Homeಕರ್ನಾಟಕಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯ ಕೋಮು ಸೂಕ್ಷ್ಮ ಊರುಗಳೆಂಬ ಆತಂಕ ಎರಡು-ಮೂರು ದಶಕದಿಂದ ಕಾಡುತ್ತಿದೆ. ವೈಯಕ್ತಿಕ ಸಣ್ಣ-ಪುಟ್ಟ ಗಲಾಟೆ ನೋಡು-ನೋಡುತ್ತಿದ್ದಂತೆ ಕೋಮು ಕಲಹವಾಗಿ ಊರೂರೆ ಹೊತ್ತಿ ಉರಿವ ಸ್ವಭಾವದ ತಾಲೂಕುಗಳಿವು! ಇಲ್ಲಿ ನಡೆದ ದೊಂಬಿ-ಗಲಭೆಗೆ ಲೆಕ್ಕವೇ ಇಲ್ಲ. ಇಂಥ ಹಿನ್ನಲೆಯ ಪುತ್ತೂರು-ಸುಳ್ಯದಲ್ಲಿ ಇದ್ದಕ್ಕಿದ್ದಂತೆ ಅನೈತಿಕ ಪೊಲೀಸ್‌ಗಿರಿ ಬಿರುಸುಗೊಂಡಿರುವುದು ಜನಸಾಮಾನ್ಯರನ್ನು ಕಂಗಾಲಾಗಿಸಿಬಿಟ್ಟಿದೆ. ಹತ್ತಿರದಲ್ಲಿರುವ ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯ ರಂಗತಾಲೀಮು ಇದೆಂಬ ಶಂಕೆ ಶುರುವಾಗಿದೆ. ಕೋವಿಡ್-19ರ ಸತತ ಲಾಕ್‌ಡೌನ್‌ನಿಂದ ತುತ್ತು ಕೂಳಿಗೂ ತತ್ವಾರ ಬಂದಿರುವ ಈ ಸಂದರ್ಭದಲ್ಲಿ ಕೋಮು ಗಲಭೆಯೆನಾದರೂ ಆಗಿಬಿಟ್ಟರೆ ಬದುಕು ಬರ್ಬಾದ್ ಎಂಬ ಆತಂಕದಲ್ಲಿವೆ ದುಡಿದು ತಿನ್ನುವ ಜೀವಗಳು..

ಪುತ್ತೂರು ಮತ್ತು ಸುಳ್ಯದಲ್ಲಿ ಕಳೆದೊಂದು ವಾರದಲ್ಲಿ ಒಂದರ ಹಿಂದೊಂದರಂತೆ ಎರಡು ಮತಾಂಧ ಸಂಘರ್ಷಗಳು ಆಗಿಹೋಗಿವೆ. ಈ ದುರ್ಘಟನೆ ನಂತರ ಮುಂದೇನು ಕಾದಿದೆಯೋ ಎಂಬ ಭಯಕ್ಕೆ ಜನರು ಬಿದ್ದಿದ್ದಾರೆ. ಆಗಸ್ಟ್ 15ರಂದು ಪುತ್ತೂರಿನ ಕಬಕ ಎಂಬಲ್ಲಿ ಸಂಘಪರಿವಾರಿಗಳು ಹಾಗು ಎಸ್‌ಡಿಪಿಐ ಬಳಗದ ನಡುವೆ ಗಲಾಟೆಯಾಗಿದೆ. ಕಬಕದ ಬಿಜೆಪಿ ಆಡಳಿತದ ಗ್ರಾಮ ಪಂಚಾಯತ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ-ಮನೆಗೆ ಸ್ವಾತಂತ್ರ್ಯ ಸಂದೇಶ ತಲುಪಿಸುವ ಹೆಸರಲ್ಲಿ ರಥಯಾತ್ರೆ ಆಯೋಜಿಸಿತ್ತು. ಈ ರಥದಲ್ಲಿ ಆರ್‌ಎಸ್‌ಎಸ್ ದಿಗ್ಗಜನಾಗಿದ್ದ ಸಾರ್ವರ್ಕರ್ ಪೋಟೋ ಇಡಲಾಗಿತ್ತು. ಈ ರಥ ಯಾತ್ರೆ ಕಬಕದಾಚೆಯ ಪುತ್ತೂರು ನಗರದಲ್ಲೂ ಸುತ್ತಾಡಿಸುವ ಪ್ಲಾನು ಸಂಘಪರಿವಾರದವರು ಹಾಕಿಕೊಂಡಿದ್ದರು.

