Homeಕರ್ನಾಟಕಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -
- Advertisement -

ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಯುವತಿಗೆ ಕಿರುಕುಳ ನೀಡಿರುವ ದುರ್ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುರತ್ಕಲ್ ಬಳಿಯ ಮುಕ್ಕಾ ಶ್ರೀನಿವಾಸ ಕಾಲೇಜಿನಲ್ಲಿ ಕೇರಳ ಮೂಲದ ಮೊಹಮ್ಮದ್ ಯಾಸಿನ್ ಎಂಬ 20 ವರ್ಷದ ಯುವಕ ವಿದ್ಯಾಭ್ಯಾಸ ಮಾಡುತ್ತಿದ್ದರು. ಅದೇ ಕಾಲೇಜಿನ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಅವರ ಸಹಪಾಠಿ ಗೆಳತಿಯೊಬ್ಬರು ಮುಕ್ಕಾದಿಂದ ಸುರತ್ಕಲ್‌ಗೆ ಮನೆ ಬದಲಿಸುತ್ತಿದ್ದರು. ರಾತ್ರಿ ವೇಳೆ ಆಟೋ ಸಿಗದಿದ್ದರಿಂದ ಅವರನ್ನು ಮೊಹಮ್ಮದ್ ಯಾಸಿನ್ ಡ್ರಾಪ್ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ಹಿಂಬಾಲಿಸಿ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್‌ಮೆಂಟ್ ಬಳಿ ಹಲ್ಲೆ ನಡೆಸಿದ್ದಾರೆ.

“ನಿನ್ನೆ ರಾತ್ರಿ 9.30 ರ ಸಮಯದಲ್ಲಿ ಆಟೋ ಸಿಗದಿದ್ದ ಗೆಳತಿಯನ್ನು ಮುಕ್ಕಾದಿಂದ ಸುರತ್ಕಲ್‌ಗೆ ಡ್ರಾಪ್ ಮಾಡುತ್ತಿದ್ದೆ. ಇಬ್ಬರು ಮುಕ್ಕಾದಿಂದಲೇ ನಮ್ಮನ್ನು ಹಿಂಬಾಲಿಸುತ್ತಿದ್ದರು. ನಾವು ಗೊಂದಲದಿಂದ ಸುರತ್ಕಲ್‌ನಲ್ಲಿ ಬೇರೊಂದು ಅಪಾರ್ಟ್‌ಮೆಂಟ್ ತಲುಪಿದ್ದೆವು. ಅಷ್ಟರಲ್ಲಿ ಅಪಾರ್ಟ್‌ಮೆಂಟ್‌ ಪಾರ್ಕಿಂಗ್ ಬಳಿಯಿದ್ದ ಮಹಿಳೆಯೊಬ್ಬರು ಹೊರಬರಬೇಡಿ, ಕೆಲ ಯುವಕರ ಗುಂಪು ನಿಮ್ಮ ಮೇಲೆ ಕೋಪಗೊಂಡಿದ್ದಾರೆ ಎಂದು ತಿಳಿಸಿದರು. ಆದರೆ ಒಳಬಂದ ಯುವಕರು ನನ್ನ ಐಡಿ ಕಾರ್ಡ್ ನೋಡಿ, ಹೆಸರು ಕೇಳಿ ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಗೆಳತಿಯನ್ನು ನಿಂದಿಸಿ, ನೂಕಾಡಿ ಕಿರುಕುಳ ನೀಡಿದರು” ಎಂದು ಹಲ್ಲೆಗೊಳಗಾದ ಮೊಹಮ್ಮದ್ ಯಾಸಿನ್ ದಿ ನ್ಯೂಸ್‌ ಮಿನಿಟ್‌ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅಪಾರ್ಟ್‌ಮೆಂಟ್‌ನ ನಿವಾಸಿಗಳು ಪೊಲೀಸ್‌ರಿಗೆ ಫೋನ್ ಮೂಲಕ ದೂರು ನೀಡಿದ ನಂತರ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್ ಆಚಾರ್ಯ, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತರಾದ ಮೊಹಮ್ಮದ್ ಯಾಸಿನ್ ಮತ್ತು ಅವರ ಗೆಳತಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ರಾಜ್ಯದಲ್ಲಿ ಮತೀಯ ಗೂಂಡಾಗಿರಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಹಿಂದೂ ವ್ಯಕ್ತಿಯೊಬ್ಬ ತನ್ನ ಕಚೇರಿಯ ಮುಸ್ಲಿಂ ಮಹಿಳೆಗೆ ಡ್ರಾಪ್ ಕೊಡುತ್ತಿದ್ದಾಗ ಮುಸ್ಲಿಂ ಯುವಕರ ಗುಂಪೊಂದು ಅವರನ್ನು ರಸ್ತೆಯಲ್ಲಿ ತಡೆದು ಕಿರುಕುಳ ನೀಡಿದ್ದರು. ನಿಂದಿಸಿ, ಮಹಿಳೆಯನ್ನು ಆಟೋ ಹತ್ತಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಇದನ್ನು ಖಂಡಿಸಿದ್ದ ಸಿಎಂ ಬೊಮ್ಮಾಯಿಯವರು ಆರೋಪಿಗಳನ್ನು ಬಂಧಿಸಲು ಆದೇಶಿಸಿದ್ದರು. ಅದರಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಆದರೆ ತದನಂತರ ನಡೆದ ಮತೀಯ ಗೂಂಡಾಗಿರಿಗಳನ್ನು ಸಿಎಂ ಬೊಮ್ಮಾಯಿಯವರು ಖಂಡಿಸಿಲ್ಲ ಮಾತ್ರವಲ್ಲ ಅವುಗಳನ್ನು ಸಮರ್ಥಿಸುವಂತೆ ಹೇಳಿಕೆ ನೀಡಿದ್ದರು. ಮಂಗಳೂರಿಗೆ ಅವರು ಆಗಮಿಸಿದ್ದಾಗ ವೇಳೆ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು ಮಾತನಾಡಿಸಿದ್ದರು. ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ” ಎಂದಿದ್ದರು. ಅಲ್ಲಿಂದೀಚೆಗೆ ಸರಣಿ ರೀತಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗುತ್ತಿವೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ ನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 17 ರಂದು ಜರುಗಿತ್ತು.

ಮಂಗಳೂರಿನ ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 22 ನಡೆದಿದೆ.

ಒಟ್ಟಿನಲ್ಲಿ ಮತೀಯ ಗೂಂಡಾಗಿರಿ ಘಟನೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮುಖ್ಯಮಂತ್ರಿಗಳೇ ಅದನ್ನು ಸಮರ್ಥಿಸಿ ಮಾತಾಡಿರುವುದರಿಂದ ದುಷ್ಕರ್ಮಿಗಳಿಗೆ ಕಾನೂನಿನ ಭಯವಿಲ್ಲ. ಇದರ ವಿರುದ್ಧ ಪ್ರಜ್ಞಾವಂತರು, ಮಾನವ ಹಕ್ಕು ಕಾರ್ಯಕರ್ತರು ಮತ್ತು ವಕೀಲರು ನಿರಂತರವಾಗಿ ದನಿಯೆತ್ತುತ್ತಿದ್ದಾರೆ. ಇದಕ್ಕೆ ಸರ್ಕಾರ ಕಡಿವಾಣ ಹಾಕದಿದ್ದಲ್ಲಿ ರಾಜ್ಯ ಅಶಾಂತಿಯ ಗೂಡಾಗುವ ಆತಂಕ ಎದುರಾಗಿದೆ.


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...