ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮತೀಯ ಗೂಂಡಾಗಿರಿ ನಡೆದಿದ್ದು, ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ ಮುಸ್ಲಿಂ ವಿದ್ಯಾರ್ಥಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಮೂಡುಬಿದಿರೆಯ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಬಳಿ ನಡೆದಿದೆ.
ಸೋಮವಾರ ರಾತ್ರಿ ಮೂಡಬಿದಿರೆಯ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದ ಎದುರು ಬೆಂಗಳೂರಿಗೆ ಹೋಗಲು ಬಸ್ ಗೆ ವಿದ್ಯಾರ್ಥಿನಿಯೋರ್ವಳು ಕಾಯುತ್ತಿದ್ದಳು. ಈ ವೇಳೆ ಆಕೆಯ ಸಹಪಾಠಿ ವಿದ್ಯಾರ್ಥಿ ಆಕೆಯ ಜೊತೆ ಮಾತನಾಡಿಸಿದ್ದಾನೆ. ಇಬ್ಬರೂ ಮೂಡುಬಿದಿರೆಯ ಒಂದೇ ಕಾಲೇಜಿನ ಒಂದೇ ತರಗತಿಯಲ್ಲಿ ಓದುತ್ತಿದ್ದರು. ಬಸ್ ಬಂದ ಬಳಿಕ ವಿದ್ಯಾರ್ಥಿನಿ ಬಸ್ ಹತ್ತಿಕೊಂಡು ಹೋಗಿದ್ದಾಳೆ. ಬಳಿಕ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಮೂಡುಬಿದಿರೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ವಿಜಯ್, ಅಭಿಲಾಷ್ ಹಾಗೂ ಸಂಜಯ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಜಾದವ್ಪುರ ವಿವಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯ ಬೆತ್ತಲೆ ಮೆರವಣಿಗೆ: ತನಿಖೆಯಲ್ಲಿ ಬಯಲು