PC : The Quint

ಇದು ಕಬಕ-ಪುತ್ತೂರು ಭಾಗದಲ್ಲಿ ಒಂದಿಷ್ಟು ಬೇರು ಬಿಟ್ಟಿರುವ ಎಸ್‌ಡಿಪಿಐ ಕಾರ್ಯಕರ್ತರನ್ನು ಕೆರಳಿಸಿದೆ. ಸಾರ್ವರ್ಕರ್ ಪೋಟೋ ರಥದಿಂದ ತೆಗೆಯುವಂತೆ ಹಠಹಿಡಿದಿದ್ದಾರೆ. “ಸಾರ್ವರ್ಕರ್ ಬ್ರಿಟೀಶರಿಗೆ ಶರಣಾಗಿದ್ದ ಹೇಡಿ. ಇಂಥವನ ಬದಲಿಗೆ ದೇಶ ಭಕ್ತ ಟಿಪ್ಪುಸುಲ್ತಾನ್ ಭಾವಚಿತ್ರ ಹಾಕುವಂತೆ” ಒತ್ತಾಯಿಸಿದ್ದಾರೆ. ಎರಡು ಕಡೆಯವರಿಗೆ ಕೈಕೈ ಮಿಲಾಯಿಸುವ ಜಗಳ ನಡೆದಿದೆ. ಪೊಲೀಸರ ಪ್ರವೇಶವಾಗಿ ಎರಡು -ಮೂರು ಎಸ್‌ಡಿಪಿಐ ಮುಂದಾಳುಗಳ ಬಂಧಿಸಲಾಯಿತು. ಆ ಬಳಿಕ ಆ ರಥ ಊರೆಲ್ಲ ಸುತ್ತು ಹಾಕಿ ಪುತ್ತೂರು ಪೇಟೆಯಲ್ಲಿ ಸಂಚಾರ ನಡೆಸಿದೆ. ಇತ್ತ ಎಸ್‌ಡಿಪಿಐ ಪೊಲೀಸ್ ಠಾಣೆಗೆ ಮತ್ತಿಗೆ ಹಾಕಿತು. ಸಂಸದ-ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರ್ ಎಸ್‌ಡಿಪಿಐಗೆ ಬುದ್ದಿ ಕಲಿಸುವುದಾಗಿ ಹೇಳಿಕೆ ಕೊಟ್ಟರು. ಬಿಜೆಪಿಗರು ಎಸ್‌ಡಿಪಿಐ ನಿಶೇಧಿಸುವಂತೆ ಆಗ್ರಹಿಸಿದರು. ಕೇಂದ್ರ-ರಾಜ್ಯ ಎರಡು ಬಿಜೆಪಿಯೇ ಅಧಿಕಾರದಲ್ಲಿರುವಾಗ ಆ ಪಾರ್ಟಿಯ ದೊಡ್ಡವರೆ ಎಸ್‌ಡಿಪಿಐ ನಿಷೇಧಿಸವಂತೆ ಹೇಳುವುದು ಹಾಸ್ಯಾಸ್ಪದವೆಂದು ಜನರು ನಗುತ್ತಿದ್ದಾರೆ.

