Homeಮುಖಪುಟಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್

ಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್

- Advertisement -
- Advertisement -

ದಿಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಬಂದರೆ ದೇವಾಲಯ ಹಾಗೂ ಗುರುದ್ವಾರದ ಅರ್ಚಕರಿಗೆ ಮಾಸಿಕ ತಲಾ 18 ಸಾವಿರ ಭತ್ಯೆ ನೀಡುವ ಯೋಜನೆಯನ್ನು ದಿಲ್ಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಪ್ರಕಟಿಸಿದ್ದಾರೆ.

ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿರುವ ಕೇಜ್ರಿವಾಲ್ ಈ ಮಹತ್ಮದ ಯೋಜನೆಗಳನ್ನು ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಅರ್ಚಕರು “ಗ್ರಂಥಿ ಸಮ್ಮಾನ್” ಯೋಜನೆಯಲ್ಲಿ ಮಾಸಿಕ 18 ಸಾವಿರ ರೂ.ಗಳನ್ನು ಪಡೆಯುತ್ತಾರೆ. ನಾಳೆಯಿಂದಲ್ಲೇ ನೋಂದಣಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು. ನಾಳೆ ತಾವೇ ಖುದ್ದಾಗಿ ದೆಹಲಿ ಕನ್ನಾಟ್ ನಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ ಅಲ್ಲಿನ ಅರ್ಚಕರ ನೋಂದಣಿ ಪ್ರಕ್ರಿಯೇ ಮೇಲ್ವಿಚಾರಣೆ ನಡೆಸುವುದಾಗಿ ಹೇಳಿದರು.

ಮಹಿಳಾ ಸಮ್ಮಾನ್ ಯೋಜನೆಗೆ ದೆಹಲಿಯ ಮಹಿಳೆಯರ ವೈಯಕ್ತ ಮಾಹಿತಿ ಸಂಗ್ರಹಿಸಿರುವ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಆದೇಶ ನೀಡಿರುವ ಬೆನ್ನಲ್ಲೇ ಕೇಜ್ರಿವಾಲ್ ದೇವಾಲಯ ಗುರುದ್ವಾರದ ಅರ್ಚಕರಿಗೆ ಬಂಪರ್ ಯೋಜನೆ ಘೋಷಿಸಿದ್ದಾರೆ.

ಡಿಸೆಂಬರ್ 12ರಂದು ದೆಹಲಿ ಕ್ಯಾಬಿನೆಟ್  ಮಹಿಳೆಯರಿಗೆ ಮಾಸಿಕ ₹ 1,000 ನೀಡುವ “ಮುಖ್ಯ ಮಂತ್ರಿ ಮಹಿಳಾ ಸಮ್ಮಾನ್ ಯೋಜನೆ” ಯನ್ನು ಅನುಮೋದಿಸಿತ್ತು. ಅದೇ ದಿನ ಎಎಪಿ ಮತ್ತೆ ಅಧಿಕಾರಕ್ಕೆ ಬಂದರೆ ಯೋಜನೆಯಡಿ ಭತ್ಯೆಯನ್ನು ತಿಂಗಳಿಗೆ ₹ 2,100ಕ್ಕೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಘೋಷಿಸಿದ್ದರು.

ಅರ್ಚಕರ ನೋಂದಣಿಯನ್ನು ತಡೆಯಲು ಪೊಲೀಸರನ್ನು ಕಳುಹಿಸಬೇಡಿ ಎಂದು ಬಿಜೆಪಿಯನ್ನು ಕೇಳಿದ ಕೇಜ್ರಿವಾಲ್,  ಅರ್ಚಕರು ನಮ್ಮ ಪ್ರಾರ್ಥನೆಗಳನ್ನು ದೇವರಿಗೆ ತಲುಪಿಸುತ್ತಾರೆ. ಬಿಜೆಪಿಯವರು ನಕಲಿ ಪ್ರಕರಣ ದಾಖಲಿಸಿ, ಮಹಿಳಾ ಸಮ್ಮಾನ್ ಯೋಜನೆಯಡಿ ನೋಂದಣಿಯನ್ನು ನಿಲ್ಲಿಸುವಂತೆ ಪೊಲೀಸರನ್ನು ಕಳುಹಿಸಿದ್ದರು. ಆದರೆ ಅದನ್ನು ತಡೆಯಲು ಸಾಧ್ಯವಾಗಲಿಲ್ಲ. ಆ ನೋಂದಣಿ ಮುಂದುವರಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಅರ್ಚಕರಿಗೆ ಪಾವತಿಸಲು ಸರ್ಕಾರ ಹೇಗೆ ಹಣವನ್ನು ವ್ಯವಸ್ಥೆ ಮಾಡುತ್ತದೆ ಎಂದು ಮಾಧ್ಯಮದವರು ಕೇಳಿದಾಗ, “ಈ ಯೋಜನೆಗೆ ಯಾವುದೇ ಹಣದ ಕೊರತೆಯಾಗಲು ನಾನು ಬಿಡುವುದಿಲ್ಲ” ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು ಐದರಲ್ಲಿ ಸಿಖ್ಖರು ಗಮನಾರ್ಹ ಹಿಡಿತ ಹೊಂದಿದ್ದಾರೆ. ಇತರ ಐದು ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದ ಸಿಖ್ ಮತದಾರರಿದ್ದಾರೆ.

ಎಎಪಿ ಸರ್ಕಾರವು 2019ರಲ್ಲಿ ದೆಹಲಿ ಇಮಾಮ್‌ಗಳ ಮಾಸಿಕ ಭತ್ಯೆಯನ್ನು ಮಾಸಿಕ ₹ 10,000 ರಿಂದ ₹ 18,000ಕ್ಕೆ ಹೆಚ್ಚಿಸಿತ್ತು. ಕಳೆದ 14 ತಿಂಗಳಿಂದ ಇಮಾಮ್‌ಗಳ ವೇತನವನ್ನು ಪಾವತಿಸಲಾಗಿಲ್ಲ ಎಂದು ಇಮಾಮ್ ಗಳು ಈಗ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಮನುಸ್ಮೃತಿ ಸುಟ್ಟ ಆರೋಪ: 13 ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...