HomeUncategorizedಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು

ಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು

- Advertisement -
- Advertisement -

ಮೊರಾದಾಬಾದ್‌ನ ಅಧಿಕಾರಿಗಳು ಜಿಲ್ಲೆಯಲ್ಲಿ ದೀರ್ಘಾವಧಿಯ ವೀಸಾದಲ್ಲಿ ವಾಸಿಸುತ್ತಿರುವ 22 ಪಾಕಿಸ್ತಾನಿ ಮಹಿಳೆಯರನ್ನು ಗುರುತಿಸಿದ್ದಾರೆ. ಅವರು ಭಾರತದಲ್ಲಿ 95 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎಲ್ಲಾ ಮಹಿಳೆಯರು ಪಾಕಿಸ್ತಾನಿ ಪೌರತ್ವವನ್ನು ಇನ್ನೂ ಹೊಂದಿದ್ದಾರೆ, ಆದರೆ ಅವರ ಮಕ್ಕಳು ಭಾರತೀಯ ಪೌರತ್ವವನ್ನು ಪಡೆದಿದ್ದಾರೆ. ಇತ್ತೀಚಿನ ಭದ್ರತಾ ಪರಿಶೀಲನೆಗಳು ಪೊಲೀಸರು ಈ ಕುಟುಂಬಗಳ ಹಿನ್ನೆಲೆ ಮತ್ತು ಕಾನೂನು ಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸುವಂತೆ ಮಾಡಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಪರಿಶೀಲನೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತದಾದ್ಯಂತ ಭದ್ರತಾ ಸಂಸ್ಥೆಗಳು ವಿದೇಶಿ ಪ್ರಜೆಗಳ ಮೇಲೆ, ವಿಶೇಷವಾಗಿ ದೀರ್ಘಾವಧಿಯ ವೀಸಾಗಳಲ್ಲಿ ಭಾರತದಲ್ಲಿ ವಾಸಿಸುವವರ ಮೇಲೆ ತಪಾಸಣೆಯನ್ನು ಹೆಚ್ಚಿಸಿವೆ. ಮೊರಾದಾಬಾದ್‌ನಲ್ಲಿ ಈ ಪರಿಶೀಲನೆಯು 22 ಪಾಕಿಸ್ತಾನಿ ಮಹಿಳೆಯರು ಮತ್ತು ಇಬ್ಬರು ಪಾಕಿಸ್ತಾನಿ ಪುರುಷರು ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ. ಹೆಚ್ಚಿನ ಮಹಿಳೆಯರು ಭಾರತೀಯ ಪುರುಷರನ್ನು ಮದುವೆಯಾದ ನಂತರ ಭಾರತಕ್ಕೆ ಬಂದವರಾಗಿದ್ದಾರೆ.

ಭಾರತೀಯ ನಾಗರಿಕರನ್ನು ಹೊಂದಿರುವ ದೊಡ್ಡ ಕುಟುಂಬಗಳು

ಪೊಲೀಸ್ ತನಿಖೆಯಲ್ಲಿ ಈ 22 ಮಹಿಳೆಯರಿಗೆ ಒಟ್ಟು 95 ಮಕ್ಕಳಿದ್ದು, ಅವರಲ್ಲಿ ಹಲವರು ಈಗ ವಿವಾಹವಾಗಿದ್ದಾರೆ ಎಂದು ಕಂಡುಬಂದಿದೆ. Jagran.com ನ ವರದಿಯ ಪ್ರಕಾರ, ಸುಮಾರು ಪ್ರತಿಶತ 35ರಷ್ಟು ಮಹಿಳೆಯರು ಈಗ ಅಜ್ಜಿಯರಾಗಿದ್ದಾರೆ. ಅವರ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಒಳಗೊಂಡಂತೆ, ಈ ಕುಟುಂಬಗಳು ಈಗ 500ಕ್ಕೂ ಹೆಚ್ಚು ಜನರನ್ನು ಒಳಗೊಂಡಿವೆ. ಮಹಿಳೆಯರು ವಿದೇಶಿ ಪ್ರಜೆಗಳಾಗಿಯೇ ಉಳಿದಿದ್ದರೂ, ಅವರ ಮಕ್ಕಳು ಹುಟ್ಟಿನಿಂದಲೇ ಭಾರತೀಯ ನಾಗರಿಕರಾಗಿದ್ದಾರೆ.

