Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....