Homeಕರ್ನಾಟಕಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -
- Advertisement -

ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಯುವತಿಗೆ ಕಿರುಕುಳ ನೀಡಿರುವ ದುರ್ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುರತ್ಕಲ್ ಬಳಿಯ ಮುಕ್ಕಾ ಶ್ರೀನಿವಾಸ ಕಾಲೇಜಿನಲ್ಲಿ ಕೇರಳ ಮೂಲದ ಮೊಹಮ್ಮದ್ ಯಾಸಿನ್ ಎಂಬ 20 ವರ್ಷದ ಯುವಕ ವಿದ್ಯಾಭ್ಯಾಸ ಮಾಡುತ್ತಿದ್ದರು. ಅದೇ ಕಾಲೇಜಿನ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಅವರ ಸಹಪಾಠಿ ಗೆಳತಿಯೊಬ್ಬರು ಮುಕ್ಕಾದಿಂದ ಸುರತ್ಕಲ್‌ಗೆ ಮನೆ ಬದಲಿಸುತ್ತಿದ್ದರು. ರಾತ್ರಿ ವೇಳೆ ಆಟೋ ಸಿಗದಿದ್ದರಿಂದ ಅವರನ್ನು ಮೊಹಮ್ಮದ್ ಯಾಸಿನ್ ಡ್ರಾಪ್ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ಹಿಂಬಾಲಿಸಿ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್‌ಮೆಂಟ್ ಬಳಿ ಹಲ್ಲೆ ನಡೆಸಿದ್ದಾರೆ.

“ನಿನ್ನೆ ರಾತ್ರಿ 9.30 ರ ಸಮಯದಲ್ಲಿ ಆಟೋ ಸಿಗದಿದ್ದ ಗೆಳತಿಯನ್ನು ಮುಕ್ಕಾದಿಂದ ಸುರತ್ಕಲ್‌ಗೆ ಡ್ರಾಪ್ ಮಾಡುತ್ತಿದ್ದೆ. ಇಬ್ಬರು ಮುಕ್ಕಾದಿಂದಲೇ ನಮ್ಮನ್ನು ಹಿಂಬಾಲಿಸುತ್ತಿದ್ದರು. ನಾವು ಗೊಂದಲದಿಂದ ಸುರತ್ಕಲ್‌ನಲ್ಲಿ ಬೇರೊಂದು ಅಪಾರ್ಟ್‌ಮೆಂಟ್ ತಲುಪಿದ್ದೆವು. ಅಷ್ಟರಲ್ಲಿ ಅಪಾರ್ಟ್‌ಮೆಂಟ್‌ ಪಾರ್ಕಿಂಗ್ ಬಳಿಯಿದ್ದ ಮಹಿಳೆಯೊಬ್ಬರು ಹೊರಬರಬೇಡಿ, ಕೆಲ ಯುವಕರ ಗುಂಪು ನಿಮ್ಮ ಮೇಲೆ ಕೋಪಗೊಂಡಿದ್ದಾರೆ ಎಂದು ತಿಳಿಸಿದರು. ಆದರೆ ಒಳಬಂದ ಯುವಕರು ನನ್ನ ಐಡಿ ಕಾರ್ಡ್ ನೋಡಿ, ಹೆಸರು ಕೇಳಿ ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಗೆಳತಿಯನ್ನು ನಿಂದಿಸಿ, ನೂಕಾಡಿ ಕಿರುಕುಳ ನೀಡಿದರು” ಎಂದು ಹಲ್ಲೆಗೊಳಗಾದ ಮೊಹಮ್ಮದ್ ಯಾಸಿನ್ ದಿ ನ್ಯೂಸ್‌ ಮಿನಿಟ್‌ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅಪಾರ್ಟ್‌ಮೆಂಟ್‌ನ ನಿವಾಸಿಗಳು ಪೊಲೀಸ್‌ರಿಗೆ ಫೋನ್ ಮೂಲಕ ದೂರು ನೀಡಿದ ನಂತರ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್ ಆಚಾರ್ಯ, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತರಾದ ಮೊಹಮ್ಮದ್ ಯಾಸಿನ್ ಮತ್ತು ಅವರ ಗೆಳತಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ರಾಜ್ಯದಲ್ಲಿ ಮತೀಯ ಗೂಂಡಾಗಿರಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಹಿಂದೂ ವ್ಯಕ್ತಿಯೊಬ್ಬ ತನ್ನ ಕಚೇರಿಯ ಮುಸ್ಲಿಂ ಮಹಿಳೆಗೆ ಡ್ರಾಪ್ ಕೊಡುತ್ತಿದ್ದಾಗ ಮುಸ್ಲಿಂ ಯುವಕರ ಗುಂಪೊಂದು ಅವರನ್ನು ರಸ್ತೆಯಲ್ಲಿ ತಡೆದು ಕಿರುಕುಳ ನೀಡಿದ್ದರು. ನಿಂದಿಸಿ, ಮಹಿಳೆಯನ್ನು ಆಟೋ ಹತ್ತಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಇದನ್ನು ಖಂಡಿಸಿದ್ದ ಸಿಎಂ ಬೊಮ್ಮಾಯಿಯವರು ಆರೋಪಿಗಳನ್ನು ಬಂಧಿಸಲು ಆದೇಶಿಸಿದ್ದರು. ಅದರಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಆದರೆ ತದನಂತರ ನಡೆದ ಮತೀಯ ಗೂಂಡಾಗಿರಿಗಳನ್ನು ಸಿಎಂ ಬೊಮ್ಮಾಯಿಯವರು ಖಂಡಿಸಿಲ್ಲ ಮಾತ್ರವಲ್ಲ ಅವುಗಳನ್ನು ಸಮರ್ಥಿಸುವಂತೆ ಹೇಳಿಕೆ ನೀಡಿದ್ದರು. ಮಂಗಳೂರಿಗೆ ಅವರು ಆಗಮಿಸಿದ್ದಾಗ ವೇಳೆ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು ಮಾತನಾಡಿಸಿದ್ದರು. ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ” ಎಂದಿದ್ದರು. ಅಲ್ಲಿಂದೀಚೆಗೆ ಸರಣಿ ರೀತಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗುತ್ತಿವೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ ನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 17 ರಂದು ಜರುಗಿತ್ತು.

ಮಂಗಳೂರಿನ ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 22 ನಡೆದಿದೆ.

ಒಟ್ಟಿನಲ್ಲಿ ಮತೀಯ ಗೂಂಡಾಗಿರಿ ಘಟನೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮುಖ್ಯಮಂತ್ರಿಗಳೇ ಅದನ್ನು ಸಮರ್ಥಿಸಿ ಮಾತಾಡಿರುವುದರಿಂದ ದುಷ್ಕರ್ಮಿಗಳಿಗೆ ಕಾನೂನಿನ ಭಯವಿಲ್ಲ. ಇದರ ವಿರುದ್ಧ ಪ್ರಜ್ಞಾವಂತರು, ಮಾನವ ಹಕ್ಕು ಕಾರ್ಯಕರ್ತರು ಮತ್ತು ವಕೀಲರು ನಿರಂತರವಾಗಿ ದನಿಯೆತ್ತುತ್ತಿದ್ದಾರೆ. ಇದಕ್ಕೆ ಸರ್ಕಾರ ಕಡಿವಾಣ ಹಾಕದಿದ್ದಲ್ಲಿ ರಾಜ್ಯ ಅಶಾಂತಿಯ ಗೂಡಾಗುವ ಆತಂಕ ಎದುರಾಗಿದೆ.


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....