Homeಕರ್ನಾಟಕಕೋಲಾರ: ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಾಂಶುಪಾಲೆ ಸೇರಿ ಇಬ್ಬರ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೋಲಾರ: ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಾಂಶುಪಾಲೆ ಸೇರಿ ಇಬ್ಬರ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ ನಾಪತ್ತೆಯಾಗಿರುವ ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್‌ಗಾಗಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.

ಶಾಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮಕ್ಕಳಿಂದ ಶೌಚ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ ಬಯಲಾಗುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳ ವಿರುದ್ಧ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಘಟನೆಯ ವಿವರ:

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು ಸ್ವಚ್ಛತೆ ಮಾಡಿಸಿದ್ದರು. ಈ ಕುರಿತ ಪೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು.

ಇದಲ್ಲದೆ ವೈರಲ್‌ ಆಗಿರುವ ವಿಡಿಯೋವೊಂದರಲ್ಲಿ ಶಾಲಾ ವಿದ್ಯಾರ್ಥಿಯೋರ್ವ, ನಾವು ಐದಾರು ಮಂದಿ ಇದ್ದೆವು. ಶೌಚ ಗುಂಡಿಗೆ ಇಳಿಸಿ ಕಸ ತೆಗೆಸಿದರು. ನಾವು ಬಕೆಟ್‌ಗಳಲ್ಲಿ ಕಸ ತುಂಬಿ ಕೊಟ್ಟೆವು. ಕೆಲವರು ಮೇಲಿಂದ ನೀರು ಹಾಕಿದರು. ಇಲ್ಲಿ ವಿಪರೀತ ಹಿಂಸೆ ಕೊಡುತ್ತಾರೆ. ನಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳುವುದು ಸೆರೆಯಾಗಿತ್ತು. ಈ ಕುರಿತ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಶಾಲೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ ಅವರು ವಸತಿ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದು, ಮಕ್ಕಳನ್ನು ಈ ರೀತಿಯ ಕೆಲಸಕ್ಕೆ ಬಳಸಿಕೊಂಡಿರುವುದು ತಪ್ಪು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಅವರು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದು, ಮಕ್ಕಳಲ್ಲಿ ಈ ರೀತಿಯ ಕೆಲಸ ಇನ್ನು ಮಾಡಿಸಬಾರದು ಎಂದು ಎಚ್ಚರಿಕೆ ನೀಡಿದ್ದರು. ಇದಲ್ಲದೆ ಮಕ್ಕಳಲ್ಲಿ ಶೌಚ ಗುಂಡಿ ಶುಚಿ ಗೊಳಿಸಿದ ಮತ್ತು ಮಕ್ಕಳಿಗೆ ಚಿತ್ರಹಿಂಸೆ ಕೊಟ್ಟ ಶಿಕ್ಷಕರ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದರು.

ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ರಿಂದ 10ನೇ ತರಗತಿಯ 250 ಮಕ್ಕಳು ಓದುತ್ತಿದ್ದರು. ಕೆಲ ಮಕ್ಕಳನ್ನು ಶೌಚ ಗುಂಡಿಯೊಳಗೆ ಇಳಿಸಿ ಸ್ವಚ್ಛತಾ ಕಾರ್ಯವನ್ನು ನಡೆಲಾಗಿದೆ. ಇದಲ್ಲದೆ ಮಕ್ಕಳಿಗೆ ವಸತಿ ನಿಲಯದಲ್ಲಿ ಚಿತ್ರಹಿಂಸೆ ನೀಡುವ ವಿಡಿಯೋಗಳು ಕೂಡ ವೈರಲ್‌ ಆಗಿತ್ತು. ರಾತ್ರಿ ಲೈಟ್ ಆಫ್ ಮಾಡಿ ಬ್ಯಾಗ್ ಸಮೇತ ಮಕ್ಕಳನ್ನು ಹಾಸ್ಟೆಲ್ ಹೊರಗಡೆ ಮಂಡಿಯೂರಿ ಕೂರಿಸಿ ಶಿಕ್ಷೆ ಕೊಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಘಟನೆಯ ವಿಡಿಯೋವನ್ನು ಸಹ ಶಿಕ್ಷಕರರೋರ್ವರು ಮಾಡಿ ವೈರಲ್‌ ಮಾಡಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರೋಪಿತ ಶಿಕ್ಷಕರ ವಿರುದ್ಧ ಕ್ರಮಕ್ಕೆ ವ್ಯಾಪಕ ಆಗ್ರಹ ಕೇಳಿ ಬಂದಿತ್ತು.

ಮಕ್ಕಳ ಕೈಯ್ಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸಿರುವುದು ಅಬಾಲಿಶನ್ ಆಫ್ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಆ್ಯಕ್ಟ್-1993ರ ಉಲ್ಲಂಘನೆ ಆಗಿದೆ. ಆದರೆ ಸ್ವಚ್ಛತಾ ಅಂದೋಲನದ ಭಾಗವಾಗಿ ಚೇಂಬರ್ ಒಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ. ಅದು ಮಲದ ಗುಂಡಿ ಅಲ್ಲ ಎಂದು ಕೂಡ ಶಿಕ್ಷಕರು ಈ ಬಗ್ಗೆ ಸಮಜಾಯಿಸಿ ನೀಡಿದ್ದರು. ಇದಲ್ಲದೆ ಶಾಲೆಯಲ್ಲಿ ಮಾರೇಶ್​ ಮತ್ತು ಚಿತ್ರಕಲಾ ಶಿಕ್ಷಕ ಮುನಿಯಪ್ಪರಿಂದ ಗುಂಪುಗಾರಿಕೆ ನಡೆದಿದೆ ಎಂದು ಪ್ರಾಂಶುಪಾಲೆ ಭಾರತಮ್ಮ ಆರೋಪಿಸಿದ್ದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ:
ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕನನ್ನು ಬಂಧಿಸಿರುವುದನ್ನು ಖಂಡಿಸಿ ಶಾಲೆಯ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಮಕ್ಕಳು ಪ್ರತಿಭಟನೆ ಆರಂಭಿಸಿದ್ದು, ಶಿಕ್ಷಕರ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳು, ಊಟ ತಿಂಡಿ ಬಿಟ್ಟು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...