Homeಮುಖಪುಟಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ಈ ಸರ್ಕಾರವು ಸಂಸತ್ತನ್ನು ನೋಟಿಸ್-ಬೋರ್ಡ್‌ ಆಗಿ ಪರಿವರ್ತಿಸಲು ಪ್ರಯತ್ನಿಸುತ್ತದೆ. ಜೊತೆಗೆ ಅದರ ಬಹುಮತವನ್ನು ರಬ್ಬರ್-ಸ್ಟಾಂಪ್ ಆಗಿ ಬಳಸಿಕೊಳ್ಳಲು ಬಯಸುತ್ತದೆ - ಶಶಿ ತರೂರ್

- Advertisement -
- Advertisement -

ಕೊರೊನಾ ಬಿಕ್ಕಟ್ಟಿನ ನಡುವೆ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೆಯ ಸಮಯವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ಸಂಸದರು ಸೇರಿದಂತೆ ಅನೇಕರು ವಿರೋಧಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಓ’ಬ್ರಿಯೆನ್, “ಸಂಸದರು ಅಧಿವೇಶನದಲ್ಲಿ ಕೇಳುವ ಪ್ರಶ್ನೆಗಳನ್ನು 15 ದಿನಗಳ ಮುಂಚಿತವಾಗಿ ಸಲ್ಲಿಸಬೇಕಾಗಿದೆ. ಅಧಿವೇಶನ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುತ್ತದೆ. ಆದರೆ, ಪ್ರಶ್ನೆಯ ಸಮಯ ರದ್ದುಗೊಂಡಿದೆ? ಪ್ರತಿಪಕ್ಷದ ಸಂಸದರು ಸರ್ಕಾರವನ್ನು ಪ್ರಶ್ನಿಸುವ ಹಕ್ಕನ್ನು 1950 ರ ನಂತರ ಮೊದಲನೆಯ ಬಾರಿ ಕಳೆದುಕೊಂಡಿದ್ದಾರೆ? ಸಂಸತ್ತಿನ ಒಟ್ಟಾರೆ ಕೆಲಸದ ಸಮಯ ಬದಲಾಗಿಲ್ಲ, ಆದರೆ ಪ್ರಶ್ನೆಯ ಸಮಯವನ್ನು ಏಕೆ ರದ್ದುಗೊಳಿಸಲಾಗಿದೆ? ಪ್ರಜಾಪ್ರಭುತ್ವದ ಕಗ್ಗೋಲೆಗೆ ಸಾಂಕ್ರಾಮಿಕ ರೋಗದ ನೆಪ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚುತ್ತಿದೆ: ಸೋನಿಯಾ ಗಾಂಧಿ

ಕಾಂಗ್ರೆಸ್ ಸಂಸದ ಶಶಿ ತರೂರ್, “ಸರ್ಕಾರವನ್ನು ಪ್ರಶ್ನಿಸುವುದು ಸಂಸದೀಯ ಪ್ರಜಾಪ್ರಭುತ್ವದ ಆಮ್ಲಜನಕ. ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಬಲ ನಾಯಕರು ಸಾಂಕ್ರಾಮಿಕ ರೋಗದ ನೆಪವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ನಾನು ನಾಲ್ಕು ತಿಂಗಳ ಹಿಂದೆ ಹೇಳಿದ್ದೆ. ವಿಳಂಬವಾದ ಸಂಸತ್ತಿನ ಅಧಿವೇಶನದ ಅಧಿಸೂಚನೆಯು ‘ಪ್ರಶ್ನೆಯ ಸಮಯ’ ಇರುವುದಿಲ್ಲ ಎಂದು ಸ್ಪಷ್ಟವಾಗಿ ಘೋಷಿಸಿದೆ. ನಮ್ಮ ಸುರಕ್ಷತೆಯ ಹೆಸರಿನಲ್ಲಿ ಇದನ್ನು ಸಮರ್ಥಿಸಿಕೊಂಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಈ ಸರ್ಕಾರವು ಸಂಸತ್ತನ್ನು ನೋಟಿಸ್-ಬೋರ್ಡ್‌ ಆಗಿ ಪರಿವರ್ತಿಸಲು ಪ್ರಯತ್ನಿಸುತ್ತದೆ. ಜೊತೆಗೆ ಅದರ ಬಹುಮತವನ್ನು ರಬ್ಬರ್-ಸ್ಟಾಂಪ್ ಆಗಿ ಬಳಸಿಕೊಳ್ಳಲು ಬಯಸುತ್ತದೆ” ಎಂದು ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಅಧೀರ್ ರಂಜನ್ ಚೌಧರಿ ಅವರು ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

ಸಂಸತ್ತಿನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಅಧಿವೇಶನವು ಪ್ರತ್ಯೇಕ ಸಮಯದಲ್ಲಿ ನಡೆಯಲಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಂಸದರಿಗೆ ವಿಶೇಷ ಆಸನ ವ್ಯವಸ್ಥೆ ಮಾಡಲಾಗುತ್ತಿದೆ.

ಲೋಕಸಭೆಯ ಅಧಿವೇಶನ ಮೊದಲ ದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದ್ದು, ಅಧಿವೇಶನ ಮುಗಿಯುವ ಅಕ್ಟೋಬರ್ 1 ರವರೆಗೆ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಮೊದಲ ದಿನ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ಮತ್ತು ಉಳಿದ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ವಾರಾಂತ್ಯಗಳು ಕೆಲಸದ ದಿನಗಳಾಗಿವೆ.

ಯಾವುದೇ ಖಾಸಗಿ ಸದಸ್ಯರ ವ್ಯವಹಾರ ಇರುವುದಿಲ್ಲ. ಸಂಸದರಿಂದ ಕಳುಹಿಸಲಾಗುವ ಬಿಲ್‌ಗಳಿಗೆ ಸಮಯ ನಿಗದಿಪಡಿಸಲಾಗಿದೆ. ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳನ್ನು ಚರ್ಚಿಸಲು ಸದಸ್ಯರಿಗೆ ಶೂನ್ಯ ವೇಳೆ ಇರುತ್ತದೆ. ಆದರೆ ಅದನ್ನು 30 ನಿಮಿಷಗಳಿಗೆ ಕಡಿತಗೊಳಿಸಲಾಗಿದೆ. ಸದನದ ಮೊದಲ ಗಂಟೆಯನ್ನು(ಪ್ರಶ್ನೆ ಸಮಯ) ಸಂಸದರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಲು ಅನುವು ಮಾಡಿಕೊಡಬೇಕಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.

ಇದರ ಬಗ್ಗೆ ಟ್ವಿಟರ್ ನಲ್ಲಿ #Question Hour ಎಂದು ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್ ಟ್ಯಾಗ್ ಬಳಸಿ ಸುಮಾರು 13 ಸಾವಿರಕ್ಕೂ ಹೆಚ್ಚು ಟ್ವೀಟ್ ಗಳನ್ನು ಮಾಡಲಾಗಿದೆ. ವಿರೋಧ ಪಕ್ಷಗಳು ಸೇರಿದಂತೆ ಅನೇಕರು ಪ್ರಶ್ನೆಯ ಸಮಯವನ್ನು ರದ್ದುಗೊಳಿಸಿರುವುದಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...