Homeಮುಖಪುಟಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್

ಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್

- Advertisement -
- Advertisement -

ದಿಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಬಂದರೆ ದೇವಾಲಯ ಹಾಗೂ ಗುರುದ್ವಾರದ ಅರ್ಚಕರಿಗೆ ಮಾಸಿಕ ತಲಾ 18 ಸಾವಿರ ಭತ್ಯೆ ನೀಡುವ ಯೋಜನೆಯನ್ನು ದಿಲ್ಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಪ್ರಕಟಿಸಿದ್ದಾರೆ.

ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿರುವ ಕೇಜ್ರಿವಾಲ್ ಈ ಮಹತ್ಮದ ಯೋಜನೆಗಳನ್ನು ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಅರ್ಚಕರು “ಗ್ರಂಥಿ ಸಮ್ಮಾನ್” ಯೋಜನೆಯಲ್ಲಿ ಮಾಸಿಕ 18 ಸಾವಿರ ರೂ.ಗಳನ್ನು ಪಡೆಯುತ್ತಾರೆ. ನಾಳೆಯಿಂದಲ್ಲೇ ನೋಂದಣಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು. ನಾಳೆ ತಾವೇ ಖುದ್ದಾಗಿ ದೆಹಲಿ ಕನ್ನಾಟ್ ನಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ ಅಲ್ಲಿನ ಅರ್ಚಕರ ನೋಂದಣಿ ಪ್ರಕ್ರಿಯೇ ಮೇಲ್ವಿಚಾರಣೆ ನಡೆಸುವುದಾಗಿ ಹೇಳಿದರು.

ಮಹಿಳಾ ಸಮ್ಮಾನ್ ಯೋಜನೆಗೆ ದೆಹಲಿಯ ಮಹಿಳೆಯರ ವೈಯಕ್ತ ಮಾಹಿತಿ ಸಂಗ್ರಹಿಸಿರುವ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಆದೇಶ ನೀಡಿರುವ ಬೆನ್ನಲ್ಲೇ ಕೇಜ್ರಿವಾಲ್ ದೇವಾಲಯ ಗುರುದ್ವಾರದ ಅರ್ಚಕರಿಗೆ ಬಂಪರ್ ಯೋಜನೆ ಘೋಷಿಸಿದ್ದಾರೆ.

ಡಿಸೆಂಬರ್ 12ರಂದು ದೆಹಲಿ ಕ್ಯಾಬಿನೆಟ್  ಮಹಿಳೆಯರಿಗೆ ಮಾಸಿಕ ₹ 1,000 ನೀಡುವ “ಮುಖ್ಯ ಮಂತ್ರಿ ಮಹಿಳಾ ಸಮ್ಮಾನ್ ಯೋಜನೆ” ಯನ್ನು ಅನುಮೋದಿಸಿತ್ತು. ಅದೇ ದಿನ ಎಎಪಿ ಮತ್ತೆ ಅಧಿಕಾರಕ್ಕೆ ಬಂದರೆ ಯೋಜನೆಯಡಿ ಭತ್ಯೆಯನ್ನು ತಿಂಗಳಿಗೆ ₹ 2,100ಕ್ಕೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಘೋಷಿಸಿದ್ದರು.

ಅರ್ಚಕರ ನೋಂದಣಿಯನ್ನು ತಡೆಯಲು ಪೊಲೀಸರನ್ನು ಕಳುಹಿಸಬೇಡಿ ಎಂದು ಬಿಜೆಪಿಯನ್ನು ಕೇಳಿದ ಕೇಜ್ರಿವಾಲ್,  ಅರ್ಚಕರು ನಮ್ಮ ಪ್ರಾರ್ಥನೆಗಳನ್ನು ದೇವರಿಗೆ ತಲುಪಿಸುತ್ತಾರೆ. ಬಿಜೆಪಿಯವರು ನಕಲಿ ಪ್ರಕರಣ ದಾಖಲಿಸಿ, ಮಹಿಳಾ ಸಮ್ಮಾನ್ ಯೋಜನೆಯಡಿ ನೋಂದಣಿಯನ್ನು ನಿಲ್ಲಿಸುವಂತೆ ಪೊಲೀಸರನ್ನು ಕಳುಹಿಸಿದ್ದರು. ಆದರೆ ಅದನ್ನು ತಡೆಯಲು ಸಾಧ್ಯವಾಗಲಿಲ್ಲ. ಆ ನೋಂದಣಿ ಮುಂದುವರಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಅರ್ಚಕರಿಗೆ ಪಾವತಿಸಲು ಸರ್ಕಾರ ಹೇಗೆ ಹಣವನ್ನು ವ್ಯವಸ್ಥೆ ಮಾಡುತ್ತದೆ ಎಂದು ಮಾಧ್ಯಮದವರು ಕೇಳಿದಾಗ, “ಈ ಯೋಜನೆಗೆ ಯಾವುದೇ ಹಣದ ಕೊರತೆಯಾಗಲು ನಾನು ಬಿಡುವುದಿಲ್ಲ” ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು ಐದರಲ್ಲಿ ಸಿಖ್ಖರು ಗಮನಾರ್ಹ ಹಿಡಿತ ಹೊಂದಿದ್ದಾರೆ. ಇತರ ಐದು ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದ ಸಿಖ್ ಮತದಾರರಿದ್ದಾರೆ.

ಎಎಪಿ ಸರ್ಕಾರವು 2019ರಲ್ಲಿ ದೆಹಲಿ ಇಮಾಮ್‌ಗಳ ಮಾಸಿಕ ಭತ್ಯೆಯನ್ನು ಮಾಸಿಕ ₹ 10,000 ರಿಂದ ₹ 18,000ಕ್ಕೆ ಹೆಚ್ಚಿಸಿತ್ತು. ಕಳೆದ 14 ತಿಂಗಳಿಂದ ಇಮಾಮ್‌ಗಳ ವೇತನವನ್ನು ಪಾವತಿಸಲಾಗಿಲ್ಲ ಎಂದು ಇಮಾಮ್ ಗಳು ಈಗ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಮನುಸ್ಮೃತಿ ಸುಟ್ಟ ಆರೋಪ: 13 ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು| ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...