Homeಮುಖಪುಟಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ಈ ಸರ್ಕಾರವು ಸಂಸತ್ತನ್ನು ನೋಟಿಸ್-ಬೋರ್ಡ್‌ ಆಗಿ ಪರಿವರ್ತಿಸಲು ಪ್ರಯತ್ನಿಸುತ್ತದೆ. ಜೊತೆಗೆ ಅದರ ಬಹುಮತವನ್ನು ರಬ್ಬರ್-ಸ್ಟಾಂಪ್ ಆಗಿ ಬಳಸಿಕೊಳ್ಳಲು ಬಯಸುತ್ತದೆ - ಶಶಿ ತರೂರ್

- Advertisement -
- Advertisement -

ಕೊರೊನಾ ಬಿಕ್ಕಟ್ಟಿನ ನಡುವೆ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೆಯ ಸಮಯವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ಸಂಸದರು ಸೇರಿದಂತೆ ಅನೇಕರು ವಿರೋಧಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಓ’ಬ್ರಿಯೆನ್, “ಸಂಸದರು ಅಧಿವೇಶನದಲ್ಲಿ ಕೇಳುವ ಪ್ರಶ್ನೆಗಳನ್ನು 15 ದಿನಗಳ ಮುಂಚಿತವಾಗಿ ಸಲ್ಲಿಸಬೇಕಾಗಿದೆ. ಅಧಿವೇಶನ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುತ್ತದೆ. ಆದರೆ, ಪ್ರಶ್ನೆಯ ಸಮಯ ರದ್ದುಗೊಂಡಿದೆ? ಪ್ರತಿಪಕ್ಷದ ಸಂಸದರು ಸರ್ಕಾರವನ್ನು ಪ್ರಶ್ನಿಸುವ ಹಕ್ಕನ್ನು 1950 ರ ನಂತರ ಮೊದಲನೆಯ ಬಾರಿ ಕಳೆದುಕೊಂಡಿದ್ದಾರೆ? ಸಂಸತ್ತಿನ ಒಟ್ಟಾರೆ ಕೆಲಸದ ಸಮಯ ಬದಲಾಗಿಲ್ಲ, ಆದರೆ ಪ್ರಶ್ನೆಯ ಸಮಯವನ್ನು ಏಕೆ ರದ್ದುಗೊಳಿಸಲಾಗಿದೆ? ಪ್ರಜಾಪ್ರಭುತ್ವದ ಕಗ್ಗೋಲೆಗೆ ಸಾಂಕ್ರಾಮಿಕ ರೋಗದ ನೆಪ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚುತ್ತಿದೆ: ಸೋನಿಯಾ ಗಾಂಧಿ

ಕಾಂಗ್ರೆಸ್ ಸಂಸದ ಶಶಿ ತರೂರ್, “ಸರ್ಕಾರವನ್ನು ಪ್ರಶ್ನಿಸುವುದು ಸಂಸದೀಯ ಪ್ರಜಾಪ್ರಭುತ್ವದ ಆಮ್ಲಜನಕ. ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಬಲ ನಾಯಕರು ಸಾಂಕ್ರಾಮಿಕ ರೋಗದ ನೆಪವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ನಾನು ನಾಲ್ಕು ತಿಂಗಳ ಹಿಂದೆ ಹೇಳಿದ್ದೆ. ವಿಳಂಬವಾದ ಸಂಸತ್ತಿನ ಅಧಿವೇಶನದ ಅಧಿಸೂಚನೆಯು ‘ಪ್ರಶ್ನೆಯ ಸಮಯ’ ಇರುವುದಿಲ್ಲ ಎಂದು ಸ್ಪಷ್ಟವಾಗಿ ಘೋಷಿಸಿದೆ. ನಮ್ಮ ಸುರಕ್ಷತೆಯ ಹೆಸರಿನಲ್ಲಿ ಇದನ್ನು ಸಮರ್ಥಿಸಿಕೊಂಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಈ ಸರ್ಕಾರವು ಸಂಸತ್ತನ್ನು ನೋಟಿಸ್-ಬೋರ್ಡ್‌ ಆಗಿ ಪರಿವರ್ತಿಸಲು ಪ್ರಯತ್ನಿಸುತ್ತದೆ. ಜೊತೆಗೆ ಅದರ ಬಹುಮತವನ್ನು ರಬ್ಬರ್-ಸ್ಟಾಂಪ್ ಆಗಿ ಬಳಸಿಕೊಳ್ಳಲು ಬಯಸುತ್ತದೆ” ಎಂದು ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಅಧೀರ್ ರಂಜನ್ ಚೌಧರಿ ಅವರು ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

ಸಂಸತ್ತಿನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಅಧಿವೇಶನವು ಪ್ರತ್ಯೇಕ ಸಮಯದಲ್ಲಿ ನಡೆಯಲಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಂಸದರಿಗೆ ವಿಶೇಷ ಆಸನ ವ್ಯವಸ್ಥೆ ಮಾಡಲಾಗುತ್ತಿದೆ.

ಲೋಕಸಭೆಯ ಅಧಿವೇಶನ ಮೊದಲ ದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದ್ದು, ಅಧಿವೇಶನ ಮುಗಿಯುವ ಅಕ್ಟೋಬರ್ 1 ರವರೆಗೆ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಮೊದಲ ದಿನ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ಮತ್ತು ಉಳಿದ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ವಾರಾಂತ್ಯಗಳು ಕೆಲಸದ ದಿನಗಳಾಗಿವೆ.

ಯಾವುದೇ ಖಾಸಗಿ ಸದಸ್ಯರ ವ್ಯವಹಾರ ಇರುವುದಿಲ್ಲ. ಸಂಸದರಿಂದ ಕಳುಹಿಸಲಾಗುವ ಬಿಲ್‌ಗಳಿಗೆ ಸಮಯ ನಿಗದಿಪಡಿಸಲಾಗಿದೆ. ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳನ್ನು ಚರ್ಚಿಸಲು ಸದಸ್ಯರಿಗೆ ಶೂನ್ಯ ವೇಳೆ ಇರುತ್ತದೆ. ಆದರೆ ಅದನ್ನು 30 ನಿಮಿಷಗಳಿಗೆ ಕಡಿತಗೊಳಿಸಲಾಗಿದೆ. ಸದನದ ಮೊದಲ ಗಂಟೆಯನ್ನು(ಪ್ರಶ್ನೆ ಸಮಯ) ಸಂಸದರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಲು ಅನುವು ಮಾಡಿಕೊಡಬೇಕಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.

ಇದರ ಬಗ್ಗೆ ಟ್ವಿಟರ್ ನಲ್ಲಿ #Question Hour ಎಂದು ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್ ಟ್ಯಾಗ್ ಬಳಸಿ ಸುಮಾರು 13 ಸಾವಿರಕ್ಕೂ ಹೆಚ್ಚು ಟ್ವೀಟ್ ಗಳನ್ನು ಮಾಡಲಾಗಿದೆ. ವಿರೋಧ ಪಕ್ಷಗಳು ಸೇರಿದಂತೆ ಅನೇಕರು ಪ್ರಶ್ನೆಯ ಸಮಯವನ್ನು ರದ್ದುಗೊಳಿಸಿರುವುದಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...