Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...