Homeಕರ್ನಾಟಕಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯ ಕೋಮು ಸೂಕ್ಷ್ಮ ಊರುಗಳೆಂಬ ಆತಂಕ ಎರಡು-ಮೂರು ದಶಕದಿಂದ ಕಾಡುತ್ತಿದೆ. ವೈಯಕ್ತಿಕ ಸಣ್ಣ-ಪುಟ್ಟ ಗಲಾಟೆ ನೋಡು-ನೋಡುತ್ತಿದ್ದಂತೆ ಕೋಮು ಕಲಹವಾಗಿ ಊರೂರೆ ಹೊತ್ತಿ ಉರಿವ ಸ್ವಭಾವದ ತಾಲೂಕುಗಳಿವು! ಇಲ್ಲಿ ನಡೆದ ದೊಂಬಿ-ಗಲಭೆಗೆ ಲೆಕ್ಕವೇ ಇಲ್ಲ. ಇಂಥ ಹಿನ್ನಲೆಯ ಪುತ್ತೂರು-ಸುಳ್ಯದಲ್ಲಿ ಇದ್ದಕ್ಕಿದ್ದಂತೆ ಅನೈತಿಕ ಪೊಲೀಸ್‌ಗಿರಿ ಬಿರುಸುಗೊಂಡಿರುವುದು ಜನಸಾಮಾನ್ಯರನ್ನು ಕಂಗಾಲಾಗಿಸಿಬಿಟ್ಟಿದೆ. ಹತ್ತಿರದಲ್ಲಿರುವ ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯ ರಂಗತಾಲೀಮು ಇದೆಂಬ ಶಂಕೆ ಶುರುವಾಗಿದೆ. ಕೋವಿಡ್-19ರ ಸತತ ಲಾಕ್‌ಡೌನ್‌ನಿಂದ ತುತ್ತು ಕೂಳಿಗೂ ತತ್ವಾರ ಬಂದಿರುವ ಈ ಸಂದರ್ಭದಲ್ಲಿ ಕೋಮು ಗಲಭೆಯೆನಾದರೂ ಆಗಿಬಿಟ್ಟರೆ ಬದುಕು ಬರ್ಬಾದ್ ಎಂಬ ಆತಂಕದಲ್ಲಿವೆ ದುಡಿದು ತಿನ್ನುವ ಜೀವಗಳು..

ಪುತ್ತೂರು ಮತ್ತು ಸುಳ್ಯದಲ್ಲಿ ಕಳೆದೊಂದು ವಾರದಲ್ಲಿ ಒಂದರ ಹಿಂದೊಂದರಂತೆ ಎರಡು ಮತಾಂಧ ಸಂಘರ್ಷಗಳು ಆಗಿಹೋಗಿವೆ. ಈ ದುರ್ಘಟನೆ ನಂತರ ಮುಂದೇನು ಕಾದಿದೆಯೋ ಎಂಬ ಭಯಕ್ಕೆ ಜನರು ಬಿದ್ದಿದ್ದಾರೆ. ಆಗಸ್ಟ್ 15ರಂದು ಪುತ್ತೂರಿನ ಕಬಕ ಎಂಬಲ್ಲಿ ಸಂಘಪರಿವಾರಿಗಳು ಹಾಗು ಎಸ್‌ಡಿಪಿಐ ಬಳಗದ ನಡುವೆ ಗಲಾಟೆಯಾಗಿದೆ. ಕಬಕದ ಬಿಜೆಪಿ ಆಡಳಿತದ ಗ್ರಾಮ ಪಂಚಾಯತ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ-ಮನೆಗೆ ಸ್ವಾತಂತ್ರ್ಯ ಸಂದೇಶ ತಲುಪಿಸುವ ಹೆಸರಲ್ಲಿ ರಥಯಾತ್ರೆ ಆಯೋಜಿಸಿತ್ತು. ಈ ರಥದಲ್ಲಿ ಆರ್‌ಎಸ್‌ಎಸ್ ದಿಗ್ಗಜನಾಗಿದ್ದ ಸಾರ್ವರ್ಕರ್ ಪೋಟೋ ಇಡಲಾಗಿತ್ತು. ಈ ರಥ ಯಾತ್ರೆ ಕಬಕದಾಚೆಯ ಪುತ್ತೂರು ನಗರದಲ್ಲೂ ಸುತ್ತಾಡಿಸುವ ಪ್ಲಾನು ಸಂಘಪರಿವಾರದವರು ಹಾಕಿಕೊಂಡಿದ್ದರು.

