Homeಮುಖಪುಟಇಂದು ಸಂಸತ್ ಮುಂಗಾರು ಅಧಿವೇಶನ ಆರಂಭ: ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯ ಪ್ರಸ್ತಾಪಿಸಲು ವಿಪಕ್ಷಗಳ...

ಇಂದು ಸಂಸತ್ ಮುಂಗಾರು ಅಧಿವೇಶನ ಆರಂಭ: ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯ ಪ್ರಸ್ತಾಪಿಸಲು ವಿಪಕ್ಷಗಳ ನಿರ್ಧಾರ

- Advertisement -
- Advertisement -

ಇಂದಿನಿಂದ (ಜುಲೈ 20) ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಒಟ್ಟು 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಇವುಗಳನ್ನು ಈಗಾಗಲೇ ಕೆಳಮನೆಯಲ್ಲಿ ಮಂಡಿಸಲಾಗಿದೆ ಮತ್ತು ಜಂಟಿ ಸಮಿತಿಗಳಿಗೆ ಉಲ್ಲೇಖಿಸಲಾಗಿದೆ.

”ಡೇಟಾ ರಕ್ಷಣೆ ಮಸೂದೆಯು ಕೇಂದ್ರದ ಕಾರ್ಯಸೂಚಿಯ ಒಂದು ಭಾಗವಾಗಿದೆ. ಈ ನಡುವೆ ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಇದೆ. ಇದನ್ನು ಆಮ್ ಆದ್ಮಿ ಪಕ್ಷ ಸರ್ಕಾರವು ತೀವ್ರವಾಗಿ ಟೀಕಿಸಿದೆ. ವಿಪಕ್ಷಗಳ ಸಭೆಯಲ್ಲಿಯೂ ಇದನ್ನು ಖಂಡಿಸಲಾಗಿದೆ. ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದ ಕಾಂಗ್ರೆಸ್ ಕೂಡ ಬಹಿರಂಗವಾಗಿ ಈ ಮಸೂದೆಯನ್ನು ಟೀಕಿಸಿ, ಎಎಪಿಗೆ ಬೆಂಬಲ ಸೂಚಿಸಿದೆ.

ಮತ್ತೊಂದೆಡೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಹ ಸಜ್ಜಾಗಿವೆ. ಮಣಿಪುರ ಗಲಭೆ, ರಾಹುಲ್ ಗಾಂಧಿ ಅನರ್ಹತೆ, ದೆಹಲಿ ಸುಗ್ರೀವಾಜ್ಞೆ, ಪ್ರವಾಹ, ಒರಿಸ್ಸಾ ರೈಲು ದುರಂತ,  ಬೆಲೆ ಏರಿಕೆ, ನಿರುದ್ಯೋಗ ಮತ್ತು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆಗೆ ಪ್ರತಿಪಕ್ಷದ ನಾಯಕರು ಪಟ್ಟು ಹಿಡಿಯುವ ಸಾಧ್ಯತೆ ಇದೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ, ನಿರುದ್ಯೋಗ ಸಮಸ್ಯೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭಾರತ-ಚೀನಾ ಗಡಿ ಸ್ಥಿತಿ, ಮುಂದಿನ ಲೋಕಸಭೆ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟ ರಚನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳು ಮುಖಾಮುಖಿಯಾಗುವುದರೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ತೀವ್ರ ಗದ್ದಲ, ಕೋಲಾಹಲ ಮಧ್ಯೆ ಪ್ರಾರಂಭವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಒಪ್ಪಿಗೆ ನೀಡಿದರೆ, ಪ್ರಧಾನ ವಿರೋಧ ಪಕ್ಷವಾದ ಕಾಂಗ್ರೆಸ್ ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಲು ಹಠ ಹಿಡಿದಿದೆ. ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಖಾಮುಖಿಯಾಗುವ ಸಾಧ್ಯತೆಯಿರುವ ಇನ್ನೊಂದು ಪ್ರಮುಖ ವಿಷಯವೆಂದರೆ ದೆಹಲಿ ಸೇವಾ ಸುಗ್ರೀವಾಜ್ಞೆ.

