Homeಕರ್ನಾಟಕದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ತನ್ನ ಸಹೋದ್ಯೋಗಿ ಹಾಗೂ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಲಾಗಿತ್ತು

- Advertisement -
- Advertisement -

ತನ್ನ ಸಹೋದ್ಯೋಗಿ ಹಾಗೂ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಸುಮಾರು ಐದು ಜನರ ತಂಡವೊಂದು ಕಿರುಕುಳ ನೀಡಿದ್ದು, ಮಹಿಳೆಯ ಸ್ನೇಹಿತರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ ಸೋಮವಾರ ಸಂಜೆ ನಡೆದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಭಜರಂಗದಳದ ಸದಸ್ಯರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಆನೇಕಲ್ ನಿವಾಸಿ ರಾಜೇಶ್ವರಿ ಎಂಬವರು, ಈ ಹಿಂದೆ ಪೊಲೀಸರು ವಶಪಡಿಸಿಕೊಂಡಿದ್ದ ತಮ್ಮ ಕಾರನ್ನು ಮರಳಿ ಪಡೆಯಲು ಬೇಕಾಗಿ ಸೆಪ್ಟೆಂಬರ್‌ 18 ರಂದು ಪುತ್ತೂರಿಗೆ ಆಗಮಿಸಿದ್ದರು. ಹೀಗಾಗಿ ಅಲ್ಲಿನ ಸ್ಥಳೀಯ ಲಾಡ್ಜ್‌ ಒಂದರಲ್ಲಿ ರೂಂ ಪಡೆದು ತಂಗಿದ್ದರು. ಸಹೋದ್ಯೋಗಿಗಳಾದ ಬೆಂಗಳೂರಿನ ಕೊಟ್ಟಿಗೇರಿ ನಿವಾಸಿ ಶಿವ ಮತ್ತು ಉಳ್ಳಾಲದ ನಿವಾಸಿ ಯು.ಕೆ ಮೊಹಮ್ಮದ್ ಅರಾಫತ್ ಕೂಡಾ ಅವರ ಜೊತೆಗೆ ಇದ್ದರು.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ಸೆಪ್ಟೆಂಬರ್ 20 ರ ಸೋಮವಾರಂದು ಮೂವರೂ ಸಂಜೆ 7 ಗಂಟೆಗೆ ಲಾಡ್ಜ್‌ನಲ್ಲಿ ಊಟ ಮಾಡುತ್ತಿದ್ದಾಗ, ಐದು ಜನರ ತಂಡವೊಂದು ಅವರನ್ನು ಪ್ರಶ್ನಿಸಿ, ನಿಂದಿಸಲು ಆರಂಭಿಸಿದ್ದಾರೆ. ಈ ವೇಳೆ ಮಹಿಳೆಯ ಸಹೋದ್ಯೋಗಿ ಶಿವ ಎಂಬವರಿಗೆ ತಂಡದ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಇಷ್ಟೇ ಅಲ್ಲದೆ, ತಂಡದ ಸದಸ್ಯರು ಮಹಿಳೆ ಮತ್ತು ಅವರ ಸಹೋದ್ಯೋಗಿಗಳ ಫೋಟೊಗಳನ್ನು ತೆಗೆದು ಅವಮಾನಿಸಿದ್ದಾರೆ ಎಂದು ದೂರಿದ್ದಾರೆ.

ಮಹಿಳೆ ನೀಡಿದ ದೂರಿನಂತೆ, ಘಟನೆ ನಡೆದು ಕೆಲವೆ ಗಂಟೆಗಲ್ಲಿ ಇಬ್ಬರನ್ನು ಬಂಧಿಸಿದ್ದಾಗಿ ಪುತ್ತೂರು ನಗರ ಠಾಣೆಯ ಸಿಐ ಗೋಪಾಲ್ ನಾಯಕ್‌ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಗೋಪಾಲ್‌ ಅವರು, “ಮಹಿಳೆ ತನ್ನ ಸಹೋದ್ಯೋಗಿ ಮತ್ತು ಮುಸ್ಲಿಂ ಗೆಳೆಯನೊಂದಿಗೆ ಹೊಟೇಲ್‌ನಲ್ಲಿ ಆಹಾರ ಸೇವಿಸುತ್ತಿದ್ದಾಗ ಕೆಲವರು ಬಂದು ಅವರನ್ನು ಪ್ರಶ್ನಿಸಿ, ಮಹಿಳೆಯ ಗೆಳೆಯನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದಲ್ಲಿ, ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಬಂಧಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಯುತ್ತಿರುವ ಬಗ್ಗೆ ಇತ್ತೀಚೆಗೆ ಹಲವು ಪ್ರಕರಣಗಳು ವರದಿಯಾಗಿದೆ. ದಿನಗಳ ಹಿಂದೆಯಷ್ಟೆ ಬೆಂಗಳೂರಿನಲ್ಲಿ ಮುಸ್ಲಿಂ ಸಹೋದ್ಯೋಗಿಯೊಬ್ಬರಿಗೆ ಡ್ರಾಪ್‌ ನೀಡಿದ್ದನ್ನು ಪ್ರಶ್ನಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ್ದ ಇಬ್ಬರನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಮೂರನೆ ಘಟನೆಯಾಗಿದೆ ಇದು. ಬಂಟ್ವಾಳದಲ್ಲಿ ಕಾರಿಂಜ ದೇವಸ್ಥಾನಕ್ಕೆ ತೆರಳಿದ್ದ ಆರು ವಿದ್ಯಾರ್ಥಿಗಳನ್ನು ತಡೆದು ಹಲವು ಗಂಟೆಗಳ ಕಾಲ ಪ್ರಶ್ನಿಸಿದ್ದ ತಂಡದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಇದಕ್ಕಿಂಲೂ ಮುಂಚೆ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ವಿಭಿನ್ನಕೋಮಿನ ಯುವಕ ಯುವತಿಯರು ಒಟ್ಟಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಆರೋಪಿಸಿ ಬಸ್ಸನ್ನು ತಡೆದಿದ್ದು ವರದಿಯಾಗಿತ್ತು

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: 4 ತಿಂಗಳಲ್ಲಿ 58 ಪ್ರಕರಣಗಳು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...