾನ್ಸುನ್‌ ಅಧಿವೇಶನ; ಸಂಸತ್‌ ಬಳಿ ಪ್ರತಿಭಟನೆಗೆ ರೈತರು ಸಜ್ಜು!

ಜುಲೈ 19 ರಿಂದ ಮಾನ್ಸುನ್‌ ಅಧಿವೇಶನ; ಸಂಸತ್‌ ಬಳಿ ಪ್ರತಿಭಟನೆಗೆ ರೈತರು ಸಜ್ಜು!

- Advertisement -
- Advertisement -

ಮಾನ್ಸುನ್‌ ಅಧಿವೇಶನ ಜುಲೈ 19 ರಿಂದ ಪ್ರಾರಂಭವಾಗಲಿದ್ದು, ಅಧಿವೇಶನದಲ್ಲಿ ಕೊರೊನಾ ಸಂಬಂಧಿತ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೋಮವಾರ ತಿಳಿಸಿದ್ದಾರೆ.

ಕೊರೊನಾ ವೈರಸ್ ವಿರುದ್ಧ ಲಸಿಕೆ ನೀಡದವರು ಅಧಿವೇಶನದಲ್ಲಿ ಸಂಸತ್ತಿನ ಆವರಣಕ್ಕೆ ಪ್ರವೇಶಿಸುವ ಮೊದಲು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಕೋರಲಾಗುವುದು ಎಂದು ಅವರು ಹೇಳಿದ್ದಾರೆ.

ಸಂಸತ್ತಿನ ಮಾನ್ಸೂನ್ ಅಧಿವೇಶನ ಜುಲೈ 19 ರಿಂದ ಪ್ರಾರಂಭವಾಗಿ ಆಗಸ್ಟ್ 13 ರಂದು ಮುಕ್ತಾಯಗೊಳ್ಳಲಿದೆ.

ಸಂಸತ್ತಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಓಂ ಬಿರ್ಲಾ, 323 ಸಂಸದರು ಕೊರೊನಾ ವೈರಸ್ ವಿರುದ್ಧದ ಲಸಿಕೆಯನ್ನು ಸಂಪೂರ್ಣವಾಗಿ ಪಡೆದಿದ್ದು, 23 ಮಂದಿ ಕೆಲವು ವೈದ್ಯಕೀಯ ಕಾರಣಗಳಿಂದಾಗಿ ತಮ್ಮ ಲಸಿಕೆಯ ಮೊದಲ ಡೋಸ್‌ ಅನ್ನು ಕೂಡಾ ಪಡೆಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜ.26 ರ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ, ವಿಶ್ವಸಂಸ್ಥೆ ಬಳಿ ಹೋಗುವುದಿಲ್ಲ-ರಾಕೇಶ್ ಟಿಕಾಯತ್

ಉಭಯ ಸದನಗಳು ಏಕಕಾಲದಲ್ಲಿ ನಡೆಯಲಿದ್ದು, ಬೆಳಿಗ್ಗೆ 11 ರಿಂದ ಅಧಿವೇಶನ ಆರಂಭವಾಗಲಿದೆ ಎಂದು ಓಂ ಬಿರ್ಲಾ ತಿಳಿಸಿದ್ದಾರೆ.

ಈ ಮಧ್ಯೆ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ, 200 ಮಂದಿ ರೈತರು ಜುಲೈ 22 ರಿಂದ ಸಂಸತ್ ಭವನದ ಬಳಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ‌ಶನಿವಾರ ಹೇಳಿದ್ದರು.

“ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನುಗಳ ಕುರಿತು ಚರ್ಚೆ ನಡೆಸಲು ಬಯಸಿದರೆ, ನಾವು ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಮಾತುಕತೆ ನಡೆಯದಿದ್ದರೆ, ರೈತರ ಪರವಾಗಿ ನಿರ್ಧಾರ ಬರದಿದ್ದರೆ, ಜುಲೈ 22 ರಿಂದ 200 ಮಂದಿ ರೈತರು ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತಾರೆ” ಎಂದು ಟಿಕಾಯತ್ ಹೇಳಿದ್ದರು.

ಇದನ್ನೂ ಓದಿ: ರಾಜಕೀಯಕ್ಕೆ ಬರುವುದಿಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್‌!: ಆರ್‌ಎಂಎಂ ವಿಸರ್ಜನೆ

“ಕೃಷಿ ಕಾನೂನುಗಳನ್ನು ಹಿಂಪಡೆಯದ ಸರ್ಕಾರ, ರೈತ ಪ್ರತಿಭಟನೆಯನ್ನು ಕೊನೆಗೊಳಿಸಲು ಹೇಳುತ್ತಿದ್ದಾರೆ. ರೈತರು 8 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವುದು ಸರ್ಕಾರದ ಆದೇಶಗಳನ್ನು ಪಾಲಿಸಲು ಅಲ್ಲ. ಸರ್ಕಾರ ಮಾತನಾಡಲು ಬಯಸಿದರೆ, ರೈತರ ಜೊತೆಗೆ ಮಾತನಾಡಬಹುದು, ಆದರೆ ಯಾವುದೇ ಷರತ್ತು ವಿಧಿಸಬಾರದು” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನವೆಂಬರ್‌ನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ ಹತ್ತಕ್ಕೂ ಹೆಚ್ಚು ಸುತ್ತಿನ ಚರ್ಚೆಗಳು ನಡೆದಿವೆ, ಆದರೆ ಇಲ್ಲಿಯವರೆಗೂ ಸರ್ಕಾರದ ಯಾವುದೇ ಷರತ್ತುಗಳಿಗೂ ರೈತರು ಒಪ್ಪಿಲ್ಲ.

ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ, ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿದ್ದು, ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲಾಯಿತು. ಸಾಮಾನ್ಯವಾಗಿ ಜುಲೈನಲ್ಲಿ ಪ್ರಾರಂಭವಾಗುವ ಮಾನ್ಸೂನ್ ಅಧಿವೇಶನವು ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಸೆಪ್ಟೆಂಬರ್‌‌ನಲ್ಲಿ ಪ್ರಾರಂಭವಾಗಿತ್ತು.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....