Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...