PC : The Quint

ಇದು ಕಬಕ-ಪುತ್ತೂರು ಭಾಗದಲ್ಲಿ ಒಂದಿಷ್ಟು ಬೇರು ಬಿಟ್ಟಿರುವ ಎಸ್‌ಡಿಪಿಐ ಕಾರ್ಯಕರ್ತರನ್ನು ಕೆರಳಿಸಿದೆ. ಸಾರ್ವರ್ಕರ್ ಪೋಟೋ ರಥದಿಂದ ತೆಗೆಯುವಂತೆ ಹಠಹಿಡಿದಿದ್ದಾರೆ. “ಸಾರ್ವರ್ಕರ್ ಬ್ರಿಟೀಶರಿಗೆ ಶರಣಾಗಿದ್ದ ಹೇಡಿ. ಇಂಥವನ ಬದಲಿಗೆ ದೇಶ ಭಕ್ತ ಟಿಪ್ಪುಸುಲ್ತಾನ್ ಭಾವಚಿತ್ರ ಹಾಕುವಂತೆ” ಒತ್ತಾಯಿಸಿದ್ದಾರೆ. ಎರಡು ಕಡೆಯವರಿಗೆ ಕೈಕೈ ಮಿಲಾಯಿಸುವ ಜಗಳ ನಡೆದಿದೆ. ಪೊಲೀಸರ ಪ್ರವೇಶವಾಗಿ ಎರಡು -ಮೂರು ಎಸ್‌ಡಿಪಿಐ ಮುಂದಾಳುಗಳ ಬಂಧಿಸಲಾಯಿತು. ಆ ಬಳಿಕ ಆ ರಥ ಊರೆಲ್ಲ ಸುತ್ತು ಹಾಕಿ ಪುತ್ತೂರು ಪೇಟೆಯಲ್ಲಿ ಸಂಚಾರ ನಡೆಸಿದೆ. ಇತ್ತ ಎಸ್‌ಡಿಪಿಐ ಪೊಲೀಸ್ ಠಾಣೆಗೆ ಮತ್ತಿಗೆ ಹಾಕಿತು. ಸಂಸದ-ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರ್ ಎಸ್‌ಡಿಪಿಐಗೆ ಬುದ್ದಿ ಕಲಿಸುವುದಾಗಿ ಹೇಳಿಕೆ ಕೊಟ್ಟರು. ಬಿಜೆಪಿಗರು ಎಸ್‌ಡಿಪಿಐ ನಿಶೇಧಿಸುವಂತೆ ಆಗ್ರಹಿಸಿದರು. ಕೇಂದ್ರ-ರಾಜ್ಯ ಎರಡು ಬಿಜೆಪಿಯೇ ಅಧಿಕಾರದಲ್ಲಿರುವಾಗ ಆ ಪಾರ್ಟಿಯ ದೊಡ್ಡವರೆ ಎಸ್‌ಡಿಪಿಐ ನಿಷೇಧಿಸವಂತೆ ಹೇಳುವುದು ಹಾಸ್ಯಾಸ್ಪದವೆಂದು ಜನರು ನಗುತ್ತಿದ್ದಾರೆ.

