Homeಕರ್ನಾಟಕಕೋಲಾರ: ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಾಂಶುಪಾಲೆ ಸೇರಿ ಇಬ್ಬರ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೋಲಾರ: ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಾಂಶುಪಾಲೆ ಸೇರಿ ಇಬ್ಬರ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ ನಾಪತ್ತೆಯಾಗಿರುವ ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್‌ಗಾಗಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.

ಶಾಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮಕ್ಕಳಿಂದ ಶೌಚ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ ಬಯಲಾಗುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳ ವಿರುದ್ಧ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಘಟನೆಯ ವಿವರ:

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು ಸ್ವಚ್ಛತೆ ಮಾಡಿಸಿದ್ದರು. ಈ ಕುರಿತ ಪೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು.

ಇದಲ್ಲದೆ ವೈರಲ್‌ ಆಗಿರುವ ವಿಡಿಯೋವೊಂದರಲ್ಲಿ ಶಾಲಾ ವಿದ್ಯಾರ್ಥಿಯೋರ್ವ, ನಾವು ಐದಾರು ಮಂದಿ ಇದ್ದೆವು. ಶೌಚ ಗುಂಡಿಗೆ ಇಳಿಸಿ ಕಸ ತೆಗೆಸಿದರು. ನಾವು ಬಕೆಟ್‌ಗಳಲ್ಲಿ ಕಸ ತುಂಬಿ ಕೊಟ್ಟೆವು. ಕೆಲವರು ಮೇಲಿಂದ ನೀರು ಹಾಕಿದರು. ಇಲ್ಲಿ ವಿಪರೀತ ಹಿಂಸೆ ಕೊಡುತ್ತಾರೆ. ನಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳುವುದು ಸೆರೆಯಾಗಿತ್ತು. ಈ ಕುರಿತ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಶಾಲೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ ಅವರು ವಸತಿ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದು, ಮಕ್ಕಳನ್ನು ಈ ರೀತಿಯ ಕೆಲಸಕ್ಕೆ ಬಳಸಿಕೊಂಡಿರುವುದು ತಪ್ಪು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಅವರು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದು, ಮಕ್ಕಳಲ್ಲಿ ಈ ರೀತಿಯ ಕೆಲಸ ಇನ್ನು ಮಾಡಿಸಬಾರದು ಎಂದು ಎಚ್ಚರಿಕೆ ನೀಡಿದ್ದರು. ಇದಲ್ಲದೆ ಮಕ್ಕಳಲ್ಲಿ ಶೌಚ ಗುಂಡಿ ಶುಚಿ ಗೊಳಿಸಿದ ಮತ್ತು ಮಕ್ಕಳಿಗೆ ಚಿತ್ರಹಿಂಸೆ ಕೊಟ್ಟ ಶಿಕ್ಷಕರ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದರು.

ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ರಿಂದ 10ನೇ ತರಗತಿಯ 250 ಮಕ್ಕಳು ಓದುತ್ತಿದ್ದರು. ಕೆಲ ಮಕ್ಕಳನ್ನು ಶೌಚ ಗುಂಡಿಯೊಳಗೆ ಇಳಿಸಿ ಸ್ವಚ್ಛತಾ ಕಾರ್ಯವನ್ನು ನಡೆಲಾಗಿದೆ. ಇದಲ್ಲದೆ ಮಕ್ಕಳಿಗೆ ವಸತಿ ನಿಲಯದಲ್ಲಿ ಚಿತ್ರಹಿಂಸೆ ನೀಡುವ ವಿಡಿಯೋಗಳು ಕೂಡ ವೈರಲ್‌ ಆಗಿತ್ತು. ರಾತ್ರಿ ಲೈಟ್ ಆಫ್ ಮಾಡಿ ಬ್ಯಾಗ್ ಸಮೇತ ಮಕ್ಕಳನ್ನು ಹಾಸ್ಟೆಲ್ ಹೊರಗಡೆ ಮಂಡಿಯೂರಿ ಕೂರಿಸಿ ಶಿಕ್ಷೆ ಕೊಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಘಟನೆಯ ವಿಡಿಯೋವನ್ನು ಸಹ ಶಿಕ್ಷಕರರೋರ್ವರು ಮಾಡಿ ವೈರಲ್‌ ಮಾಡಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರೋಪಿತ ಶಿಕ್ಷಕರ ವಿರುದ್ಧ ಕ್ರಮಕ್ಕೆ ವ್ಯಾಪಕ ಆಗ್ರಹ ಕೇಳಿ ಬಂದಿತ್ತು.

ಮಕ್ಕಳ ಕೈಯ್ಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸಿರುವುದು ಅಬಾಲಿಶನ್ ಆಫ್ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಆ್ಯಕ್ಟ್-1993ರ ಉಲ್ಲಂಘನೆ ಆಗಿದೆ. ಆದರೆ ಸ್ವಚ್ಛತಾ ಅಂದೋಲನದ ಭಾಗವಾಗಿ ಚೇಂಬರ್ ಒಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ. ಅದು ಮಲದ ಗುಂಡಿ ಅಲ್ಲ ಎಂದು ಕೂಡ ಶಿಕ್ಷಕರು ಈ ಬಗ್ಗೆ ಸಮಜಾಯಿಸಿ ನೀಡಿದ್ದರು. ಇದಲ್ಲದೆ ಶಾಲೆಯಲ್ಲಿ ಮಾರೇಶ್​ ಮತ್ತು ಚಿತ್ರಕಲಾ ಶಿಕ್ಷಕ ಮುನಿಯಪ್ಪರಿಂದ ಗುಂಪುಗಾರಿಕೆ ನಡೆದಿದೆ ಎಂದು ಪ್ರಾಂಶುಪಾಲೆ ಭಾರತಮ್ಮ ಆರೋಪಿಸಿದ್ದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ:
ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕನನ್ನು ಬಂಧಿಸಿರುವುದನ್ನು ಖಂಡಿಸಿ ಶಾಲೆಯ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಮಕ್ಕಳು ಪ್ರತಿಭಟನೆ ಆರಂಭಿಸಿದ್ದು, ಶಿಕ್ಷಕರ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳು, ಊಟ ತಿಂಡಿ ಬಿಟ್ಟು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...