ಬಂಧಿತ ಎಸ್‌ಡಿಪಿಐ ನಾಯಕರು ಒಂದೇ ದಿನದಲ್ಲಿ ಜಾಮೀನಲ್ಲಿ ಹೋರಬಂದರು; ಅವರಿಗೆ ಎಸ್‌ಡಿಪಿಐ ಸಂಘಟನೆ ವೀರೋಚಿತ ಸ್ವಾಗತ ನೀಡಿತು; ಎಸ್‌ಡಿಪಿಐ ಪ್ರತಿಭಟನಾ ಮೆರವಣಿಗೆ ಮಾಡಿತು. ಕೆಲ ಖಟ್ಟರ್ ಹಿಂದೂತ್ವವಾದಿಗಳು ತಮ್ಮ ನಾಯಕರ ದೌರ್ಬಲ್ಯದಿಂದ ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ದುರ್ಬಲ ಕೇಸು ಬೀಳುವಂತಾಯಿತೆಂದು ಟ್ರೋಲ್ ಮಾಡಿ ಆಕ್ರೋಶ ಹೊರಹಾಕಿದರು. ಇಲ್ಲಿ ಸಹಜವಾದ ಎರಡು ಪ್ರಶ್ನೆಗಳೆದ್ದು ಪ್ರಜ್ಞಾವಂತರ ತಲೆತಿನ್ನುತ್ತಿದೆ! ಗಡಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕೋವಿಡ್ ಶಿಷ್ಟಾಚಾರದ ನಿರ್ಬಂಧವಿರುವಾಗ ಬಿಜೆಪಿಗರಿಗೆ ರಥ ಸಂಚಾರಕ್ಕೆ ಪರವಾನಗಿ ಕೊಟ್ಟಿದ್ಯಾರು? ಅದು ಕಬಕ ದಾಟಿ ಪುತ್ತೂರು ಪ್ರವೇಶಿಸಲು ಪೊಲೀಸರು ಅವಕಾಶ ಹೇಗೆ ಕೊಟ್ಟರು? ಎಸ್‌ಡಿಪಿಐ ಪ್ರತಿಭಟನಾ ಮೆರವಣಿಗೆಗೆ ಅವಕಾಶ ಸಿಕಿದ್ದು ಹೇಗೆ? ಈ ಪ್ರಶ್ನೆಗಳೆಲ್ಲ ಉತ್ತರವಿಲ್ಲದೆ ಹಾಗೆ ಉಳಿದುಕೊಂಡಿದ್ದು, ಜಿಲ್ಲಾಡಳಿತದ ವೈಫಲ್ಯ ಪತ್ತೂರಿಗೆ ಗಂಡಾಂತಕಾರಿಯಾಗಿದೆಯೆಂದು ವಿಶ್ಲೇಷಿಸಲಾಗುತ್ತಿದೆ!

ಪುತ್ತೂರಿನ ಸ್ಥಿತಿ ಬೂದಿ ಮಚ್ಚಿದ ಕೆಂಡದಂತಿರುವಾಗಲೆ ಪಕ್ಕದ ಸುಳ್ಯದಲ್ಲಿ ಅನೈತಿಕ ಪೂಲೀಸ್‌ಗಿರಿಯ ಅಟ್ಟಹಾಸ ನಡೆದಿದೆ! ಹಿಂದು ಜಾಗರಣಾ ವೇದಿಕೆಯ ನೈತಿಕ ಪಾಠ ಬೋಧನೆಯ ಆರ್ಭಟಕ್ಕೆ ಅಮಾಯಕ ಹಿಂದು ಹುಡುಗಿಯರಿಬ್ಬರಿಗೆ ಕಿರುಕುಳ ಮತ್ತು ಮುಸ್ಲಿಮ್ ಹುಡುಗನ ಪ್ರಾಣ ಸಂಕಟಕ್ಕೀಡಾಗಿತ್ತೆಂದು ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಯಾವುದೋ ಕೆಲಸಕ್ಕೆಂದು ಪುತ್ತೂರಿಗೆ ಬಂದಿದ್ದ ಬೆಂಗಳೂರಿನ ಹುಡುಗಿಯರು ವಾಪಸಾಗುತ್ತಿದ್ದರು. ಪುತ್ತೂರಿಂದ ಬೆಂಗಳೂರಿಗೆ ಹೊರಟಿದ್ದ ಈ ಸರ್ಕಾರಿ ಬಸ್‌ನಲ್ಲಿ ಕುಂಬ್ರಕ್ಕೆ ಮುಸ್ಲಿಂ ಹುಡುನೊಬ್ಬ ಕುಂಬ್ರಕ್ಕೆ ಹೋಗುತ್ತಿದ್ದ. ಬೆಂಗಳೂರಿಂದ ಕರೆಬಂದಿದ್ದರಿಂದ ಆತ ಕುಂಬ್ರದಲ್ಲಿ ಇಳಿಯದೆ ಬೆಂಗಳೂರಿಗೆ ಟಿಕೆಟ್ ಪಡೆದಿದ್ದಾನೆ. ಸಂದರ್ಭೋಚಿತವಾಗಿ ಆ ಹುಡುಗ ಹಾಗು ಹುಡುಗಿಯರ ಒಂದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ.