ಬಂಧಿತ ಎಸ್‌ಡಿಪಿಐ ನಾಯಕರು ಒಂದೇ ದಿನದಲ್ಲಿ ಜಾಮೀನಲ್ಲಿ ಹೋರಬಂದರು; ಅವರಿಗೆ ಎಸ್‌ಡಿಪಿಐ ಸಂಘಟನೆ ವೀರೋಚಿತ ಸ್ವಾಗತ ನೀಡಿತು; ಎಸ್‌ಡಿಪಿಐ ಪ್ರತಿಭಟನಾ ಮೆರವಣಿಗೆ ಮಾಡಿತು. ಕೆಲ ಖಟ್ಟರ್ ಹಿಂದೂತ್ವವಾದಿಗಳು ತಮ್ಮ ನಾಯಕರ ದೌರ್ಬಲ್ಯದಿಂದ ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ದುರ್ಬಲ ಕೇಸು ಬೀಳುವಂತಾಯಿತೆಂದು ಟ್ರೋಲ್ ಮಾಡಿ ಆಕ್ರೋಶ ಹೊರಹಾಕಿದರು. ಇಲ್ಲಿ ಸಹಜವಾದ ಎರಡು ಪ್ರಶ್ನೆಗಳೆದ್ದು ಪ್ರಜ್ಞಾವಂತರ ತಲೆತಿನ್ನುತ್ತಿದೆ! ಗಡಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕೋವಿಡ್ ಶಿಷ್ಟಾಚಾರದ ನಿರ್ಬಂಧವಿರುವಾಗ ಬಿಜೆಪಿಗರಿಗೆ ರಥ ಸಂಚಾರಕ್ಕೆ ಪರವಾನಗಿ ಕೊಟ್ಟಿದ್ಯಾರು? ಅದು ಕಬಕ ದಾಟಿ ಪುತ್ತೂರು ಪ್ರವೇಶಿಸಲು ಪೊಲೀಸರು ಅವಕಾಶ ಹೇಗೆ ಕೊಟ್ಟರು? ಎಸ್‌ಡಿಪಿಐ ಪ್ರತಿಭಟನಾ ಮೆರವಣಿಗೆಗೆ ಅವಕಾಶ ಸಿಕಿದ್ದು ಹೇಗೆ? ಈ ಪ್ರಶ್ನೆಗಳೆಲ್ಲ ಉತ್ತರವಿಲ್ಲದೆ ಹಾಗೆ ಉಳಿದುಕೊಂಡಿದ್ದು, ಜಿಲ್ಲಾಡಳಿತದ ವೈಫಲ್ಯ ಪತ್ತೂರಿಗೆ ಗಂಡಾಂತಕಾರಿಯಾಗಿದೆಯೆಂದು ವಿಶ್ಲೇಷಿಸಲಾಗುತ್ತಿದೆ!

ಪುತ್ತೂರಿನ ಸ್ಥಿತಿ ಬೂದಿ ಮಚ್ಚಿದ ಕೆಂಡದಂತಿರುವಾಗಲೆ ಪಕ್ಕದ ಸುಳ್ಯದಲ್ಲಿ ಅನೈತಿಕ ಪೂಲೀಸ್‌ಗಿರಿಯ ಅಟ್ಟಹಾಸ ನಡೆದಿದೆ! ಹಿಂದು ಜಾಗರಣಾ ವೇದಿಕೆಯ ನೈತಿಕ ಪಾಠ ಬೋಧನೆಯ ಆರ್ಭಟಕ್ಕೆ ಅಮಾಯಕ ಹಿಂದು ಹುಡುಗಿಯರಿಬ್ಬರಿಗೆ ಕಿರುಕುಳ ಮತ್ತು ಮುಸ್ಲಿಮ್ ಹುಡುಗನ ಪ್ರಾಣ ಸಂಕಟಕ್ಕೀಡಾಗಿತ್ತೆಂದು ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಯಾವುದೋ ಕೆಲಸಕ್ಕೆಂದು ಪುತ್ತೂರಿಗೆ ಬಂದಿದ್ದ ಬೆಂಗಳೂರಿನ ಹುಡುಗಿಯರು ವಾಪಸಾಗುತ್ತಿದ್ದರು. ಪುತ್ತೂರಿಂದ ಬೆಂಗಳೂರಿಗೆ ಹೊರಟಿದ್ದ ಈ ಸರ್ಕಾರಿ ಬಸ್‌ನಲ್ಲಿ ಕುಂಬ್ರಕ್ಕೆ ಮುಸ್ಲಿಂ ಹುಡುನೊಬ್ಬ ಕುಂಬ್ರಕ್ಕೆ ಹೋಗುತ್ತಿದ್ದ. ಬೆಂಗಳೂರಿಂದ ಕರೆಬಂದಿದ್ದರಿಂದ ಆತ ಕುಂಬ್ರದಲ್ಲಿ ಇಳಿಯದೆ ಬೆಂಗಳೂರಿಗೆ ಟಿಕೆಟ್ ಪಡೆದಿದ್ದಾನೆ. ಸಂದರ್ಭೋಚಿತವಾಗಿ ಆ ಹುಡುಗ ಹಾಗು ಹುಡುಗಿಯರ ಒಂದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ.