ಆಧಾರ ಕಾರ್ಡ್ ಹೊಂದಿದ್ದರೂ ಪೌರತ್ವವಿಲ್ಲ

ಎಲ್ಲಾ 22 ಮಹಿಳೆಯರು ಭಾರತ ಸರ್ಕಾರ ನೀಡಿದ ಪಡಿತರ ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಈ ದಾಖಲೆಗಳು ಅವರಿಗೆ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪಡೆಯಲು ಅವಕಾಶ ನೀಡುತ್ತವೆ, ಆದರೆ ಅವರಲ್ಲಿ ಯಾರೂ ಇಲ್ಲಿಯವರೆಗೆ ಭಾರತೀಯ ಪೌರತ್ವವನ್ನು ಪಡೆದಿಲ್ಲ. ಪೊಲೀಸರ ಪ್ರಕಾರ, ಅವರೆಲ್ಲರೂ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ದೀರ್ಘಾವಧಿಯ ವೀಸಾಗಳಲ್ಲಿ ಭಾರತದಲ್ಲಿ ವಾಸಿಸುತ್ತಿದ್ದಾರೆ.

ಪೊಲೀಸರು ಇವರ ವೀಸಾ ಮತ್ತು ಕುಟುಂಬದ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ. “ಸಮಗ್ರ ದತ್ತಾಂಶ ಸಂಗ್ರಹ ನಡೆಯುತ್ತಿದೆ. ಪ್ರದೇಶದ ಎಲ್ಲಾ ಪಾಕಿಸ್ತಾನಿ ಮೂಲದ ಕುಟುಂಬಗಳ ವೀಸಾ ಅರ್ಜಿಗಳ ಸ್ಥಿತಿ, ಪಡಿತರ ಚೀಟಿ ಬಳಕೆ, ಕುಟುಂಬದ ಗಾತ್ರ ಮತ್ತು ವಿದೇಶಿ ಸಂಪರ್ಕಗಳು ಸೇರಿದಂತೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ” ಎಂದು ಮೊರಾದಾಬಾದ್ ಪೊಲೀಸ್ ವರಿಷ್ಠಾಧಿಕಾರಿ (ನಗರ) ಕುಮಾರ್ ರಣವಿಜಯ್ ಸಿಂಗ್ ಹೇಳಿದ್ದಾರೆ.

ಇಬ್ಬರು ಮಹಿಳೆಯರು ಕೇವಲ ನಾಲ್ಕು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಾರೆ. ಇತರರು ದಶಕಗಳಿಂದ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಪೊಲೀಸರು ಭಾರತದಲ್ಲಿ ಜನಿಸಿದ 95 ಮಕ್ಕಳ ಪ್ರಸ್ತುತ ಉದ್ಯೋಗವನ್ನು ಪತ್ತೆಹಚ್ಚುತ್ತಿದ್ದಾರೆ ಮತ್ತು ಪಾಕಿಸ್ತಾನದಲ್ಲಿರುವ ಸಂಬಂಧಿಕರೊಂದಿಗೆ ಸಂಪರ್ಕವನ್ನು ಪರಿಶೀಲಿಸುತ್ತಿದ್ದಾರೆ.

ಕಾನೂನು ಸ್ಥಿತಿ ಪರಿಶೀಲನೆಯಲ್ಲಿದೆ

ಯಾವುದೇ ಮಹಿಳೆಯರು ಅಥವಾ ಅವರ ಕುಟುಂಬ ಸದಸ್ಯರ ವಿರುದ್ಧ ಗಡೀಪಾರು ಆದೇಶಗಳನ್ನು ಹೊರಡಿಸಲಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಆದಾಗ್ಯೂ, ರಾಷ್ಟ್ರೀಯ ಭದ್ರತಾ ಕಾಳಜಿಗಳನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಅವರ ವೀಸಾ ಸ್ಥಿತಿ ಮತ್ತು ಕುಟುಂಬ ಸಂಬಂಧಗಳನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸಿದ್ದಾರೆ.

