Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...