Homeಕರ್ನಾಟಕಮತೀಯ ಗೂಂಡಾಗಿರಿ: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಮತೀಯ ಗೂಂಡಾಗಿರಿ: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

- Advertisement -
- Advertisement -

ಪದೇ ಪದೇ ಮತೀಯ ಗೂಂಡಾಗಿರಿ ಪ್ರಕರಣಗಳಲ್ಲಿ ಭಾಗಿಯಾದ ಬಜರಂಗದಳದ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯ ಪ್ರಶಾಂತ್ ಶಕ್ತಿನಗರ ಎಂಬ ಕಾರ್ಯಕರ್ತರನ್ನು ಗಡಿಪಾರು ಮಾಡಲು ಮಂಗಳೂರು ಪೊಲೀಸರು ನಿರ್ಧರಿಸಿದ್ದು ನೋಟಿಸ್ ಕಳಿಸಿದ್ದಾರೆ.

ಮಂಗಳೂರಿನಲ್ಲಿ ಸುಲ್ತಾನ್ ಜ್ಯುವೆಲರಿಯ ಕಾರ್ಯಕ್ರಮ ಮತ್ತು ಮರೊಳಿ ಹೋಳಿ ಆಚರಣೆ ವೇಳೆ ಈ ಬಜರಂಗದ ಕಾರ್ಯಕರ್ತರು ದಾಳಿ ನಡೆಸಿ ದಾಂಧಲೆ ನಡೆಸಿದ್ದರು. ಹಾಗಾಗಿ ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದನ್ನು ಉಲ್ಲೇಖಸಿರುವ ಪೊಲೀಸರು ನಿಮ್ಮನ್ನು ಏಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿ ಜಾರಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್, “ನಮ್ಮ ನಗರದಲ್ಲಿ ಪದೇ ಪದೇ ಅಪರಾಧಗಳಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳುತ್ತಿದ್ದೇವೆ. ಮತೀಯ ಗೂಂಡಾಗಿರಿ ಸೇರಿದಂತೆ ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ಜರುಗಿಸುತ್ತಿದ್ದೇವೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ಮಾಡಲಾಗಿದೆ” ಎಂದಿದ್ದಾರೆ.

ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದವರನ್ನು ಗುರುತಿಸಿದ್ದೇವೆ. ಅವರನ್ನು ಒಂದು ವರ್ಷ ಗಡಿಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು. ಹೀಗಾಗಿ ಅವರಿಗೆ ನೋಟಿಸ್ ಕಳಿಸಿದ್ದೇವೆ. ಗಡಿಪಾರು ಪ್ರಕ್ರಿಯೆ ಆರಂಭವಾಗಿದ್ದು ರೌಡಿ ಶೀಟ್ ತೆರೆಯೋದು ಅಥವಾ ಗೂಂಡಾ ಕಾಯ್ದೆ ಹಾಕುವ ಕೆಲಸವೂ ಆಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾಗ ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂಬ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಮತೀಯ ಗೂಂಡಾಗಿರಿ ಪ್ರಕರಣಗಳನ್ನು ಸಮರ್ಥಿಸಿಕೊಂಡಿದ್ದರು. ಆನಂತರ ಕರಾವಳಿಯಲ್ಲಿ ಸಾಲು ಸಾಲು ಮತೀಯ ಗೂಂಡಾಗಿರಿ ಪ್ರಕರಗಳು ದಾಖಲಾಗಿದ್ದವು. ಅವರುಗಳನ್ನು ಖಂಡಿಸಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಟ್ಟ ಹಾಕುವುದಾಗಿ ಘೋಷಿಸಿತ್ತು. ಅಂತೆಯೇ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿದ ನಂತರ ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ ಮಾಡಿದೆ. ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದ್ದು, ಸಿಎಸ್​ವಿ ಇನ್ಸ್​ಪೆಕ್ಟರ್ ಸೇರಿದಂತೆ ಐವರು ಸಿಬ್ಬಂದಿಯೊಂದಿಗೆ ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾಚರಣೆ ನಡೆಸಲಿದೆ ಎಂದು ಕುಲದೀಪ್ ಕುಮಾರ್​ ಜೈನ್ ಹೇಳಿದ್ದಾರೆ.

ಇದನ್ನೂ ಓದಿ; ಮತೀಯ ಗೂಂಡಾಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...