ಈ ಮಹಿಳೆಯರು ಭಾರತ ಸರ್ಕಾರ ನೀಡುವ ಪಡಿತರ ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿದ್ದು, ಸಾರ್ವಜನಿಕ ಕಲ್ಯಾಣ ಸೌಲಭ್ಯಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ, ಆದರೆ ಅವರಲ್ಲಿ ಯಾರೂ ಇಲ್ಲಿಯವರೆಗೆ ಭಾರತೀಯ ಪೌರತ್ವವನ್ನು ಪಡೆದಿಲ್ಲ. ಪೊಲೀಸರ ಪ್ರಕಾರ, ಅವರೆಲ್ಲರೂ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈಗ ಕುಟುಂಬಗಳು ಪಾಕಿಸ್ತಾನಿ ತಾಯಂದಿರಿಗೆ ಜನಿಸಿದ ಭಾರತೀಯ ನಾಗರಿಕರನ್ನು ಒಳಗೊಂಡಿದ್ದು, ಅವರು ವಿದೇಶಿ ಪ್ರಜೆಗಳಾಗಿಯೇ ಉಳಿದಿದ್ದಾರೆ.

ಏತನ್ಮಧ್ಯೆ, ಭಾರತೀಯ ಪೌರತ್ವವನ್ನು ಪಡೆಯದ ದೀರ್ಘಾವಧಿಯ ವೀಸಾಗಳಲ್ಲಿ ಭಾರತದಲ್ಲಿ ವಾಸಿಸುವ ಪಾಕಿಸ್ತಾನಿ ಪ್ರಜೆಗಳು ತಮ್ಮ ವೀಸಾಗಳಿಗೆ ಮತ್ತೆ ಅರ್ಜಿ ಸಲ್ಲಿಸಲು ಕೇಳಲಾಗಿದೆ. ಗೃಹ ಸಚಿವಾಲಯ (MHA) ತನ್ನ ಆದೇಶದಲ್ಲಿ LTV ಗಳಿಗೆ ಮರು ಅರ್ಜಿ ಸಲ್ಲಿಸಲು ಮೇ 10 ರಿಂದ ಜುಲೈ 10 ರವರೆಗೆ ಕಾಲಾವಕಾಶವಿದೆ ಎಂದು ತಿಳಿಸಿದೆ. ಈ ಅವಧಿಯೊಳಗೆ ಮತ್ತೆ ಅರ್ಜಿ ಸಲ್ಲಿಸಲು ವಿಫಲರಾದ ಯಾವುದೇ ಪಾಕಿಸ್ತಾನಿ ಪ್ರಜೆಯ LTV ರದ್ದುಗೊಳಿಸಲಾಗುವುದು ಎಂದು MHA ಆದೇಶದಲ್ಲಿ ತಿಳಿಸಲಾಗಿದೆ.

26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ, ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳ ಸರಣಿಯಲ್ಲಿ, ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ಅವಕಾಶ ನೀಡಲಾಗುವುದಿಲ್ಲ ಮತ್ತು ಪ್ರಸ್ತುತ ಅಲ್ಪಾವಧಿಯ ವೀಸಾಗಳಲ್ಲಿ ದೇಶದಲ್ಲಿರುವವರು 48 ಗಂಟೆಗಳ ಒಳಗೆ ದೇಶ ಬಿಡಬೇಕು ಎಂದು ಭಾರತ ಸರ್ಕಾರ ಘೋಷಿಸಿತು.

ವೀಸಾ ರದ್ದತಿಯ ನಂತರ ಗಡೀಪಾರು ಎದುರಿಸುತ್ತಿರುವ ಪಾಕ್ ಪ್ರಜೆಗಳು 

ಕಳೆದ ವಾರದಂದು ಕಳೆದ 17 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದ ಒಸಾಮಾ ಎಂಬ ಪಾಕಿಸ್ತಾನಿ ಪ್ರಜೆಯೊಬ್ಬರಿಗೆ ಈಗ ಪಾಕಿಸ್ತಾನಕ್ಕೆ ಮರಳಲು ಒತ್ತಾಯಿಸಲಾಗುತ್ತಿದೆ. ಒಸಾಮಾ ANIಗೆ ನೀಡಿದ ಮಾಹಿತಿಯ ಪ್ರಕಾರ, ಭಾರತದಲ್ಲಿ ತನ್ನ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದೇನೆ, ಪದವಿ ಪಡೆಯುತ್ತಿದ್ದೇನೆ ಮತ್ತು ಉದ್ಯೋಗ ಸಂದರ್ಶನಗಳಿಗೆ ತಯಾರಿ ನಡೆಸುತ್ತಿದ್ದೇನೆ ಎಂದಿದ್ದಾನೆ.

