Homeಮುಖಪುಟಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

ಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

- Advertisement -
- Advertisement -

ಸ್ವಯಂ ಘೋಷಿತ ಗೋರಕ್ಷಕ, ಇಬ್ಬರು ಮುಸ್ಲಿಮರ ಕೊಲೆ ಪ್ರಕರಣದ ಆರೋಪಿ ಮೋನು ಮಾನೇಸರ್‌ನ ಕಾರ್ಯಕ್ರಮಗಳನ್ನು ಯೂಟ್ಯೂಬ್‌ ತನ್ನ ಮ್ಯಾನಿಟೈಸೇಷನ್‌ ವ್ಯಾಪ್ತಿಯಿಂದ ಹೊರಗಿಟ್ಟಿದೆ. ಹೀಗಾಗಿ ಮೋನು ಮಾನೇಸರ್‌ ಪೋಸ್ಟ್‌ ಮಾಡುವ ವಿಡಿಯೊಗಳಿಗೆ ಇನ್ನು ಮುಂದೆ ಹಣ ಬರುವುದಿಲ್ಲ.

ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆತನ ಯೂಟ್ಯೂಬ್‌ ಚಾನೆಲ್‌ನಿಂದ ಒಂಬತ್ತು ವೀಡಿಯೊಗಳನ್ನು ತೆರೆವು ಮಾಡಲಾಗಿದೆ. ಇತರ ಇಬ್ಬರಿಗೆ ವಯಸ್ಸಿನ ನಿರ್ಬಂಧಗಳನ್ನು ಹಾಕಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಅಮೆರಿಕ ಮೂಲದ ಸುದ್ದಿ ವೆಬ್‌ಸೈಟ್‌ Codastorಗೆ ಯೂಟ್ಯೂಟ್‌‌ ಸಂಸ್ಥೆ ಮಂಗಳವಾರ ಇಮೇಲ್ ಮೂಲಕ ಸ್ಪಷ್ಟನೆ ನೀಡಿದೆ. ಮೋನು ಮೋನೇಸರ್‌‌ ಕಮ್ಯುನಿಟಿ ಸ್ಟಾಡರ್ಡ್‌ಗಳನ್ನು ಉಲ್ಲಂಘಿಸುತ್ತಿರುವುದನ್ನು ಉಲ್ಲೇಖಿಸಿದೆ. ಮೋನೇಸರ್‌ ಮತ್ತು ಇತರರು ಇಬ್ಬರು ಮುಸ್ಲಿಂ ಯುವಕರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟಿದ್ದಾರೆ.

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಹತ್ಯೆಯಾಗುವ ಕೆಲವು ದಿನಗಳ ಮೊದಲು ತನಿಖಾ ವರದಿ ಪ್ರಕಟಿಸಿದ್ದ ಆಲ್ಟ್‌ನ್ಯೂಸ್‌, ಮೋನು ಹೇಗೆ ಕಾನೂನಿನ ತಡೆ ಇಲ್ಲದೆ ಹಲವಾರು ಹಿಂಸಾತ್ಮಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂಬುದನ್ನು ಹೊರಗೆಳೆದಿತ್ತು. ಆಲ್ಟ್‌ನ್ಯೂಸ್‌ನ ಶಿಂಜಿನಿ ಮಜುಂದಾರ್‌ ತನಿಖಾ ವರದಿ ಬರೆದಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಮೋನು, ಸಾಕಷ್ಟು ಫಾಲೋಯರ್ಸ್‌‌ಗಳನ್ನು ಹೊಂದಿದ್ದಾರೆ. ಯೂಟ್ಯೂಬ್‌ನಲ್ಲಿ 2 ಲಕ್ಷಕ್ಕೂ ಹೆಚ್ಚು, ಫೇಸ್‌ಬುಕ್ ಪುಟದಲ್ಲಿ 83,000 ಫಾಲೋಯರ್ಸ್‌ಗಳನ್ನು ಹೊಂದಿದ್ದಾರೆ. ಮೆಟಾ ಮತ್ತು ಯೂಟ್ಯೂಬ್‌ನ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಹಲವಾರು ವಿಷಯಗಳನ್ನು ಮೋನು ಅಪ್‌ಲೋಡ್‌ ಮಾಡುತ್ತಲೇ ಬಂದಿದ್ದಾನೆ.

ಗಾಯಗೊಂಡ ಸ್ಥಿತಿಯಲ್ಲಿರುವ ವ್ಯಕ್ತಿಗಳ ತಲೆಗೂದಲಿಡಿದು ಚಿತ್ರ ಹಿಂಸೆ ನೀಡುತ್ತಿರುವ ಪೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಮೋನು ಮತ್ತು ಆತನ ಸಹಚರರು ಅಪ್‌ಲೋಡ್ ಮಾಡುತ್ತಾ ಬಂದಿದ್ದಾರೆ. ಹಸುವಿನ ಕಳ್ಳಸಾಗಣೆಯಲ್ಲಿ ತೊಡಗಿದ ವ್ಯಕ್ತಿಗಳು ಇವರೆಂದು ಮೋನು ಬಣದವರು ವಾದಿಸುತ್ತಾರೆ.

ಮೋನು ಅವರ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾದ ಯಾವುದೇ ವಿಷಯದ ಕುರಿತು ಮೆಟಾ ಸಂಸ್ಥೆ ಈವರೆಗೆ ಕ್ರಮ ಜರುಗಿಸಿಲ್ಲ.

ಕೊಲೆ ಪ್ರಕರಣ

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಈ ಇಬ್ಬರು ಮುಸ್ಲಿಮರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

“ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...