Homeಮುಖಪುಟಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

ಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

- Advertisement -
- Advertisement -

ಸ್ವಯಂ ಘೋಷಿತ ಗೋರಕ್ಷಕ, ಇಬ್ಬರು ಮುಸ್ಲಿಮರ ಕೊಲೆ ಪ್ರಕರಣದ ಆರೋಪಿ ಮೋನು ಮಾನೇಸರ್‌ನ ಕಾರ್ಯಕ್ರಮಗಳನ್ನು ಯೂಟ್ಯೂಬ್‌ ತನ್ನ ಮ್ಯಾನಿಟೈಸೇಷನ್‌ ವ್ಯಾಪ್ತಿಯಿಂದ ಹೊರಗಿಟ್ಟಿದೆ. ಹೀಗಾಗಿ ಮೋನು ಮಾನೇಸರ್‌ ಪೋಸ್ಟ್‌ ಮಾಡುವ ವಿಡಿಯೊಗಳಿಗೆ ಇನ್ನು ಮುಂದೆ ಹಣ ಬರುವುದಿಲ್ಲ.

ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆತನ ಯೂಟ್ಯೂಬ್‌ ಚಾನೆಲ್‌ನಿಂದ ಒಂಬತ್ತು ವೀಡಿಯೊಗಳನ್ನು ತೆರೆವು ಮಾಡಲಾಗಿದೆ. ಇತರ ಇಬ್ಬರಿಗೆ ವಯಸ್ಸಿನ ನಿರ್ಬಂಧಗಳನ್ನು ಹಾಕಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಅಮೆರಿಕ ಮೂಲದ ಸುದ್ದಿ ವೆಬ್‌ಸೈಟ್‌ Codastorಗೆ ಯೂಟ್ಯೂಟ್‌‌ ಸಂಸ್ಥೆ ಮಂಗಳವಾರ ಇಮೇಲ್ ಮೂಲಕ ಸ್ಪಷ್ಟನೆ ನೀಡಿದೆ. ಮೋನು ಮೋನೇಸರ್‌‌ ಕಮ್ಯುನಿಟಿ ಸ್ಟಾಡರ್ಡ್‌ಗಳನ್ನು ಉಲ್ಲಂಘಿಸುತ್ತಿರುವುದನ್ನು ಉಲ್ಲೇಖಿಸಿದೆ. ಮೋನೇಸರ್‌ ಮತ್ತು ಇತರರು ಇಬ್ಬರು ಮುಸ್ಲಿಂ ಯುವಕರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟಿದ್ದಾರೆ.

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಹತ್ಯೆಯಾಗುವ ಕೆಲವು ದಿನಗಳ ಮೊದಲು ತನಿಖಾ ವರದಿ ಪ್ರಕಟಿಸಿದ್ದ ಆಲ್ಟ್‌ನ್ಯೂಸ್‌, ಮೋನು ಹೇಗೆ ಕಾನೂನಿನ ತಡೆ ಇಲ್ಲದೆ ಹಲವಾರು ಹಿಂಸಾತ್ಮಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂಬುದನ್ನು ಹೊರಗೆಳೆದಿತ್ತು. ಆಲ್ಟ್‌ನ್ಯೂಸ್‌ನ ಶಿಂಜಿನಿ ಮಜುಂದಾರ್‌ ತನಿಖಾ ವರದಿ ಬರೆದಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಮೋನು, ಸಾಕಷ್ಟು ಫಾಲೋಯರ್ಸ್‌‌ಗಳನ್ನು ಹೊಂದಿದ್ದಾರೆ. ಯೂಟ್ಯೂಬ್‌ನಲ್ಲಿ 2 ಲಕ್ಷಕ್ಕೂ ಹೆಚ್ಚು, ಫೇಸ್‌ಬುಕ್ ಪುಟದಲ್ಲಿ 83,000 ಫಾಲೋಯರ್ಸ್‌ಗಳನ್ನು ಹೊಂದಿದ್ದಾರೆ. ಮೆಟಾ ಮತ್ತು ಯೂಟ್ಯೂಬ್‌ನ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಹಲವಾರು ವಿಷಯಗಳನ್ನು ಮೋನು ಅಪ್‌ಲೋಡ್‌ ಮಾಡುತ್ತಲೇ ಬಂದಿದ್ದಾನೆ.

ಗಾಯಗೊಂಡ ಸ್ಥಿತಿಯಲ್ಲಿರುವ ವ್ಯಕ್ತಿಗಳ ತಲೆಗೂದಲಿಡಿದು ಚಿತ್ರ ಹಿಂಸೆ ನೀಡುತ್ತಿರುವ ಪೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಮೋನು ಮತ್ತು ಆತನ ಸಹಚರರು ಅಪ್‌ಲೋಡ್ ಮಾಡುತ್ತಾ ಬಂದಿದ್ದಾರೆ. ಹಸುವಿನ ಕಳ್ಳಸಾಗಣೆಯಲ್ಲಿ ತೊಡಗಿದ ವ್ಯಕ್ತಿಗಳು ಇವರೆಂದು ಮೋನು ಬಣದವರು ವಾದಿಸುತ್ತಾರೆ.

ಮೋನು ಅವರ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾದ ಯಾವುದೇ ವಿಷಯದ ಕುರಿತು ಮೆಟಾ ಸಂಸ್ಥೆ ಈವರೆಗೆ ಕ್ರಮ ಜರುಗಿಸಿಲ್ಲ.

ಕೊಲೆ ಪ್ರಕರಣ

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಈ ಇಬ್ಬರು ಮುಸ್ಲಿಮರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

“ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...