Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...