Homeಮುಖಪುಟತ್ರಿಪುರ ಚುನಾವಣೆಗೆ ತಿಂಗಳುಗಳಷ್ಟೆ ಬಾಕಿ: ಬಿಜೆಪಿ ತೊರೆಯುತ್ತಿರುವ ಹಲವು ಶಾಸಕರು!

ತ್ರಿಪುರ ಚುನಾವಣೆಗೆ ತಿಂಗಳುಗಳಷ್ಟೆ ಬಾಕಿ: ಬಿಜೆಪಿ ತೊರೆಯುತ್ತಿರುವ ಹಲವು ಶಾಸಕರು!

ರಾಜೀನಾಮೆ ನೀಡಿದ 8 ಜನರಲ್ಲಿ ಮೂವರು ಕಾಂಗ್ರೆಸ್ ಪಕ್ಷ ಸೇರಿದರೆ, ಐವರು ತ್ರಿಪಾಹ ಇಂಡಿಜಿನಸ್ ಪ್ರೊಗ್ರೆಸ್ಸಿವ್ ರೀಜನಲ್ ಅಲೆಯನ್ಸ್ ಒಕ್ಕೂಟ ಸೇರಿದ್ದಾರೆ.

- Advertisement -
- Advertisement -

ತ್ರಿಪುರ ರಾಜ್ಯದಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೆ ಮುಂಚಿತವಾಗಿ ಹಲವಾರು ಬಿಜೆಪಿ ಶಾಸಕರು ಸಾಲು ಸಾಲಾಗಿ ಬಿಜೆಪಿ ತೊರೆಯುತ್ತಿದ್ದಾರೆ. ಬುಧವಾರ ಬಿಜೆಪಿಯ ಶಾಸಕ ದಿಬಾ ಚಂದ್ರ ಹ್ರಾಂಗ್‌ಖಾಲ್ ಅವರು ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.

ಬುಡಕಟ್ಟು ನಾಯಕರಾದ ಹ್ರಂಗ್‌ಖಾಲ್, ಉತ್ತರ ತ್ರಿಪುರಾದ ಉನಕೋಟಿ ಜಿಲ್ಲೆಯ ಕರಂಚರಾ ಅಸೆಂಬ್ಲಿ ಸ್ಥಾನದಿಂದ ಬಿಜೆಪಿಯ ಟಿಕೆಟ್‌ನಲ್ಲಿ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದರು. ಅವರು ಬಿಜೆಪಿ ತೊರೆದಿದ್ದಾರೆ. ಇದರೊಂದಿಗೆ ಒಂದು ವರ್ಷದಲ್ಲಿ 5 ಬಿಜೆಪಿ ಶಾಸಕರು ಪಕ್ಷ ತ್ಯಜಿಸಿದರು.

ಒಟ್ಟಾರೆಯಾಗಿ ಬಿಜೆಪಿ ಮೈತ್ರಿ ಭಾಗವಾಗಿರುವ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ ಆಡಳಿತ ಮೈತ್ರಿಕೂಟದ ಎಂಟು ಶಾಸಕರು ಪಕ್ಷಾಂತರ ಮಾಡಿದ್ದಾರೆ. ಇದು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಈ ಹಿಂದೆ ಒಂದು ವರ್ಷದಲ್ಲಿ ಬಿಜೆಪಿ ಶಾಸಕರಾದ ಬುರ್ಬಾ ಮೋಹನ್, ಆಶಿಸ್ ದಾಸ್, ಸುದೀಪ್ ರಾಯ್ ಬರ್ಮನ್, ಆಶಿಸ್ ಕುಮಾರ್ ಸಹಾ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ಅಲ್ಲದೆ ಮೇವರ್ ಕುಮಾರ್ ಜಮಾಟಿಯಾ, ಬೃಶಕೇತು ದೆಬ್ಬರ್ಮಾ ಮತ್ತು ಧನಂಜಯ್ ಮೈತ್ರಿಕೂಟ ತ್ಯಜಿಸಿದ್ದಾರೆ.

ರಾಜೀನಾಮೆ ನೀಡಿದ 8 ಜನರಲ್ಲಿ ಮೂವರು ಕಾಂಗ್ರೆಸ್ ಪಕ್ಷ ಸೇರಿದರೆ, ಐವರು ತ್ರಿಪಾಹ ಇಂಡಿಜಿನಸ್ ಪ್ರೊಗ್ರೆಸ್ಸಿವ್ ರೀಜನಲ್ ಅಲೆಯನ್ಸ್ ಒಕ್ಕೂಟ ಸೇರಿದ್ದಾರೆ.

2023 ಫೆಬ್ರವರಿಯಲ್ಲಿ ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಸದ್ಯ 60 ಸದಸ್ಯರ ವಿಧಾನ ಸಭೆಯಲ್ಲಿ ಬಿಜೆಪಿ 33 ಮತ್ತು ಇತರೆ ಮೈತ್ರಿ ಪಕ್ಷಗಳ 5 ಶಾಸಕರ ಬಲದೊಂದಿಗೆ ಒಟ್ಟು 38 ಸ್ಥಾನಗಳನ್ನು ಪಡೆದು ಅಧಿಕಾರದಲ್ಲಿದೆ.

ಇದನ್ನೂ ಓದಿ: ‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ಮೂರನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...