Homeಕರ್ನಾಟಕದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ತನ್ನ ಸಹೋದ್ಯೋಗಿ ಹಾಗೂ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಲಾಗಿತ್ತು

- Advertisement -
- Advertisement -

ತನ್ನ ಸಹೋದ್ಯೋಗಿ ಹಾಗೂ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಸುಮಾರು ಐದು ಜನರ ತಂಡವೊಂದು ಕಿರುಕುಳ ನೀಡಿದ್ದು, ಮಹಿಳೆಯ ಸ್ನೇಹಿತರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ ಸೋಮವಾರ ಸಂಜೆ ನಡೆದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಭಜರಂಗದಳದ ಸದಸ್ಯರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಆನೇಕಲ್ ನಿವಾಸಿ ರಾಜೇಶ್ವರಿ ಎಂಬವರು, ಈ ಹಿಂದೆ ಪೊಲೀಸರು ವಶಪಡಿಸಿಕೊಂಡಿದ್ದ ತಮ್ಮ ಕಾರನ್ನು ಮರಳಿ ಪಡೆಯಲು ಬೇಕಾಗಿ ಸೆಪ್ಟೆಂಬರ್‌ 18 ರಂದು ಪುತ್ತೂರಿಗೆ ಆಗಮಿಸಿದ್ದರು. ಹೀಗಾಗಿ ಅಲ್ಲಿನ ಸ್ಥಳೀಯ ಲಾಡ್ಜ್‌ ಒಂದರಲ್ಲಿ ರೂಂ ಪಡೆದು ತಂಗಿದ್ದರು. ಸಹೋದ್ಯೋಗಿಗಳಾದ ಬೆಂಗಳೂರಿನ ಕೊಟ್ಟಿಗೇರಿ ನಿವಾಸಿ ಶಿವ ಮತ್ತು ಉಳ್ಳಾಲದ ನಿವಾಸಿ ಯು.ಕೆ ಮೊಹಮ್ಮದ್ ಅರಾಫತ್ ಕೂಡಾ ಅವರ ಜೊತೆಗೆ ಇದ್ದರು.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ಸೆಪ್ಟೆಂಬರ್ 20 ರ ಸೋಮವಾರಂದು ಮೂವರೂ ಸಂಜೆ 7 ಗಂಟೆಗೆ ಲಾಡ್ಜ್‌ನಲ್ಲಿ ಊಟ ಮಾಡುತ್ತಿದ್ದಾಗ, ಐದು ಜನರ ತಂಡವೊಂದು ಅವರನ್ನು ಪ್ರಶ್ನಿಸಿ, ನಿಂದಿಸಲು ಆರಂಭಿಸಿದ್ದಾರೆ. ಈ ವೇಳೆ ಮಹಿಳೆಯ ಸಹೋದ್ಯೋಗಿ ಶಿವ ಎಂಬವರಿಗೆ ತಂಡದ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಇಷ್ಟೇ ಅಲ್ಲದೆ, ತಂಡದ ಸದಸ್ಯರು ಮಹಿಳೆ ಮತ್ತು ಅವರ ಸಹೋದ್ಯೋಗಿಗಳ ಫೋಟೊಗಳನ್ನು ತೆಗೆದು ಅವಮಾನಿಸಿದ್ದಾರೆ ಎಂದು ದೂರಿದ್ದಾರೆ.

ಮಹಿಳೆ ನೀಡಿದ ದೂರಿನಂತೆ, ಘಟನೆ ನಡೆದು ಕೆಲವೆ ಗಂಟೆಗಲ್ಲಿ ಇಬ್ಬರನ್ನು ಬಂಧಿಸಿದ್ದಾಗಿ ಪುತ್ತೂರು ನಗರ ಠಾಣೆಯ ಸಿಐ ಗೋಪಾಲ್ ನಾಯಕ್‌ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಗೋಪಾಲ್‌ ಅವರು, “ಮಹಿಳೆ ತನ್ನ ಸಹೋದ್ಯೋಗಿ ಮತ್ತು ಮುಸ್ಲಿಂ ಗೆಳೆಯನೊಂದಿಗೆ ಹೊಟೇಲ್‌ನಲ್ಲಿ ಆಹಾರ ಸೇವಿಸುತ್ತಿದ್ದಾಗ ಕೆಲವರು ಬಂದು ಅವರನ್ನು ಪ್ರಶ್ನಿಸಿ, ಮಹಿಳೆಯ ಗೆಳೆಯನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದಲ್ಲಿ, ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಬಂಧಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಯುತ್ತಿರುವ ಬಗ್ಗೆ ಇತ್ತೀಚೆಗೆ ಹಲವು ಪ್ರಕರಣಗಳು ವರದಿಯಾಗಿದೆ. ದಿನಗಳ ಹಿಂದೆಯಷ್ಟೆ ಬೆಂಗಳೂರಿನಲ್ಲಿ ಮುಸ್ಲಿಂ ಸಹೋದ್ಯೋಗಿಯೊಬ್ಬರಿಗೆ ಡ್ರಾಪ್‌ ನೀಡಿದ್ದನ್ನು ಪ್ರಶ್ನಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ್ದ ಇಬ್ಬರನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಮೂರನೆ ಘಟನೆಯಾಗಿದೆ ಇದು. ಬಂಟ್ವಾಳದಲ್ಲಿ ಕಾರಿಂಜ ದೇವಸ್ಥಾನಕ್ಕೆ ತೆರಳಿದ್ದ ಆರು ವಿದ್ಯಾರ್ಥಿಗಳನ್ನು ತಡೆದು ಹಲವು ಗಂಟೆಗಳ ಕಾಲ ಪ್ರಶ್ನಿಸಿದ್ದ ತಂಡದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಇದಕ್ಕಿಂಲೂ ಮುಂಚೆ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ವಿಭಿನ್ನಕೋಮಿನ ಯುವಕ ಯುವತಿಯರು ಒಟ್ಟಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಆರೋಪಿಸಿ ಬಸ್ಸನ್ನು ತಡೆದಿದ್ದು ವರದಿಯಾಗಿತ್ತು

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: 4 ತಿಂಗಳಲ್ಲಿ 58 ಪ್ರಕರಣಗಳು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...