“ನಾನು ಇಲ್ಲಿ ಮತ ಚಲಾಯಿಸಿದ್ದೇನೆ, ನನ್ನ ಬಳಿ ಪಡಿತರ ಚೀಟಿ ಇದೆ… ಅಲ್ಲಿ (ಪಹಲ್ಗಾಮ್) ಏನೇ ನಡೆದಿದೆಯೋ ಅದು ತಪ್ಪು. ನಾನು ಈ ಘಟನೆಯನ್ನು ಖಂಡಿಸುತ್ತೇನೆ. ಇದು ತುಂಬಾ ನಾಚಿಕೆಗೇಡಿನ ಕೃತ್ಯ… ನಾನು ನನ್ನ 10 ಮತ್ತು 12ನೇ ತರಗತಿಯನ್ನು ಇಲ್ಲಿಯೇ ಮುಗಿಸಿದ್ದೇನೆ, ಅಲ್ಲಿ ನಾನು ಏನು ಮಾಡಲಿ? ಅಲ್ಲಿ ನನ್ನ ಭವಿಷ್ಯವೇನು?” ಎಂದು ಅವರು ಪ್ರಶ್ನಿಸಿದರು.

ಒಸಾಮಾ ಅವರು ಭಾರತದಲ್ಲಿ ಮತ ಚಲಾಯಿಸಿದ್ದಾರೆ ಮತ್ತು ಪಡಿತರ ಚೀಟಿಯನ್ನು ಹೊಂದಿದ್ದಾರೆಂದು ಹೇಳಿದರು. ಪದವಿ ಮುಗಿದ ನಂತರ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಯೋಜನೆಗಳಿಗೆ ಪಾಕಿಸ್ತಾನಕ್ಕೆ ಮರಳಿರುವುದರಿಂದ ಅಡ್ಡಿಯಾಗಲಿದೆ ಎಂದು ಅವರು ಹೇಳಿದರು.

ಒಸಾಮಾ ಅವರ ಹೇಳಿಕೆಯು ಪಾಕಿಸ್ತಾನಿ ಪ್ರಜೆಯೊಬ್ಬರು ಸುಮಾರು ಎರಡು ದಶಕಗಳ ಕಾಲ ಭಾರತದಲ್ಲಿ ವಾಸಿಸಲು, ಶಿಕ್ಷಣ ಪಡೆಯಲು ಮತ್ತು ಮತದಾನದಂತಹ ನಾಗರಿಕ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಹೇಗೆ ಸಾಧ್ಯವಾಯಿತು ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅವರ ಆರೋಪಗಳಿಗೆ ಅಧಿಕಾರಿಗಳು ಇನ್ನೂ ಪ್ರತಿಕ್ರಿಯಿಸಿಲ್ಲ.

ಪ್ರತ್ಯೇಕ ಘಟನೆಯೊಂದರಲ್ಲಿ ಬೋಧನಾ ಕೆಲಸಕ್ಕೆ ನಕಲಿ ದಾಖಲೆಗಳನ್ನು ಬಳಸಿದ ಆರೋಪದ ಮೇಲೆ ಶುಮೈಲಾ ಖಾನ್ ಎಂಬ ಪಾಕಿಸ್ತಾನಿ ಮಹಿಳೆ ಪರಾರಿಯಾಗಿದ್ದಾರೆ. ಬರೇಲಿಯ ಫತೇಗಂಜ್ ಪಶ್ಚಿಮದಲ್ಲಿರುವ ಮಾಧೋಪುರದಲ್ಲಿ ಕೆಲಸ ಪಡೆಯಲು 43 ವರ್ಷದ ಖಾನ್ ನಕಲಿ ನಿವಾಸ ಪ್ರಮಾಣಪತ್ರವನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಖಾನ್ ಮೂರು ತಿಂಗಳಿನಿಂದ ಕಾಣೆಯಾಗಿದ್ದಾರೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಖಾನ್ ಅವರ ಪೋಷಕರು ಪಾಕಿಸ್ತಾನಿ ಪ್ರಜೆಗಳು ಎಂದು ಸ್ಥಳೀಯ ಗುಪ್ತಚರ ಘಟಕ (LIU) ಪತ್ತೆ ಮಾಡಿದ ನಂತರ ತನಿಖೆ ಪ್ರಾರಂಭವಾಯಿತು.

“ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸ್ಥಳೀಯ ಗುಪ್ತಚರ ಘಟಕ (LIU) ನಡೆಸಿದ ತನಿಖೆಯಲ್ಲಿ ಖಾನ್ ಅವರ ಪೋಷಕರು ಪಾಕಿಸ್ತಾನಿ ಪೌರತ್ವವನ್ನು ಹೊಂದಿದ್ದಾರೆಂದು ತಿಳಿದುಬಂದಿದೆ. ಇದರ ನಂತರ, ಅವರನ್ನು ಅಮಾನತುಗೊಳಿಸಲಾಯಿತು ಮತ್ತು ನಂತರ ಸೇವೆಯಿಂದ ವಜಾಗೊಳಿಸಲಾಯಿತು. ನಾವು ಅವರ ಸಂಬಳವನ್ನು ಮರುಪಡೆಯುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ” ಎಂದು ಮೂಲ ಶಿಕ್ಷಾ ಅಧಿಕಾರಿ (BSA) ಸಂಜಯ್ ಸಿಂಗ್ ಹೇಳಿದ್ದಾರೆ.

ಖಾನ್ ವಿರುದ್ಧ ರಾಂಪುರದಿಂದ ನಕಲಿ ನಿವಾಸ ಪ್ರಮಾಣಪತ್ರವನ್ನು ಪಡೆದು ರಾಜ್ಯದ ಮೂಲ ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಳಸಿಕೊಂಡ ಆರೋಪವಿದೆ. ಜನವರಿ 14ರಂದು ಪೊಲೀಸರು ಆಕೆಯ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದರು.ವಂಚನೆ, ನಕಲಿ ದಾಖಲೆಗಳನ್ನು ರಚಿಸುವುದು ಮತ್ತು ನಕಲಿ ದಾಖಲೆಗಳನ್ನು ಬಳಸಿರುವ ಆರೋಪಗಳು ಸೇರಿವೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅವಿನಾಶ್ ಸಿಂಗ್ ಅವರು ಈ ವಿಷಯದ ಬಗ್ಗೆ ಮೂಲ ಶಿಕ್ಷಣ ಇಲಾಖೆ ಮತ್ತು ಸ್ಥಳೀಯ ಪೊಲೀಸರಿಂದ ವರದಿ ಕೇಳಿದ್ದಾರೆ.

ಖಾನ್ ಅವರ ತಾಯಿ ಮಹಿರಾ ಅಖ್ತರ್ ಅವರನ್ನು 2015ರಲ್ಲಿ ರಾಂಪುರದಲ್ಲಿ ಸರ್ಕಾರಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಕೆಲಸದಿಂದ ವಜಾಗೊಳಿಸಲಾಯಿತು. ಮಹಿರಾ 1979ರಲ್ಲಿ ಪಾಕಿಸ್ತಾನಿ ಪ್ರಜೆಯನ್ನು ವಿವಾಹವಾದರು. 1981ರಲ್ಲಿ ವಿಚ್ಛೇದನ ಪಡೆದರು ಮತ್ತು ನಂತರ ಭಾರತಕ್ಕೆ ಮರಳಿದರು ಮತ್ತು ಇಲ್ಲಿ ಅವರು ಮರುಮದುವೆಯಾದರು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿರಾಳ ಮೊದಲ ಮದುವೆಯಿಂದ ಖಾನ್ ಪಾಕಿಸ್ತಾನದಲ್ಲಿ ಜನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರೇಗುಟ್ಟ: ನಕ್ಸಲರಿಂದ ಐಇಡಿ ಸ್ಫೋಟ; ಮೂವರು ಜವಾನರಿಗೆ ಗಾಯ; ವಿಸ್ತೃತ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...