Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...