Homeಮುಖಪುಟಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

ಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

- Advertisement -
- Advertisement -

ಸ್ವಯಂ ಘೋಷಿತ ಗೋರಕ್ಷಕ, ಇಬ್ಬರು ಮುಸ್ಲಿಮರ ಕೊಲೆ ಪ್ರಕರಣದ ಆರೋಪಿ ಮೋನು ಮಾನೇಸರ್‌ನ ಕಾರ್ಯಕ್ರಮಗಳನ್ನು ಯೂಟ್ಯೂಬ್‌ ತನ್ನ ಮ್ಯಾನಿಟೈಸೇಷನ್‌ ವ್ಯಾಪ್ತಿಯಿಂದ ಹೊರಗಿಟ್ಟಿದೆ. ಹೀಗಾಗಿ ಮೋನು ಮಾನೇಸರ್‌ ಪೋಸ್ಟ್‌ ಮಾಡುವ ವಿಡಿಯೊಗಳಿಗೆ ಇನ್ನು ಮುಂದೆ ಹಣ ಬರುವುದಿಲ್ಲ.

ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆತನ ಯೂಟ್ಯೂಬ್‌ ಚಾನೆಲ್‌ನಿಂದ ಒಂಬತ್ತು ವೀಡಿಯೊಗಳನ್ನು ತೆರೆವು ಮಾಡಲಾಗಿದೆ. ಇತರ ಇಬ್ಬರಿಗೆ ವಯಸ್ಸಿನ ನಿರ್ಬಂಧಗಳನ್ನು ಹಾಕಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಅಮೆರಿಕ ಮೂಲದ ಸುದ್ದಿ ವೆಬ್‌ಸೈಟ್‌ Codastorಗೆ ಯೂಟ್ಯೂಟ್‌‌ ಸಂಸ್ಥೆ ಮಂಗಳವಾರ ಇಮೇಲ್ ಮೂಲಕ ಸ್ಪಷ್ಟನೆ ನೀಡಿದೆ. ಮೋನು ಮೋನೇಸರ್‌‌ ಕಮ್ಯುನಿಟಿ ಸ್ಟಾಡರ್ಡ್‌ಗಳನ್ನು ಉಲ್ಲಂಘಿಸುತ್ತಿರುವುದನ್ನು ಉಲ್ಲೇಖಿಸಿದೆ. ಮೋನೇಸರ್‌ ಮತ್ತು ಇತರರು ಇಬ್ಬರು ಮುಸ್ಲಿಂ ಯುವಕರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟಿದ್ದಾರೆ.

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಹತ್ಯೆಯಾಗುವ ಕೆಲವು ದಿನಗಳ ಮೊದಲು ತನಿಖಾ ವರದಿ ಪ್ರಕಟಿಸಿದ್ದ ಆಲ್ಟ್‌ನ್ಯೂಸ್‌, ಮೋನು ಹೇಗೆ ಕಾನೂನಿನ ತಡೆ ಇಲ್ಲದೆ ಹಲವಾರು ಹಿಂಸಾತ್ಮಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂಬುದನ್ನು ಹೊರಗೆಳೆದಿತ್ತು. ಆಲ್ಟ್‌ನ್ಯೂಸ್‌ನ ಶಿಂಜಿನಿ ಮಜುಂದಾರ್‌ ತನಿಖಾ ವರದಿ ಬರೆದಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಮೋನು, ಸಾಕಷ್ಟು ಫಾಲೋಯರ್ಸ್‌‌ಗಳನ್ನು ಹೊಂದಿದ್ದಾರೆ. ಯೂಟ್ಯೂಬ್‌ನಲ್ಲಿ 2 ಲಕ್ಷಕ್ಕೂ ಹೆಚ್ಚು, ಫೇಸ್‌ಬುಕ್ ಪುಟದಲ್ಲಿ 83,000 ಫಾಲೋಯರ್ಸ್‌ಗಳನ್ನು ಹೊಂದಿದ್ದಾರೆ. ಮೆಟಾ ಮತ್ತು ಯೂಟ್ಯೂಬ್‌ನ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಹಲವಾರು ವಿಷಯಗಳನ್ನು ಮೋನು ಅಪ್‌ಲೋಡ್‌ ಮಾಡುತ್ತಲೇ ಬಂದಿದ್ದಾನೆ.

ಗಾಯಗೊಂಡ ಸ್ಥಿತಿಯಲ್ಲಿರುವ ವ್ಯಕ್ತಿಗಳ ತಲೆಗೂದಲಿಡಿದು ಚಿತ್ರ ಹಿಂಸೆ ನೀಡುತ್ತಿರುವ ಪೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಮೋನು ಮತ್ತು ಆತನ ಸಹಚರರು ಅಪ್‌ಲೋಡ್ ಮಾಡುತ್ತಾ ಬಂದಿದ್ದಾರೆ. ಹಸುವಿನ ಕಳ್ಳಸಾಗಣೆಯಲ್ಲಿ ತೊಡಗಿದ ವ್ಯಕ್ತಿಗಳು ಇವರೆಂದು ಮೋನು ಬಣದವರು ವಾದಿಸುತ್ತಾರೆ.

ಮೋನು ಅವರ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾದ ಯಾವುದೇ ವಿಷಯದ ಕುರಿತು ಮೆಟಾ ಸಂಸ್ಥೆ ಈವರೆಗೆ ಕ್ರಮ ಜರುಗಿಸಿಲ್ಲ.

ಕೊಲೆ ಪ್ರಕರಣ

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಈ ಇಬ್ಬರು ಮುಸ್ಲಿಮರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

“ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...