Homeಕರ್ನಾಟಕಕೋಲಾರ: ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಾಂಶುಪಾಲೆ ಸೇರಿ ಇಬ್ಬರ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೋಲಾರ: ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಾಂಶುಪಾಲೆ ಸೇರಿ ಇಬ್ಬರ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ ನಾಪತ್ತೆಯಾಗಿರುವ ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್‌ಗಾಗಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.

ಶಾಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮಕ್ಕಳಿಂದ ಶೌಚ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ ಬಯಲಾಗುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳ ವಿರುದ್ಧ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಘಟನೆಯ ವಿವರ:

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು ಸ್ವಚ್ಛತೆ ಮಾಡಿಸಿದ್ದರು. ಈ ಕುರಿತ ಪೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು.

ಇದಲ್ಲದೆ ವೈರಲ್‌ ಆಗಿರುವ ವಿಡಿಯೋವೊಂದರಲ್ಲಿ ಶಾಲಾ ವಿದ್ಯಾರ್ಥಿಯೋರ್ವ, ನಾವು ಐದಾರು ಮಂದಿ ಇದ್ದೆವು. ಶೌಚ ಗುಂಡಿಗೆ ಇಳಿಸಿ ಕಸ ತೆಗೆಸಿದರು. ನಾವು ಬಕೆಟ್‌ಗಳಲ್ಲಿ ಕಸ ತುಂಬಿ ಕೊಟ್ಟೆವು. ಕೆಲವರು ಮೇಲಿಂದ ನೀರು ಹಾಕಿದರು. ಇಲ್ಲಿ ವಿಪರೀತ ಹಿಂಸೆ ಕೊಡುತ್ತಾರೆ. ನಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳುವುದು ಸೆರೆಯಾಗಿತ್ತು. ಈ ಕುರಿತ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಶಾಲೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ ಅವರು ವಸತಿ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದು, ಮಕ್ಕಳನ್ನು ಈ ರೀತಿಯ ಕೆಲಸಕ್ಕೆ ಬಳಸಿಕೊಂಡಿರುವುದು ತಪ್ಪು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಅವರು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದು, ಮಕ್ಕಳಲ್ಲಿ ಈ ರೀತಿಯ ಕೆಲಸ ಇನ್ನು ಮಾಡಿಸಬಾರದು ಎಂದು ಎಚ್ಚರಿಕೆ ನೀಡಿದ್ದರು. ಇದಲ್ಲದೆ ಮಕ್ಕಳಲ್ಲಿ ಶೌಚ ಗುಂಡಿ ಶುಚಿ ಗೊಳಿಸಿದ ಮತ್ತು ಮಕ್ಕಳಿಗೆ ಚಿತ್ರಹಿಂಸೆ ಕೊಟ್ಟ ಶಿಕ್ಷಕರ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದರು.

ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ರಿಂದ 10ನೇ ತರಗತಿಯ 250 ಮಕ್ಕಳು ಓದುತ್ತಿದ್ದರು. ಕೆಲ ಮಕ್ಕಳನ್ನು ಶೌಚ ಗುಂಡಿಯೊಳಗೆ ಇಳಿಸಿ ಸ್ವಚ್ಛತಾ ಕಾರ್ಯವನ್ನು ನಡೆಲಾಗಿದೆ. ಇದಲ್ಲದೆ ಮಕ್ಕಳಿಗೆ ವಸತಿ ನಿಲಯದಲ್ಲಿ ಚಿತ್ರಹಿಂಸೆ ನೀಡುವ ವಿಡಿಯೋಗಳು ಕೂಡ ವೈರಲ್‌ ಆಗಿತ್ತು. ರಾತ್ರಿ ಲೈಟ್ ಆಫ್ ಮಾಡಿ ಬ್ಯಾಗ್ ಸಮೇತ ಮಕ್ಕಳನ್ನು ಹಾಸ್ಟೆಲ್ ಹೊರಗಡೆ ಮಂಡಿಯೂರಿ ಕೂರಿಸಿ ಶಿಕ್ಷೆ ಕೊಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಘಟನೆಯ ವಿಡಿಯೋವನ್ನು ಸಹ ಶಿಕ್ಷಕರರೋರ್ವರು ಮಾಡಿ ವೈರಲ್‌ ಮಾಡಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರೋಪಿತ ಶಿಕ್ಷಕರ ವಿರುದ್ಧ ಕ್ರಮಕ್ಕೆ ವ್ಯಾಪಕ ಆಗ್ರಹ ಕೇಳಿ ಬಂದಿತ್ತು.

ಮಕ್ಕಳ ಕೈಯ್ಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸಿರುವುದು ಅಬಾಲಿಶನ್ ಆಫ್ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಆ್ಯಕ್ಟ್-1993ರ ಉಲ್ಲಂಘನೆ ಆಗಿದೆ. ಆದರೆ ಸ್ವಚ್ಛತಾ ಅಂದೋಲನದ ಭಾಗವಾಗಿ ಚೇಂಬರ್ ಒಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ. ಅದು ಮಲದ ಗುಂಡಿ ಅಲ್ಲ ಎಂದು ಕೂಡ ಶಿಕ್ಷಕರು ಈ ಬಗ್ಗೆ ಸಮಜಾಯಿಸಿ ನೀಡಿದ್ದರು. ಇದಲ್ಲದೆ ಶಾಲೆಯಲ್ಲಿ ಮಾರೇಶ್​ ಮತ್ತು ಚಿತ್ರಕಲಾ ಶಿಕ್ಷಕ ಮುನಿಯಪ್ಪರಿಂದ ಗುಂಪುಗಾರಿಕೆ ನಡೆದಿದೆ ಎಂದು ಪ್ರಾಂಶುಪಾಲೆ ಭಾರತಮ್ಮ ಆರೋಪಿಸಿದ್ದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ:
ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕನನ್ನು ಬಂಧಿಸಿರುವುದನ್ನು ಖಂಡಿಸಿ ಶಾಲೆಯ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಮಕ್ಕಳು ಪ್ರತಿಭಟನೆ ಆರಂಭಿಸಿದ್ದು, ಶಿಕ್ಷಕರ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳು, ಊಟ ತಿಂಡಿ ಬಿಟ್ಟು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...