Homeಕರ್ನಾಟಕಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -
- Advertisement -

ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಯುವತಿಗೆ ಕಿರುಕುಳ ನೀಡಿರುವ ದುರ್ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುರತ್ಕಲ್ ಬಳಿಯ ಮುಕ್ಕಾ ಶ್ರೀನಿವಾಸ ಕಾಲೇಜಿನಲ್ಲಿ ಕೇರಳ ಮೂಲದ ಮೊಹಮ್ಮದ್ ಯಾಸಿನ್ ಎಂಬ 20 ವರ್ಷದ ಯುವಕ ವಿದ್ಯಾಭ್ಯಾಸ ಮಾಡುತ್ತಿದ್ದರು. ಅದೇ ಕಾಲೇಜಿನ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಅವರ ಸಹಪಾಠಿ ಗೆಳತಿಯೊಬ್ಬರು ಮುಕ್ಕಾದಿಂದ ಸುರತ್ಕಲ್‌ಗೆ ಮನೆ ಬದಲಿಸುತ್ತಿದ್ದರು. ರಾತ್ರಿ ವೇಳೆ ಆಟೋ ಸಿಗದಿದ್ದರಿಂದ ಅವರನ್ನು ಮೊಹಮ್ಮದ್ ಯಾಸಿನ್ ಡ್ರಾಪ್ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ಹಿಂಬಾಲಿಸಿ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್‌ಮೆಂಟ್ ಬಳಿ ಹಲ್ಲೆ ನಡೆಸಿದ್ದಾರೆ.

“ನಿನ್ನೆ ರಾತ್ರಿ 9.30 ರ ಸಮಯದಲ್ಲಿ ಆಟೋ ಸಿಗದಿದ್ದ ಗೆಳತಿಯನ್ನು ಮುಕ್ಕಾದಿಂದ ಸುರತ್ಕಲ್‌ಗೆ ಡ್ರಾಪ್ ಮಾಡುತ್ತಿದ್ದೆ. ಇಬ್ಬರು ಮುಕ್ಕಾದಿಂದಲೇ ನಮ್ಮನ್ನು ಹಿಂಬಾಲಿಸುತ್ತಿದ್ದರು. ನಾವು ಗೊಂದಲದಿಂದ ಸುರತ್ಕಲ್‌ನಲ್ಲಿ ಬೇರೊಂದು ಅಪಾರ್ಟ್‌ಮೆಂಟ್ ತಲುಪಿದ್ದೆವು. ಅಷ್ಟರಲ್ಲಿ ಅಪಾರ್ಟ್‌ಮೆಂಟ್‌ ಪಾರ್ಕಿಂಗ್ ಬಳಿಯಿದ್ದ ಮಹಿಳೆಯೊಬ್ಬರು ಹೊರಬರಬೇಡಿ, ಕೆಲ ಯುವಕರ ಗುಂಪು ನಿಮ್ಮ ಮೇಲೆ ಕೋಪಗೊಂಡಿದ್ದಾರೆ ಎಂದು ತಿಳಿಸಿದರು. ಆದರೆ ಒಳಬಂದ ಯುವಕರು ನನ್ನ ಐಡಿ ಕಾರ್ಡ್ ನೋಡಿ, ಹೆಸರು ಕೇಳಿ ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಗೆಳತಿಯನ್ನು ನಿಂದಿಸಿ, ನೂಕಾಡಿ ಕಿರುಕುಳ ನೀಡಿದರು” ಎಂದು ಹಲ್ಲೆಗೊಳಗಾದ ಮೊಹಮ್ಮದ್ ಯಾಸಿನ್ ದಿ ನ್ಯೂಸ್‌ ಮಿನಿಟ್‌ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅಪಾರ್ಟ್‌ಮೆಂಟ್‌ನ ನಿವಾಸಿಗಳು ಪೊಲೀಸ್‌ರಿಗೆ ಫೋನ್ ಮೂಲಕ ದೂರು ನೀಡಿದ ನಂತರ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್ ಆಚಾರ್ಯ, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತರಾದ ಮೊಹಮ್ಮದ್ ಯಾಸಿನ್ ಮತ್ತು ಅವರ ಗೆಳತಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ರಾಜ್ಯದಲ್ಲಿ ಮತೀಯ ಗೂಂಡಾಗಿರಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಹಿಂದೂ ವ್ಯಕ್ತಿಯೊಬ್ಬ ತನ್ನ ಕಚೇರಿಯ ಮುಸ್ಲಿಂ ಮಹಿಳೆಗೆ ಡ್ರಾಪ್ ಕೊಡುತ್ತಿದ್ದಾಗ ಮುಸ್ಲಿಂ ಯುವಕರ ಗುಂಪೊಂದು ಅವರನ್ನು ರಸ್ತೆಯಲ್ಲಿ ತಡೆದು ಕಿರುಕುಳ ನೀಡಿದ್ದರು. ನಿಂದಿಸಿ, ಮಹಿಳೆಯನ್ನು ಆಟೋ ಹತ್ತಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಇದನ್ನು ಖಂಡಿಸಿದ್ದ ಸಿಎಂ ಬೊಮ್ಮಾಯಿಯವರು ಆರೋಪಿಗಳನ್ನು ಬಂಧಿಸಲು ಆದೇಶಿಸಿದ್ದರು. ಅದರಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಆದರೆ ತದನಂತರ ನಡೆದ ಮತೀಯ ಗೂಂಡಾಗಿರಿಗಳನ್ನು ಸಿಎಂ ಬೊಮ್ಮಾಯಿಯವರು ಖಂಡಿಸಿಲ್ಲ ಮಾತ್ರವಲ್ಲ ಅವುಗಳನ್ನು ಸಮರ್ಥಿಸುವಂತೆ ಹೇಳಿಕೆ ನೀಡಿದ್ದರು. ಮಂಗಳೂರಿಗೆ ಅವರು ಆಗಮಿಸಿದ್ದಾಗ ವೇಳೆ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು ಮಾತನಾಡಿಸಿದ್ದರು. ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ” ಎಂದಿದ್ದರು. ಅಲ್ಲಿಂದೀಚೆಗೆ ಸರಣಿ ರೀತಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗುತ್ತಿವೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ ನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 17 ರಂದು ಜರುಗಿತ್ತು.

ಮಂಗಳೂರಿನ ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 22 ನಡೆದಿದೆ.

ಒಟ್ಟಿನಲ್ಲಿ ಮತೀಯ ಗೂಂಡಾಗಿರಿ ಘಟನೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮುಖ್ಯಮಂತ್ರಿಗಳೇ ಅದನ್ನು ಸಮರ್ಥಿಸಿ ಮಾತಾಡಿರುವುದರಿಂದ ದುಷ್ಕರ್ಮಿಗಳಿಗೆ ಕಾನೂನಿನ ಭಯವಿಲ್ಲ. ಇದರ ವಿರುದ್ಧ ಪ್ರಜ್ಞಾವಂತರು, ಮಾನವ ಹಕ್ಕು ಕಾರ್ಯಕರ್ತರು ಮತ್ತು ವಕೀಲರು ನಿರಂತರವಾಗಿ ದನಿಯೆತ್ತುತ್ತಿದ್ದಾರೆ. ಇದಕ್ಕೆ ಸರ್ಕಾರ ಕಡಿವಾಣ ಹಾಕದಿದ್ದಲ್ಲಿ ರಾಜ್ಯ ಅಶಾಂತಿಯ ಗೂಡಾಗುವ ಆತಂಕ ಎದುರಾಗಿದೆ.


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...