Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...