ಇದನ್ನು ಬಸ್‌ನಲ್ಲಿದ್ದ ಹಿಂದು ಜಾಗರಣಾ ವೇದಿಕೆಯ ಸದಸ್ಯನೊಬ್ಬ ಸಂಶಯದಿಂದಲೇ ನೋಡುತ್ತಿದ್ದ. ತಕ್ಷಣ ಆತ ತನ್ನ ಸಹಚರರಿಗೆ ತಾನು ಅರ್ಥೈಸಿಕೊಡ್ಡದ್ದನ್ನು ಪೋನ್‌ನಲ್ಲಿ ವಿವರಿಸಿದ್ದಾನೆ. ಹಿಂದು ಜಾಗರಣಾ ವೇದಿಕೆ, ಬಜರಂಗದಳದ ಕಾರ್ಯಕರ್ತರು ಆನೆಗುಂಡಿ ಎಂಬಲ್ಲಿ ಬಸ್ ಅಡ್ಡ ಹಾಕಿದ್ದಾರೆ. ಹಿಂದು ಜಾಗರಣಾ ವೇದಿಕೆಯ ದೊಡ್ಡ ಗುಂಪು ಆ ಹುಡುಗ-ಹುಡುಗಿಯರಿಗೆ ಮುತ್ತಿಗೆ ಹಾಕಿ ರಂಪವೆಬ್ಬಿಸಿದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರು, ಬಸ್ ಕಂಡಕ್ಟರ್ ಮತ್ತು ಚಾಲಕ ಅವರು ಅಪರಿಚಿತರು, ಒಟ್ಟಾಗಿ ಪ್ರಯಾಣಿಸುತ್ತಿಲ್ಲವೆಂದು ತಿಳಿಹೇಳಿದರು ಆವೇಶದಲ್ಲಿದ್ದ ಹಿಂಜಾವೆ ತಂಡ ಕೇಳಲಿಲ್ಲ. ಇದು ಅನೈತಿಕ ಟ್ರಿಪ್ ಎಂದು ದಾಂಧಲೆ ಎಬ್ಬಿಸಿಬಿಟ್ಟರು ಆ ನಡು ರಾತ್ರಿಯಲ್ಲಿ!ಬಸ್ ಪೊಲೀಸ್ ಠಾಣೆಗೆ ಒಯ್ಯುವಂತೆ ಬಲವಂತಪಡಿಸಿದರು. ಬಸ್ಸು ಠಾಣೆಯತ್ತ ತೆರಳುತ್ತಿದ್ದಾಗ ಹಿಂಜಾವೆ ತಂಡ ಕಾರಲ್ಲಿ ಹಿಂಬಾಲಿಸಿದೆ.