ಇದನ್ನು ಬಸ್‌ನಲ್ಲಿದ್ದ ಹಿಂದು ಜಾಗರಣಾ ವೇದಿಕೆಯ ಸದಸ್ಯನೊಬ್ಬ ಸಂಶಯದಿಂದಲೇ ನೋಡುತ್ತಿದ್ದ. ತಕ್ಷಣ ಆತ ತನ್ನ ಸಹಚರರಿಗೆ ತಾನು ಅರ್ಥೈಸಿಕೊಡ್ಡದ್ದನ್ನು ಪೋನ್‌ನಲ್ಲಿ ವಿವರಿಸಿದ್ದಾನೆ. ಹಿಂದು ಜಾಗರಣಾ ವೇದಿಕೆ, ಬಜರಂಗದಳದ ಕಾರ್ಯಕರ್ತರು ಆನೆಗುಂಡಿ ಎಂಬಲ್ಲಿ ಬಸ್ ಅಡ್ಡ ಹಾಕಿದ್ದಾರೆ. ಹಿಂದು ಜಾಗರಣಾ ವೇದಿಕೆಯ ದೊಡ್ಡ ಗುಂಪು ಆ ಹುಡುಗ-ಹುಡುಗಿಯರಿಗೆ ಮುತ್ತಿಗೆ ಹಾಕಿ ರಂಪವೆಬ್ಬಿಸಿದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರು, ಬಸ್ ಕಂಡಕ್ಟರ್ ಮತ್ತು ಚಾಲಕ ಅವರು ಅಪರಿಚಿತರು, ಒಟ್ಟಾಗಿ ಪ್ರಯಾಣಿಸುತ್ತಿಲ್ಲವೆಂದು ತಿಳಿಹೇಳಿದರು ಆವೇಶದಲ್ಲಿದ್ದ ಹಿಂಜಾವೆ ತಂಡ ಕೇಳಲಿಲ್ಲ. ಇದು ಅನೈತಿಕ ಟ್ರಿಪ್ ಎಂದು ದಾಂಧಲೆ ಎಬ್ಬಿಸಿಬಿಟ್ಟರು ಆ ನಡು ರಾತ್ರಿಯಲ್ಲಿ!ಬಸ್ ಪೊಲೀಸ್ ಠಾಣೆಗೆ ಒಯ್ಯುವಂತೆ ಬಲವಂತಪಡಿಸಿದರು. ಬಸ್ಸು ಠಾಣೆಯತ್ತ ತೆರಳುತ್ತಿದ್ದಾಗ ಹಿಂಜಾವೆ ತಂಡ ಕಾರಲ್ಲಿ ಹಿಂಬಾಲಿಸಿದೆ.