ಮಣಿಪುರದಲ್ಲಿನ ಹಿಂಸಾಚಾರ ಬಗ್ಗೆ ಪ್ರಧಾನಿ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಲೇ ಬಂದಿದ್ದು ಸದನದಲ್ಲಿ ತೀವ್ರ ಗದ್ದಲ ನಡೆಸುವ ಸಾಧ್ಯತೆಯಿದೆ.

ದೆಹಲಿ ಅಧಿಕಾರಶಾಹಿಗಳ ಮೇಲಿನ ಮಸೂದೆಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಂಗಾರು ಅಧಿವೇಶದಲ್ಲಿ ಭಾರಿ ಮುಖಾಮುಖಿಯಾಗುವ ನಿರೀಕ್ಷೆಯಿದೆ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರೋಧ ಪಕ್ಷಗಳ ಬೆಂಬಲದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷದಲ್ಲಿ 105 ಸದಸ್ಯರು ಮಸೂದೆಯನ್ನು ವಿರೋಧಿಸಿದ್ದಾರೆ.

ಮೇ 3 ರಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗುತ್ತಿರುವ ಮಣಿಪುರ ರಾಜ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಇಂದು ಸಂಸತ್ತಿನ ಅಧಿವೇಶನ ಆರಂಭ ದಿನವೇ ಕೆಲವು ಪಕ್ಷಗಳು ಮುಂದೂಡಿಕೆ ನಿರ್ಣಯವನ್ನು ಮಂಡಿಸಲು ಯೋಜಿಸಿವೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ ನೀಡಿ, ನಮ್ಮ ಪಕ್ಷದ ಮೊದಲ ಬೇಡಿಕೆಯೆಂದರೆ ಮಣಿಪುರ ವಿಷಯದ ಬಗ್ಗೆ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವುದು ಮತ್ತು ಅದನ್ನು ಚರ್ಚಿಸಲು ನಮಗೆ ಅವಕಾಶ ನೀಡುವುದು. ನಾಳೆ, ನಾವು ಇದರ ಮೇಲೆ ಮುಂದೂಡಿಕೆ ನಿರ್ಣಯವನ್ನು ತರಲು ಬಯಸುತ್ತೇವೆ. ದೇಶದ ಪ್ರಮುಖ ಭಾಗವು ಪ್ರವಾಹದಿಂದ ತತ್ತರಿಸಿದೆ. ಈ ಬಗ್ಗೆಯೂ ಚರ್ಚೆಯಾಗಬೇಕು. ಬಾಲಸೋರ್ ರೈಲ್ವೆ ಅಪಘಾತದ ಬಗ್ಗೆಯೂ ಚರ್ಚಿಸಬೇಕು. ನಿರುದ್ಯೋಗ ಮತ್ತು ಹಣದುಬ್ಬರ ದೇಶದ ಸಾಮಾನ್ಯ ಸಮಸ್ಯೆಗಳಾಗಿವೆ. ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ಹೊಡೆತದ ಬಗ್ಗೆಯೂ ಚರ್ಚಿಸಬೇಕು. ಭಾರತ-ಚೀನಾ ಗಡಿ ಪರಿಸ್ಥಿತಿ ಮತ್ತು ಉಭಯ ದೇಶಗಳ ನಡುವಿನ ವ್ಯಾಪಾರವನ್ನು ಸಹ ಚರ್ಚೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್ 11 ರವರೆಗೆ ಮುಂದುವರಿಯುತ್ತದೆ. ಅಧಿವೇಶನದಲ್ಲಿ ಒಟ್ಟು 17 ದಿನ ಕಲಾಪಗಳು ನಡೆಯಲಿವೆ. ಹಳೆಯ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದ್ದು, ನಂತರ ಹೊಸ ಕಟ್ಟಡಕ್ಕೆ ಮಧ್ಯಭಾಗದಲ್ಲಿ ವರ್ಗಾವಣೆಯಾಗಲಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ಹೊಸ ಸಂಸತ್ತನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಇದು 1927 ರಲ್ಲಿ ನಿರ್ಮಿಸಲಾದ ಪ್ರಸ್ತುತ ಕಟ್ಟಡಕ್ಕಿಂತ ಹೆಚ್ಚಿನ ಸ್ಥಳವನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...