Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...