PC : DNA India

ಬಸ್ ನಲ್ಲಿದ್ದ ಮುಸ್ಲಿಂ ಹುಡುಗ ಪೈಜಾರಿನಲ್ಲಿ ಇಳಿದು ತನ್ನವರಿಗೆ ಸುದ್ದಿ ಮುಟ್ಟಿಸಿದ್ದಾನೆ. ಇದ್ದಕ್ಕಿದ್ದಂತೆ ಮುಸ್ಲಿಮರ ದೊಡ್ಡ ಗುಂಪು ಜಮೆಯಾಗಿಬಿಟ್ಟಿತು. ವಾತಾವರಣ ಬಿಗಡಾಯಿಸಿ ಸಂಘರ್ಷ ಶುರುವಾಗಿಯಿತು. ಅಷ್ಟರಲ್ಲಿ ಪೊಲೀಸರಿಗೆ ವಿಷಯ ಗೊತ್ತಾಗಿತ್ತು. ಪೊಲೀಸರು ಬಂದು ಬಸ್ ಠಾಣೆಗೆ ಒಯ್ದರು. ಯುವಕ ಯುವತಿಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ; ಅವರ ಮೋಬೈಲ್ ಪರಿಶೀಲಿಸಿದ್ದಾರೆ. ಕಂಡಕ್ಟರ್-ಡ್ರೈವರ್‌ರ ಪ್ರಶ್ನಿಸಿದ್ದಾರೆ. ಹುಡುಗ ಮತ್ತು ಯುವತಿಯರಿಗೆ ಯಾವುದೆ ಸ್ನೇಹ-ಸಂಬಂಧ ಇಲ್ಲವೆಂಬುದು ಪಕ್ಕಾ ಆಗಿದೆ. ನಂತರವಷ್ಟೇ ಹುಡುಗಿಯನ್ನು ಅದೇ ಬಸ್ಸಿನಲ್ಲಿ ಮತ್ತು ಹುಡುಗನನ್ನು ಬೇರೆ ಬಸ್ಸಿನಲ್ಲಿ ಬೆಂಗಳೂರಿಗೆ ಕಳಿಸಲಾಯಿತು.

ಇದರಿಂದ ಹಿಂಜಾವೆಯವರಿಗೆ ಸಮಾಧಾನವಾಗಲಿಲ್ಲ. ಹುಡುಗನ ಮೇಲೆ ಕೇಸು ಹಾಕಿ, ನಾಲ್ಕು ಬೆತ್ತ ಹಾಕಲು ಒತ್ತಡ ಹಾಕಲಾಯಿತೆನ್ನಲಾಗಿದೆ. ಆದರೆ ಉದ್ದೇಶ ಈಡೇರದೆ ಹಿಂಜಾವೆಯವರು ಪೊಲೀಸರ ಮೇಲೆಯೆ ತಿರುಗಿಬಿದ್ದರೆಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಆಡಳಿತ ಪಕ್ಷದ ಬೆಂಬಲಿಗರಾದ್ದರಿಂದ ಮುಲಾಜಿಗೆಬಿದ್ದ ಪೊಲೀಸರು ಮತ್ತೆ ಹಿಂಜಾವೆಯವರನ್ನು ಕರೆದು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಆದರು ಹಿಂಜಾವೆ ಕಾರ್ಯಕರ್ತರು ಅವಾಚ್ಯವಾಗಿ ನಿಂದಿಸುತ್ತ ಹೋದರೆನ್ನಲಾಗಿದ್ದು, ಸಾರ್ವಜನಿಕರಲ್ಲಿ ಸುಳ್ಯ ಮತ್ತು ಪುತ್ತೂರಿನಲ್ಲಿ ಸಂಘಪರಿವಾರದವರು ವರ್ತಿಸಿದ ರೀತಿ-ನೀತಿಯ ಬಗ್ಗೆ ಅಸಹ್ಯ-ಆಕ್ರೋಶ ಮೂಡಿಸಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: 18 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...