Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...