PC : DNA India

ಬಸ್ ನಲ್ಲಿದ್ದ ಮುಸ್ಲಿಂ ಹುಡುಗ ಪೈಜಾರಿನಲ್ಲಿ ಇಳಿದು ತನ್ನವರಿಗೆ ಸುದ್ದಿ ಮುಟ್ಟಿಸಿದ್ದಾನೆ. ಇದ್ದಕ್ಕಿದ್ದಂತೆ ಮುಸ್ಲಿಮರ ದೊಡ್ಡ ಗುಂಪು ಜಮೆಯಾಗಿಬಿಟ್ಟಿತು. ವಾತಾವರಣ ಬಿಗಡಾಯಿಸಿ ಸಂಘರ್ಷ ಶುರುವಾಗಿಯಿತು. ಅಷ್ಟರಲ್ಲಿ ಪೊಲೀಸರಿಗೆ ವಿಷಯ ಗೊತ್ತಾಗಿತ್ತು. ಪೊಲೀಸರು ಬಂದು ಬಸ್ ಠಾಣೆಗೆ ಒಯ್ದರು. ಯುವಕ ಯುವತಿಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ; ಅವರ ಮೋಬೈಲ್ ಪರಿಶೀಲಿಸಿದ್ದಾರೆ. ಕಂಡಕ್ಟರ್-ಡ್ರೈವರ್‌ರ ಪ್ರಶ್ನಿಸಿದ್ದಾರೆ. ಹುಡುಗ ಮತ್ತು ಯುವತಿಯರಿಗೆ ಯಾವುದೆ ಸ್ನೇಹ-ಸಂಬಂಧ ಇಲ್ಲವೆಂಬುದು ಪಕ್ಕಾ ಆಗಿದೆ. ನಂತರವಷ್ಟೇ ಹುಡುಗಿಯನ್ನು ಅದೇ ಬಸ್ಸಿನಲ್ಲಿ ಮತ್ತು ಹುಡುಗನನ್ನು ಬೇರೆ ಬಸ್ಸಿನಲ್ಲಿ ಬೆಂಗಳೂರಿಗೆ ಕಳಿಸಲಾಯಿತು.

ಇದರಿಂದ ಹಿಂಜಾವೆಯವರಿಗೆ ಸಮಾಧಾನವಾಗಲಿಲ್ಲ. ಹುಡುಗನ ಮೇಲೆ ಕೇಸು ಹಾಕಿ, ನಾಲ್ಕು ಬೆತ್ತ ಹಾಕಲು ಒತ್ತಡ ಹಾಕಲಾಯಿತೆನ್ನಲಾಗಿದೆ. ಆದರೆ ಉದ್ದೇಶ ಈಡೇರದೆ ಹಿಂಜಾವೆಯವರು ಪೊಲೀಸರ ಮೇಲೆಯೆ ತಿರುಗಿಬಿದ್ದರೆಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಆಡಳಿತ ಪಕ್ಷದ ಬೆಂಬಲಿಗರಾದ್ದರಿಂದ ಮುಲಾಜಿಗೆಬಿದ್ದ ಪೊಲೀಸರು ಮತ್ತೆ ಹಿಂಜಾವೆಯವರನ್ನು ಕರೆದು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಆದರು ಹಿಂಜಾವೆ ಕಾರ್ಯಕರ್ತರು ಅವಾಚ್ಯವಾಗಿ ನಿಂದಿಸುತ್ತ ಹೋದರೆನ್ನಲಾಗಿದ್ದು, ಸಾರ್ವಜನಿಕರಲ್ಲಿ ಸುಳ್ಯ ಮತ್ತು ಪುತ್ತೂರಿನಲ್ಲಿ ಸಂಘಪರಿವಾರದವರು ವರ್ತಿಸಿದ ರೀತಿ-ನೀತಿಯ ಬಗ್ಗೆ ಅಸಹ್ಯ-ಆಕ್ರೋಶ ಮೂಡಿಸಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: 18 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...